Homeಮುಖಪುಟಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯಾಗಿ ಟ್ರಾನ್ಸ್ ಯುವತಿ ಆಯ್ಕೆಯಾಗಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿಯ ಮಹಾರ್ ಸಮುದಾಯಕ್ಕೆ ಸೇರಿದ 24 ವರ್ಷದ ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ ಅವರು ಫೆಬ್ರವರಿ 25, ಶನಿವಾರದಂದು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ  ಆಯ್ಕೆಯಾದರು.

ಪ್ರಜ್ವಲ್ ಅವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ಸಂಚಾಲಕರಾಗಿದ್ದಾರೆ. ಇವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್-ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ-ದಲಿತ್ ಸ್ಟೂಡೆಂಟ್ಸ್ ಯೂನಿಯನ್ (ASA-SFI-DSU) ಪ್ಯಾನೆಲ್‌ನಿಂದ ಸ್ಪರ್ಧಿಸಿ 608 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಜೊತೆಗೆ, ಐದು ಇತರ ದಲಿತ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯದ ಆಂದೋಲನ ಚಾಲ್ತಿಯಲ್ಲಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಜ್ವಲ್ ಹೇಳಿದ್ದಾರೆ.

“ಯಾವುದೇ ಭಾರತೀಯ ವಿಶ್ವವಿದ್ಯಾನಿಲಯದ ಇತಿಹಾಸದಲ್ಲಿ, ಒಂಬತ್ತು ಹುದ್ದೆಗಳಲ್ಲಿ ಆರು ದಲಿತ ವಿದ್ಯಾರ್ಥಿಗಳು ಸ್ಪರ್ಧಿಸಿ ಗೆಲವು ಕಂಡಿಲ್ಲ, ಜಾತಿ ವಿರೋಧಿ ಚಳವಳಿಯ ಇತಿಹಾಸದಲ್ಲಿ ಇದೊಂದು ವಿಜಯದ ಕ್ಷಣವಾಗಿದೆ” ಎಂದು ಪ್ರಜ್ವಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ

ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ ಮತ್ತು ವಿದ್ಯಾರ್ಥಿಗಳ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಸೇರಿದಂತೆ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳು ಒಂಬತ್ತು ಹುದ್ದೆಗಳಿಗೆ ನಡೆಯುತ್ತವೆ.

ಪ್ರಜ್ವಲ್‌ ಅವರು ಮಹಾರಾಷ್ಟ್ರದ ನಾಸಿಕ್‌ನಿಂದ ಬಂದಿದ್ದು, ಅವರು ಜೆಂಡರ್ ಸ್ಟಡೀಸ್ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ತಂದೆ ತಾಯಿ ಅಂಬೇಡ್ಕರ್‌ವಾದಿಗಳಾಗಿದ್ದು, ಪ್ರಜ್ವಲ್‌ ಕೂಡ ಯಾವಾಗಲೂ ಅಂಬೇಡ್ಕರ್ ಸಿದ್ಧಾಂತದ ಕಡೆಗೆ ಒಲವು ತೋರುತ್ತಿದ್ದರು. ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಪದವಿ  ಓದುವ ಸಮಯದಲ್ಲಿ ತಮ್ಮ ವಿದ್ಯಾರ್ಥಿ ರಾಜಕೀಯವನ್ನು ಪ್ರಾರಂಭಿಸಿದರು. ಅಲ್ಲಿ ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆಯ ಸ್ಥಾಪಕ-ಸದಸ್ಯರಾಗಿದ್ದರು.

ಇದನ್ನೂ ಓದಿ: ಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

2019ರಲ್ಲಿ ಪ್ರಜ್ವಲ್ ಅವರು ಹೈದರಾಬಾದ್ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮಾಡಿದು, ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಈ ವೇಳೆ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನೊಂದಿಗೆ ಸಂಬಂಧ ಹೊಂದಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೇಲಿನ ತಾರತಮ್ಯದ ವಿರುದ್ಧ ಹಲವು ಹೋರಾಟಗಳನ್ನು ಮುನ್ನಡೆಸಿದ್ದಾರೆ.

”ಸಾಮಾಜಿಕ ನ್ಯಾಯದ ವಿಷಯದಲ್ಲಿ, ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯು ಇತರ ವಿಶ್ವವಿದ್ಯಾಲಯಗಳಿಗಿಂತ ಬಹಳ ಮುಂದಿದೆ. ಮೀಸಲಾತಿಗಳನ್ನು ರಕ್ಷಿಸುವುದಷ್ಟೇ ಅಲ್ಲ, ವಿದ್ಯಾರ್ಥಿಗಳ ಫೆಲೋಶಿಪ್‌ಗಾಗಿ ಹೋರಾಡುವಲ್ಲಿ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಜ್ವಲ್ ಹೇಳಿದ್ದಾರೆ.

ದಲಿತ ಸಮುದಾಯದ ಅಧ್ಯಕ್ಷರನ್ನು ಹೊಂದುವುದರ ಜೊತೆಗೆ, ವಿದ್ಯಾರ್ಥಿಗಳು ಮೊದಲ ಬಾರಿಗೆ 21 ವರ್ಷದ ಟ್ರಾನ್ಸ್ ಮಹಿಳೆ, ದಲಿತ ಸಮುದಾಯದ ಹೃತಿಕ್ ಲಕ್ಷ್ಮಣ್ ಲಾಲನ್ ಅವರನ್ನು ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಹೃತಿಕ್ ಲಕ್ಷ್ಮಣ್ ಲಾಲನ್

ಗುಜರಾತ್‌ನ ಕಚ್‌ನಿಂದ ಬಂದಿರುವ ಹೃತಿಕ್ ಅವರು ಸಮಾಜಶಾಸ್ತ್ರದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ. ಅವರು ಮೇಘವಾಲ್ ಜಾತಿಗೆ ಸೇರಿದವರು. ”ಇದೊಂದು ಐತಿಹಾಸಿಕ ಸಾಧನೆ ಎಂದು ಪುನರುಚ್ಚರಿಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದಿಂದ ನನಗೆ ದೊರೆತಿರುವ ಬೆಂಬಲ ಮತ್ತು ಗೌರವದಿಂದ ನಾನು ತುಂಬಾ ವಿನಮ್ರನಾಗಿದ್ದೇನೆ” ಎಂದು ಅವರು ತಮ್ಮ ಕೃತಜ್ಞತೆ ತಿಳಿಸಿದ್ದಾರೆ.

“ಫಲಿತಾಂಶಗಳು ಪ್ರಕಟವಾದಾಗ ನಾನು 2019 ರಲ್ಲಿ ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯಿದೆಯನ್ನು ಅಂಗೀಕರಿಸಿದ ದಿನದ ಬಗ್ಗೆ ಯೋಚಿಸುತ್ತಿದ್ದೆ. ಟ್ರಾನ್ಸ್ ವ್ಯಕ್ತಿಯ ಮೌಖಿಕ ಮತ್ತು ಲೈಂಗಿಕ ನಿಂದನೆಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾರಣವಾಗಬಹುದು ಎಂದು ಅದರ ಷರತ್ತು ಹೇಳುತ್ತದೆ. ಇದು ಮಹಿಳೆಯರ ವಿರುದ್ಧ ಮಾಡಿದ ಅದೇ ಅಪರಾಧಕ್ಕೆ ಹೋಲಿಸಿದರೆ ತೀರಾ ಕಡಿಮೆ. ಬಿಜೆಪಿ ಸರ್ಕಾರದ ಪ್ರತಿಗಾಮಿ ನೀತಿಗೆ ಉತ್ತರವಾಗಿ ನಾನು ಗೆಲುವು ಸಾರ್ಧಿಸಿದ್ದೇನೆ” ಎಂದು ಹೃತಿಕ್ ನೆನಪಿಸಿಕೊಳ್ಳುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು, ”ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಟ್ರಾನ್ಸ್ ಮಹಿಳೆಯನ್ನು ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ರೀತಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಟ್ರಾನ್ಸ್ ಮಹಿಳೆಯರನ್ನು ಗುರುತಿಸುವ ಕೆಲಸ ಆಗಬೇಕಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...