Homeಕರ್ನಾಟಕಅಡಾಸು ಕಂಪನಿಗೆ ಅಡವಿಟೇಜು ಜಾಸ್ತಿಯಂತೆ!

ಅಡಾಸು ಕಂಪನಿಗೆ ಅಡವಿಟೇಜು ಜಾಸ್ತಿಯಂತೆ!

- Advertisement -
- Advertisement -

ಕರ್ನಾಟಕದ ಹಳ್ಳಿಗಳ ಗೋಡೆಗಳ ಮೇಲೆ ಬಿಜೆಪಿಯೇ ಭರವಸೆ ಎಂಬ ವರ್ಣರಂಜಿತ ಬೋರ್ಡ್‌ಗಳು ರಾರಾಜಿಸುತ್ತಿವೆಯಲ್ಲಾ. ಎಂದಿನಂತೆ ಹಳ್ಳಿಗರು ನಿಂತು ನೋಡಿ ಓದಲು ಯತ್ನಿಸುತ್ತ ಭರವಸೆ ಎಂದರೆ ಏನು, ಅದರಲ್ಲೂ ಬಿಜೆಪಿ ಭರವಸೆ ಯಾವುದು ಎಂಬ ಚರ್ಚೆ ಆರಂಭಿಸಿದ್ದಾರೆ. ಏಕೆಂದರೆ ಭರವಸೆ ಎಂಬುದು ಕೇವಲ ಭರವಸೆ ಎಂಬಂತಾಗಿದೆ, ಅದು ನಿಜವಾದ ಮಾತಲ್ಲ. ಅದು ಸದ್ಯದಲ್ಲಿ ತಮ್ಮ ತೆವಲು ತೀರಿಸಿಕೊಳ್ಳಲು ಕೊಡುವ ಹೇಳಿಕೆ ಎಂಬುದು ಹಳ್ಳಿಗರಿಗೆ ಎಂದೋ ಅರ್ಥವಾದ ಸುಳ್ಳು. ಎಲ್ಲಕ್ಕಿಂತ ಮುಖ್ಯವಾಗಿ ಈ ಬಿಜೆಪಿ ಎಂಬುದು ಭರವಸೆ ಪಾರ್ಟಿ. ಭರವಸೆ ಎಂಬುದು ಸುಲಭವಾದ ಸುಳ್ಳು. ಏನು ಭರವಸೆ, ಯಾವ ಭರವಸೆ, ಅದು ಈಡೇರಲು ಹಾಕಿಕೊಂಡ ಕಾರ್ಯತಂತ್ರವೇನು ಎಂಬ ಯಾವ ವಿವರವೂ ಇಲ್ಲದ ಪುರೋಹಿತ ಮಂತ್ರವಿದ್ದಂತೆ ಅದು ಎಂಬುದು ಹಳ್ಳಿಗರಿಗೆ ಈಗಾಗಲೇ ಮನದಟ್ಟಾದ ಸಂಗತಿಯಾದ್ದರಿಂದ ಮೋದಿ ಪಾರ್ಟಿ ಹಳ್ಳಿಗಳ ಗೋಡೆಯ ಮೇಲೆ ಬರೆದಿರುವ ಭರವಸೆಯ ಬೋರ್ಡನ್ನು ’ಅಡಾಸು ಕಂಪನಿಗೆ ಅಡವಿಟೇಜು ಜಾಸ್ತಿಯಂತೆ’ ಎಂಬ ತೀರ್ಮಾನಕ್ಕೆ ಹಳ್ಳಿಗರು ಬಂದಾಗಿದೆಯಂತಲ್ಲಾ. ಹಳ್ಳಿ ರೈತ ಕೊಡುವ ಒಂದು ಉದಾಹರಣೆ ನೋಡಿದರೆ ಸಾಕು; ಬಸವರಾಜ ಬೊಮ್ಮಾಯಿ ಮಂಡಿಸಿದ ಅದ್ಭುತ ಬಜೆಟ್ಟಿನಲ್ಲಿ ರೈತರಿಗೆ ಐದು ಲಕ್ಷ ಬಡ್ಡಿರಹಿತ ಸಾಲ ಎಂಬ ಭರವಸೆ ಕೊಡಲಾಗಿದೆ. ಐದು ಲಕ್ಷ ಪಡೆಯಬೇಕಾದರೆ ಆತನ ಬಳಿಯಿರುವ ಭೂಮಿ ಇಡಬೇಕು, ಅದರ ಮೇಲೆ ಸುರಿಯುವ ಐದು ಲಕ್ಷ; ಇವೆಲ್ಲವನ್ನು ತರ್ಕಿಸಿದರೆ ಸದರಿ ಸಾಲ ಸುಳ್ಳು ಭರವಸೆಯಾಗಿ ಉಳಿಯಲಿದೆ. ಕರ್ನಾಟಕದ ಯಾವ ರೈತನೂ ಈ ಐದು ಲಕ್ಷದ ಸಹವಾಸಕ್ಕೆ ಹೋಗುವುದಿಲ್ಲವಂತಲ್ಲಾ, ಥೂತ್ತೇರಿ.
*****

ಮಾಧುಸ್ವಾಮಿ ಗೊಣಗಾಟದ ಪ್ರಕಾರ ಈ ಸರಕಾರದ ಅವಧಿ ಮುಗಿಯುವವರೆಗೆ ಹೇಗೋ ದ್ರವಾಹಾರ ನೀಡುತ್ತ ಮುಂದೂಡಿಕೊಂಡು ಹೋಗುತ್ತಾರಂತಲ್ಲಾ. ಎಂಬ ಗೊಣಗಾಟಕ್ಕೆ ಪೂರಕವಾಗಿ ಬೊಮ್ಮಾಯಿಯ ಬಜೆಟ್ಟು ಮಂಡನೆಯಾಗಿದೆಯಲ್ಲಾ. ಇದರಲ್ಲಿ ಪ್ರಧಾನವಾಗಿ ಕಂಡುಬರುವ ಅಂಶ ಯಾವುದೆಂದರೆ ಬೊಮ್ಮಾಯಿ ಬದುಕಿನ ಆದರ್ಶ ಪುರುಷನಾದ ಎಡೂರಪ್ಪ ಮಠಗಳಿಗೆ ಕೊಟ್ಟ ದಾನ-ಅನುದಾನವನ್ನು ಸಾವಿರ ಕೋಟಿ ಏರಿಸಿರುವುದು; ಸಾವಿರಾರು ಮಠಗಳಿರುವಾಗ ಸಾವಿರ ಕೋಟಿ ಅನುದಾನ ಹೆಚ್ಚಿನದೇನಲ್ಲ. ಮಠದ ಜೋಳಿಗೆಗಳು ಎಷ್ಟು ಕೊಟ್ಟರೂ ಇನ್ನೂ ಅಗಲವಾಗಿ ಬಾಯಿ ತೆರೆಯುವಂತಿವೆ. ವಿಷಯ ಅದಲ್ಲ ಪ್ರಜಾಪ್ರಭುತ್ವದ ಸರಕಾರವೊಂದು ಸಾಮಾನ್ಯವಾಗಿ ತಮಗೆ ಸಂಬಂಧಪಡದ ಮಠಗಳಿಗೆ ಸಾಮಾನ್ಯನ ಬೆವರಿನ ಹಣವನ್ನು ಕೋಟಿಗಟ್ಟಲೆ ಕೊಡುವುದು ಎಷ್ಟು ಸರಿ ಎಂಬುದು. ಬಜೆಟ್ ಮಂಡನೆಯ ಸಮಯದಲ್ಲಿ ಮಠಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳ ಬೇಕಾಗುತ್ತದೆ ಅಂದರೆ ನಮ್ಮ ನಡುವಿನ ಮಠಗಳು ಮಠಗಳಾಗಿ ಉಳಿದಿಲ್ಲ; ಅವು ತಮ್ಮ ಆಚಾರ ವಿಚಾರ ವರ್ತನೆಯಿಂದಲೇ ರಾಜಕೀಯದ ಪಾರ್ಟಿಗಳಿಗೆ ಓಟು ಕೇಳುವ ಬೂತುಗಳಂತಾಗಿ ಕುಳಿತಿವೆ. ಇದನ್ನು ಗ್ರಹಿಸಿದ ಬೊಮ್ಮಾಯಿ ಯಾರದೊ ದುಡ್ಡನ್ನು ಎಲ್ಲಮ್ಮನ ಜಾತ್ರೆಯಲ್ಲಿ ಎರಚಿದಂತೆ ಮಠಗಳಿಗೆ ಸುರಿದಿದ್ದಾರೆ. ಈ ಹಣ ಮಠ ತಲುಪುವ ವೇಳೆಗೆ ಹಲವು ಮಠಾಧೀಶರು ಹೇಗೆ ಖರ್ಚು ಮಾಡಬೇಕೆಂಬ ನೀಲನಕ್ಷೆ ತಯಾರಿಸುತ್ತಿದ್ದಾರಂತಲ್ಲಾ. ಅದರಲ್ಲಿ ಹೊಸ ಕಾರು, ಶಯನಾಗೃಹದ ನವೀಕರಣ ಮತ್ತು ಫಾರಿನ್ ಟೂರ್ ಕೂಡ ಸೇರಲಿವೆಯಂತಲ್ಲಾ, ಥೂತ್ತೇರಿ.
*****

ಬಿಜೆಪಿ ಪಾರ್ಟಿಯ ಮೆಂಟಲ್‌ಕೇಸ್ ವಿಭಾಗದಿಂದ ತಪ್ಪಿಸಿಕೊಂಡಂತೆ ಕಾಣುವ ಮುತಾಲಿಕ್ ಎಂಬಾತ ಹಿಂದಿಗಿಂತಲೂ ಮುಸ್ಲಿಮರನ್ನು ಟೀಕಿಸಲು ನಾಲಿಗೆಯನ್ನು ಹರಿತ ಮಾಡಿಕೊಳ್ಳುತ್ತಿದ್ದಾರಲ್ಲಾ. ಈತನ ಮುಸ್ಲಿಂ ಹೆಣ್ಣುಮಕ್ಕಳ ಬಗೆಗಿನ ದ್ವೇಷದ ಮಾತಿಗೆ ಆ ಕಡೆಯಿಂದ ಯಾವ ಪ್ರತ್ಯುತ್ತರವೂ ಬಂದಿಲ್ಲ. ಇದನ್ನ ಅವಮಾನವೆಂದು ಪರಿಗಣಿಸಿದ ಮುತಾಲಿಕ್ ತನ್ನ ಮತೀಯ ಕಿಚ್ಚಿನ ಹೇಳಿಕೆಗಳನ್ನ ಮುಂದುವರಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ಸೇರಿ ಶಾಸಕನಾಗಿ ಸದನದಲ್ಲಿ ತನ್ನ ಅಮೋಘವಾದ ಭಾಷಣ ಕಟ್ಟುವ ಕನಸು ಕಂಡಿದ್ದ ಮುತಾಲಿಕರನ್ನು ಹಿಂದೊಮ್ಮೆ ಬಿಜೆಪಿ ಪಾರ್ಟಿಗೆ ಸೇರಿಸಿಕೊಳ್ಳಲಾಗಿತ್ತು. ಆದರೆ ಅಲ್ಲಾಗಲೇ ಪ್ರವರ್ಧಮಾನಕ್ಕೆ ಬಂದಿದ್ದ ಸಿ.ಟಿ ರವಿ, ರೇಣುಕಾಚಾರಿ, ಅಶ್ವತ್ಥನಾರಾಯಣ, ಯತ್ನಾಳ್ ಇಂತಹ ನಾಯಕರ ವರ್ಚಸ್ಸಿಗೆ ಧಕ್ಕೆಯುಂಟಾಗುತ್ತದೆಂದು ಬಿಜೆಪಿ ತೀರ್ಮಾನ ತೆಗೆದುಕೊಂಡು ಸೂರ್ಯಾಸ್ತಮಾನಕ್ಕೂ ಮುನ್ನ ಮುತಾಲಿಕರನ್ನು ಪಾರ್ಟಿಯಿಂದ ತೆಗೆದು ಬಿಸಾಡಲಾಯ್ತು. ಇದು ಬಿಜೆಪಿಯ ಒಂದು ದೊಡ್ಡ ದಾಖಲೆಯಾಗಿದೆ. ಏಕೆಂದರೆ ಪಾರ್ಟಿಗೆ ಸೇರಿಸಿಕೊಂಡ ನಾಲ್ಕುಗಂಟೆ ಅವಧಿಯಲ್ಲೇ ಯಾರನ್ನಾದರೂ ಮೂಲೆಗೆಸೆದದ್ದು ಇತಿಹಾಸದಲ್ಲಿ ಎಂದೂ ನಡೆದಿಲ್ಲ. ಆದರೇನು? ಮುತಾಲಿಕರ ಮನಸ್ಸು ಅಘಾತಗೊಂಡ ಕಾರಣವಾಗಿ, ಹೆಚ್ಚು ಮುಸ್ಲಿಮರನ್ನ ಬೈದಷ್ಟೂ ತನ್ನ ಬದುಕಿನ ಏಕೈಕ ಧ್ಯೇಯವಾದ ಶಾಸಕತ್ವ ದಕ್ಕುವುದೆಂದು ಭಾವಿಸಿರುವ ಆತ ಮತಿಗೆಟ್ಟಂತೆ ಮಾತನಾಡುತ್ತಿರುವುದು ಸದ್ಯದ ಮನರಂಜನೆಯಾಗಿದೆಯಂತಲ್ಲಾ, ಥೂತ್ತೇರಿ.
*****

ಇದನ್ನೂ ಓದಿ: ಹಠಾತ್ ಜನಸಂಖ್ಯೆ ಏರಲು ಕಾರಣವೇನು? – ಯಾಹೂ

ಇತ್ತ ಸಾಹಿತ್ಯ ಪರಿಷತ್‌ನ ಚಟುವಟಿಕೆಗಳು ಶಾನೆ ತಮಾಶೆಯಿಂದ ಕೂಡಿವೆಯಂತಲ್ಲಾ. ಈ ಮಹೇಶ ಜೋಶಿ ಎಂಬ ಸಾಹಿತ್ಯ ಪರಿಷತ್ ವಿದೂಶಕನ ವಿಷಯ ಬಂದಾಗಲೆಲ್ಲಾ ಪತ್ರಕರ್ತರು ನಾಡೋಜ ಮಹೇಶ ಜೋಷಿ ಎಂದು ಬರೆಯತೊಡಗಿವೆ. ಇದು ಈತನ ಬೇಡಿಕೆಯೋ ಅಥವ ಮಾರಿಕೊಂಡ ಪತ್ರಕರ್ತರ ಚೇಷ್ಟೆಯೋ ಎಂಬುದು ನಿಗೂಢವಾಗಿದೆ. ಇದು ಹಾಳುಬಿದ್ದು ಹೋಗಲಿ, ಸಾಹಿತ್ಯ ಪರಿಷತ್‌ನ ದತ್ತಿನಿಧಿ ಪ್ರಶಸ್ತಿಗಾಗಿ ಜೋಶಿ ಮುಂದಾಳತ್ವದ ತಂಡ 53 ಕೃತಿಗಳನ್ನ ಆರಿಸಿದೆ. ಈ ಅದ್ಭುತ ಕೃತಿಗಳ ಪ್ರಶಸ್ತಿ 250ರೂಗಳಿಂದ ಹಿಡಿದು ಹತ್ತು ಸಾವಿರದವರೆಗೂ ಇದೆಯಂತೆ. 250ರೂ ಪಡೆಯಲು ಯಾವ ಅಳುಕೂ ಇಲ್ಲವಾಗಿ, ಸದರಿ ಕೃತಿಕಾರರು 250ರೂ ತೆಗೆದುಕೊಂಡು ಅನತಿ ದೂರದಲ್ಲಿರುವ ವಿದ್ಯಾರ್ಥಿ ಭವನದಲ್ಲಿ ಮಸಾಲೆದೋಸೆ ತಿಂದು ಮನೆಗೆ ಬರುವ ತೀರ್ಮಾನ ತೆಗೆದುಕೊಂಡಿದ್ದಲ್ಲದೆ ಈ ಮಹೇಶ್ ಜೋಶಿ ಸಾಹಿತ್ಯಾಭಿರುಚಿಗೆ ಅಚ್ಚರಿಕೊಂಡಿದ್ದಾರಂತೆ. ಸಾಹಿತ್ಯಕ್ಕೂ ಇವರಿಗೂ ದೂರದ ಸಂಬಂಧ ಎಂಬುದು ಈತ ಸಾಹಿತ್ಯ ಪರಿಷತ್ ಪರಿಚಾರಕ ಹುದ್ದೆಗೆ ಮಂತ್ರಿ ಮಹೋದಯರ ಸವಲತ್ತು ಬೇಕೆಂದು ರಚ್ಚೆ ಹಿಡಿದಾಗಲೇ ತಿಳಿದಿತ್ತು. ಈಗ ಈತ ದತ್ತಿನಿಧಿ ಪ್ರಶಸ್ತಿಯೊಂದಕ್ಕೆ ಆಯ್ಕೆ ಮಾಡಿದ ಕೃತಿಗಳಲ್ಲಿ ಇಡ್ಲಿ ಸಾಂಬರ್ ಮತ್ತು ವಡೆ ಪ್ರಸ್ತಾಪ ಐದು ಪುಟಕೋಮ್ಮೆ ದಾಖಲಾಗಿದೆ; ಈ ಕೃತಿಯನ್ನ ಜೋಶಿ ತಂಡ ಜೊಲ್ಲು ಸುರಿಸುತ್ತಲೇ ಆಯ್ಕೆ ಮಾಡಿದೆಯಂತಲ್ಲಾ. ಅಂತಹ ವಿವರಗಳನ್ನುಳ್ಳ ಪುಸ್ತಕವನ್ನ ಪ್ರಶಸ್ತಿಗೆ ಆಯ್ಕೆ ಮಾಡುವುದರಲ್ಲಿ ಯಾವ ಅಚ್ಚರಿಯೂ ಇಲ್ಲವಂತಲ್ಲಾ, ಥೂತ್ತೇರಿ.

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...