Homeದಲಿತ್ ಫೈಲ್ಸ್ತೆಲಂಗಾಣ: ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮ*ತ್ಯೆಗೆ ಯತ್ನಿಸಿದ್ದ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಸಾವು

ತೆಲಂಗಾಣ: ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮ*ತ್ಯೆಗೆ ಯತ್ನಿಸಿದ್ದ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಸಾವು

- Advertisement -
- Advertisement -

ತೆಲಂಗಾಣದ ವಾರಂಗಲ್‌ನಲ್ಲಿ ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸ್ನಾತಕೋತ್ತರ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಧಾರಾವತ್ ಪ್ರೀತಿ ಅವರು ಫೆಬ್ರವರಿ 22 ರಂದು ಕರ್ತವ್ಯದಲ್ಲಿದ್ದಾಗ ವಾರಂಗಲ್‌ನ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಪ್ರೀತಿಯವರು ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಡಿ ಅರಿವಳಿಕೆ ವಿದ್ಯಾರ್ಥಿಯಾಗಿದ್ದು, ಆಕೆಯ ಸೀನಿಯರ್‌‌ ಮೊಹಮ್ಮದ್ ಸೈಫ್ ಕಿರುಕುಳ ನೀಡುತ್ತಿದ್ದರು ಎಂದು ವರದಿಯಾಗಿದೆ. ಫೆಬ್ರವರಿ 24ರಂದು ಸೈಫ್‌ನನ್ನು ಬಂಧಿಸಲಾಗಿದೆ.

ಬಂಧನದ ನಂತರ ವಾರಂಗಲ್ ಪೊಲೀಸ್ ಕಮಿಷನರ್ ಎ.ವಿ.ರಂಗನಾಥ್ ಪ್ರತಿಕ್ರಿಯಿಸಿ, “ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳು, ಪ್ರೀತಿ ಮತ್ತು ಸೈಫ್ ನಡುವಿನ ವೈಯಕ್ತಿಕ ಚಾಟ್‌ಗಳು ರ್‍ಯಾಗಿಂಗ್‌ ಪ್ರಕರಣವನ್ನು ಸೂಚಿಸುತ್ತವೆ” ಎಂದಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ, ರ್‍ಯಾಗಿಂಗ್‌ಗೆ ಸಂಬಂಧಿಸಿದ ಸೆಕ್ಷನ್‌ಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೈದ್ರಾಬಾದ್‌ನಲ್ಲಿನ ನಿಜಾಮ್‌ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರೀತಿಯವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ವಿಷಯ ಹೊರಬಿದ್ದ ಬಳಿಕ ಇಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ಭಾನುವಾರ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಗಾಗಿ ಪ್ರೀತಿಯವರ ಮೃತದೇಹವನ್ನು ಅಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಾಗ ವಿದ್ಯಾರ್ಥಿಗಳು ಮತ್ತು ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

“ಕಳೆದ ನಾಲ್ಕು ದಿನಗಳಲ್ಲಿ ನನ್ನ ಮಗಳಿಗೆ ಯಾವ ಚಿಕಿತ್ಸೆ ನೀಡಲಾಗಿದೆ ಎಂಬುದರ ಕುರಿತು ವಿವರವಾದ ವರದಿಯನ್ನು ನೀಡಬೇಕು” ಎಂದು ಪ್ರೀತಿಯವರ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ದಲಿತ ಕುಟುಂಬಕ್ಕೆ ಬೆದರಿಕೆ; ಸ್ವಘೋಷಿತ ದೇವಮಾನವನ ಸಹೋದರನ ವಿರುದ್ಧ ಎಫ್‌ಐಆರ್‌

5 ಕೋಟಿ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತೆಲಂಗಾಣ ಆರೋಗ್ಯ ಸಚಿವ ಟಿ ಹರೀಶ್ ರಾವ್ ಅವರು ಪ್ರೀತಿಯವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಿಮ್ಸ್‌ನ ವೈದ್ಯಕೀಯ ತಂಡವು ಪ್ರೀತಿಯವರನ್ನು ಉಳಿಸಲು ದಣಿವರಿಯದೆ ಕೆಲಸ ಮಾಡಿದೆ. ಡಾ.ಪ್ರೀತಿ ಸಂಪೂರ್ಣವಾಗಿ ಗುಣಮುಖರಾಗಿ ಹಿಂತಿರುಗುತ್ತಾರೆಂದು ನಾವು ಭಾವಿಸಿದ್ದೆವು. ಆದರೆ ಅವರು ಹಿಂತಿರುಗದ ಲೋಕಕ್ಕೆ ಹೋದರು” ಎಂದು ಹರೀಶ್ ರಾವ್ ಪ್ರತಿಕ್ರಿಯಿಸಿದ್ದಾರೆ.

10 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಪಂಚಾಯತ್ ರಾಜ್ ಸಚಿವ ಎರ್ರಬೆಳ್ಳಿ ದಯಾಕರ್ ರಾವ್ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...