Homeಮುಖಪುಟಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

ಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಕಳೆದ ವಾರ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ತಮಿಳು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ನಡೆಸಿದ ಹಲ್ಲೆಯನ್ನು ಖಂಡಿಸಿ, ಫೆಬ್ರವರಿ 25, ಶನಿವಾರದಂದು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್‌ಎ) ಜೆಎನ್‌ಯು ವಿಭಾಗವು ‘ರಿಕ್ಲೈಮ್ ಜೆಎನ್‌ಯು’ ಎಂಬ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತು.

ದಾಳಿಯ ವೇಳೆ ಗಾಯಗೊಂಡಿದ್ದ ಪಿಎಚ್‌ಡಿ ಸ್ಕಾಲರ್ ನಾಜರ್ ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ್ದು, ”ಕ್ಯಾಂಪಸ್‌ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುವವರನ್ನು ಎಬಿವಿಪಿ ಗುರಿಯಾಗಿಸುತ್ತದೆ. ಈ ಬಾರಿ ಅದು ತಮಿಳರನ್ನು ಗುರಿಯಾಗಿಸಿಕೊಂಡಿದೆ” ಎಂದು ಹೇಳಿದ್ದಾರೆ.

ಫೆಬ್ರವರಿ 19ರಂದು ”ಜಾನೆ ಭಿ ದೋ ಯಾರೋ” ಎನ್ನುವ ವಿಡಂಬನಾತ್ಮಕ ಹಿಂದಿ ಚಲನಚಿತ್ರ ಪ್ರದರ್ಶನದ ವೇಳೆ ವಿದ್ಯಾರ್ಥಿಗಳ ಮೇಲೆ ಆರ್‌ಎಸ್‌ಎಸ್ ವಿದ್ಯಾರ್ಥಿ ಘಟಕವಾದ ಎಬಿವಿಪಿ ಹಲ್ಲೆ ನಡೆಸಿತು. ಆರ್‌ಎಸ್‌ಎಸ್-ಅಂಗಸಂಸ್ಥೆಯು ಶಿವಾಜಿಯ ಭಾವಚಿತ್ರದ ಬಗ್ಗೆ ತಕರಾರು ತೆಗೆದಿದೆ ಎಂದು ಆರೋಪಿಸಲಾಗಿದೆ. ಎಬಿವಿಪಿಯ ದಾಳಿಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ಸಾಗಿಸುವ ಆಂಬ್ಯುಲೆನ್ಸ್‌ಗಳನ್ನು ಸಹ ನಿರ್ಬಂಧಿಸಲಾಗಿದೆ. ಇದಲ್ಲದೆ, ಹಿಂಸಾಚಾರ ನಡೆಯುತ್ತಿದ್ದರೂ ದೆಹಲಿ ಪೊಲೀಸರು ಮಾತ್ರ ಮಧ್ಯಪ್ರವೇಶಿಸಲು ನಿರಾಕರಿಸಿದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಎಬಿವಿಪಿಯು ಡಾ ಬಿಆರ್ ಅಂಬೇಡ್ಕರ್, ಪೆರಿಯಾರ್, ಭಗತ್ ಸಿಂಗ್ ಮತ್ತು ಕಾರ್ಲ್ ಮಾರ್ಕ್ಸ್ ಅವರ ಭಾವಚಿತ್ರಗಳನ್ನು ಧ್ವಂಸಗೊಳಿಸಿದೆ ಎನ್ನುವ ಆರೋಪಗಳು ಕೇಳಿಬಂದಿವೆ.

‘ರಿಕ್ಲೈಮ್ JNU’ ರ್ಯಾಲಿಯು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದೆ. ಅದರಲ್ಲಿ ಮೊದಲನೆಯದು ABVP ವಿರುದ್ಧ ಕ್ರಮ. ಈ ಬಗ್ಗೆ ತನಿಖೆ ನಡೆಸಲು ವಿಶ್ವವಿದ್ಯಾನಿಲಯ ಆಡಳಿತ ರಚಿಸಿರುವ ವಿಚಾರಣಾ ಸಮಿತಿಯನ್ನು ಪುನರ್ ರಚಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು. ”ಪ್ರಸ್ತುತ ಸಮಿತಿಯಲ್ಲಿರುವ ಪ್ರಾಧ್ಯಾಪಕರು ಆಡಳಿತ ಮಂಡಳಿಗೆ ಹತ್ತಿರವಾಗಿದ್ದಾರೆ ಎಂದು ಮಧುರಿಮಾ ಕುಂದು ಹೇಳಿದ್ದಾರೆ. ಆ ಸಮಿತಿಯು ಜೆಎನ್‌ಯು-ವಿದ್ಯಾರ್ಥಿ ಸಂಘ (ಜೆಎನ್‌ಯು-ಎಸ್‌ಯು) ಮತ್ತು ಜೆಎನ್‌ಯು ಶಿಕ್ಷಕರ ಸಂಘದ ಪ್ರತಿನಿಧಿಗಳನ್ನು ಒಳಗೊಂಡಿರಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.

ಫೆಬ್ರವರಿ 20ರಂದು ವಿದ್ಯಾರ್ಥಿಗಳ ಡೀನ್ ಸುಧೀರ್ ಪಿ ಸಿಂಗ್ ಹೊರಡಿಸಿದ ಸುತ್ತೋಲೆ ಪ್ರಕಾರ, ”ಎಲ್ಲಾ ಹಾಸ್ಟೆಲ್‌ಗಳು, ವಿದ್ಯಾರ್ಥಿಗಳ ಚಟುವಟಿಕೆ ಕೇಂದ್ರ (ಟೆಫ್ಲಾಸ್) ಮತ್ತು ಕ್ರೀಡಾ ಮೈದಾನಗಳು ಸೇರಿದಂತೆ ಇಂಟರ್-ಹಾಲ್-ಆಡಳಿತದ ಆವರಣದಲ್ಲಿ ವಿದ್ಯಾರ್ಥಿಗಳ ಏನೇ ಚಟುವಟಿಕೆ ನಡೆಸಿದರೂ ಡೀನ್ ಅವರಿಂದ ಔಪಚಾರಿಕ ಅನುಮತಿ ಅಗತ್ಯವಿರುತ್ತದೆ.” ಜೆಎನ್‌ಯು-ಎಸ್‌ಯು ಕಚೇರಿಯನ್ನು ಈಗ ಮುಚ್ಚಲಾಗಿದೆ. ಅವರ ಕಚೇರಿಗೆ ಹೋಗುವುದು ವಿದ್ಯಾರ್ಥಿ ಒಕ್ಕೂಟದ ಹಕ್ಕು. ಒಕ್ಕೂಟದ ಚುನಾಯಿತ ಅಧ್ಯಕ್ಷರನ್ನು ಅವರ ಕಚೇರಿಯಿಂದ ಹೊರಹಾಕಲಾಗಿದೆ ಮತ್ತು ಈಗ ಅದನ್ನು ಪ್ರವೇಶಿಸಲು ಬೇರೊಬ್ಬರ ಅನುಮತಿ ಅಗತ್ಯವಿದೆ ಎಂದು ನಾಜರ್ ಹೇಳಿದರು.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

”ಕೆಲವು ವರ್ಷಗಳ ಹಿಂದೆ, ಊಟದ ಹಾಲ್‌ಗಳನ್ನು ವಿದ್ಯಾರ್ಥಿಗಳು ಒಟ್ಟುಸೇರಲು ಮತ್ತು ಚರ್ಚೆ ನಡೆಸಲು ಬಳಸಲಾಗುತ್ತಿತ್ತು ಎಂದು ಮಧುರಿಮಾ ನೆನಪಿಸಿಕೊಂಡರು. ಈಗ ವಿದ್ಯಾರ್ಥಿ ಸಂಘದ ಕಚೇರಿ ಹೊರತುಪಡಿಸಿ, ಕ್ಯಾಂಪಸ್‌ನಲ್ಲಿ ಪ್ರಜಾಪ್ರಭುತ್ವದ ಜಾಗಗಳು ನಾಶವಾಗುತ್ತಿವೆ. ಇದು ಅಧಿಕಾರದ ವ್ಯವಸ್ಥಿತ ದುರುಪಯೋಗ ಮತ್ತು ಹಿಂಸಾಚಾರಕ್ಕೆ ಒಂದು ಮಾದರಿಯಾಗಿದೆ. ಪ್ರತಿ ಬಾರಿ ಎಬಿವಿಪಿ ದಾಳಿ ನಡೆದಾಗ ಈಗಿನಂತೆ ಸಮಿತಿ ರಚನೆಯಾಗುತ್ತದೆ. ಇದರಿಂದ ಯಾವ ಕ್ರಮವೂ ಜರಗುವುದಿಲ್ಲ ಅವರು ಹೀಗೆ ನಿರ್ಭೀತಿಯಿಂದ ದಾಳಿ ನಡೆಸುತ್ತಲೇ ಬರುತ್ತಿದ್ದಾರೆ” ಎಂದರು.

ಫೆಬ್ರವರಿ 19ರ ದಾಳಿಯು ಕ್ಯಾಂಪಸ್‌ನಲ್ಲಿ ನಡೆದ ಮೊದಲ ಘಟನೆಯಲ್ಲ, 2020ರಲ್ಲಿ, ಹೊರಗಿನವರು ಮುಸುಕುಧಾರಿಗಳಾಗಿ ಬಂದು, ವಿಶ್ವವಿದ್ಯಾಲಯದ ಸಬರಮತಿ ಹಾಸ್ಟೆಲ್‌ನ ವಿದ್ಯಾರ್ಥಿಗಳ ಮೇಲೆ ಕೋಲು ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದರು. ಅದೇ ವರ್ಷ ಪೆರಿಯಾರ್ ಹಾಸ್ಟೆಲ್‌ನಲ್ಲಿ ಮತ್ತೊಂದು ದಾಳಿ ಸಂಭವಿಸಿದೆ ಮತ್ತು ಕಳೆದ ವರ್ಷ ಡಿಸೆಂಬರ್‌ನಲ್ಲಿ ನಿಷೇಧಿತ BBC ಸಾಕ್ಷ್ಯಚಿತ್ರ ಇಂಡಿಯಾ: ದಿ ಮೋದಿ ಕ್ವೆಶ್ಚನ್ ವೀಕ್ಷಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಮಧುರಿಮಾ ಅವರ ಮಾತುಗಳಿಗೆ ಧ್ವನಿಗೂಡಿಸಿದ ನಾಜರ್, ”ಇತ್ತೀಚಿನ ಅನೇಕ ಘಟನೆಗಳಲ್ಲಿ ಇದು ಕೂಡ ಒಂದು, ಇಂತಹ ದಾಳಿಗಳು ಹೆಚ್ಚಾಗುತ್ತಲೇ ಇವೆ. ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ಕಾರಣಕ್ಕೆ ಅವರು ನಿರ್ಭಯದಿಂದ ದಾಳಿ ನಡೆಸುವುದನ್ನು ಮುಂದುವರೆಸಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರವನ್ನು ವಿರೋಧಿಸುವವರನ್ನು ಟಾರ್ಗೆಟ್ ಮಾಡುವುದು ಕ್ಯಾಂಪಸ್‌ನಲ್ಲಿ ವಾಡಿಕೆಯಾಗಿದೆ” ಎಂದು ಅವರು ಹೇಳಿದರು.

”ಕೇರಳ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು ಇಲ್ಲಿ ಅಲ್ಪಸಂಖ್ಯಾತರು ಎಂದು ಎಬಿವಿಪಿ ಹೇಳುವುದನ್ನು ನಾವು ಕೇಳಿದ್ದೇವೆ. ನಾವೇ ಬಹುಸಂಖ್ಯಾತರು, ನಾವು ಹೇಳಿದಂತೆ ನೀವು ಮಾಡಬೇಕು” ಎಂದು ಅವರು ಹೇಳುತ್ತಾರೆ ಎಂದರು.

ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಶನ್ (ಬಾಪ್ಸಾ) ಅಧ್ಯಕ್ಷ ಅಜಿಂಕ್ಯ ಸೋನಾವಾನೆ ಟಿಎನ್‌ಎಂ ಜೊತೆ ಮಾತನಾಡುತ್ತಾ, ”ದರ್ಶನ್ ಸೋಲಂಕಿ ಅವರ ಸಾವಿನಂತಹ ದೊಡ್ಡ ಸಮಸ್ಯೆಯ ಮೇಲಿನ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಘಟನೆಗಳನ್ನು ಎಬಿವಿಪಿ ಸೃಷ್ಟಿ ಮಾಡಿದೆ ಎಂದು ಹೇಳಿದರು. ಹಿಂಸಾಚಾರ ನಡೆಯುವ ಮೊದಲು ನಾವು ಸಮಸ್ಯೆಯನ್ನು ಕೈಗೆತ್ತಿಕೊಂಡಿದ್ದೇವೆ. ಈಗ ಅವರ ಸಾವು, ಸಾಂಸ್ಥಿಕ ಕೊಲೆಯೇ ಹೊರತು, ಐಐಟಿ ಬಾಂಬೆ ಹೇಳುವಂತೆ ರ್ಯಾಗಿಂಗ್‌ನಿಂದ ಆತ್ಮಹತ್ಯೆಯಲ್ಲ. ದರ್ಶನ್ ಸಾವು ಒಂದು ಪ್ರತ್ಯೇಕ ಪ್ರಕರಣವಲ್ಲ. ಇದು ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ ಅವರ ಸಾವಿನಂತಹ ಸಾಂಸ್ಥಿಕ ಜಾತಿ ಆಧಾರಿತ ತಾರತಮ್ಯದ ಪರಿಣಾಮವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...