Homeಮುಖಪುಟಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

ಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಫೆಬ್ರವರಿ 23ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಅಸ್ಸಾಂ ಪೊಲೀಸರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗಮನಿಸಿತು.

ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ಈ ವಿಚಾರದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪೀಠವು ಸಲ್ಲಿಕೆಗಳನ್ನು ಗಮನಿಸಿತು ಮತ್ತು ಫೆಬ್ರವರಿ 23ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವ ಮೂಲಕ ವಿಚಾರಣೆಯನ್ನು ಮಾರ್ಚ್ 3ರವರೆಗೆ ಮುಂದೂಡಿತು.

ಘಟನೆ ಹಿನ್ನೆಲೆ:

ಫೆ.17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದರು. ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. ”ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದ್ದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದ್ದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದಿದ್ದರು.

ಆ ಬಳಿಕ ಪ್ರಕರಣದಲ್ಲಿ ಖೇರಾ ಅವರಿಗೆ ಫೆ.28ರವರೆಗೆ  ಮಧ್ಯಂತರ ಜಾಮೀನು ನೀಡಿತ್ತು. ಇಂದು ಮತ್ತೆ  ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...