Homeಮುಖಪುಟಬಾಲಕಿಯ ಕೈ ಹಿಡಿದು ಕಿರುಕುಳ: 'ಲೈಂಗಿಕ ಉದ್ದೇಶ'ವಿಲ್ಲವೆಂದು ಆರೋಪಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್‌

ಬಾಲಕಿಯ ಕೈ ಹಿಡಿದು ಕಿರುಕುಳ: ‘ಲೈಂಗಿಕ ಉದ್ದೇಶ’ವಿಲ್ಲವೆಂದು ಆರೋಪಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಅಪ್ರಾಪ್ತ ಬಾಲಕಿಯ ಕೈ ಹಿಡಿದು ಕಿರುಕುಳ ಕೊಟ್ಟಿದ್ದ ಆರೋಪಿಗೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ನಿರೀಕ್ಷಣಾ ಜಾಮೀನು ನೀಡಿದೆ. ಸಂತ್ರಸ್ತೆಯ ಹೇಳಿಕೆಯು ಯಾವುದೇ “ಲೈಂಗಿಕ ಉದ್ದೇಶ”ವನ್ನು ಸೂಚಿಸುವುದಿಲ್ಲ ಎಂದು ಹೇಳಿದೆ.

ಆರೋಪಿ, ಆಟೋರಿಕ್ಷಾ ಚಾಲಕನ ಬಂಧನದ ಜಾಮೀನು ಅರ್ಜಿಯನ್ನು ಫೆಬ್ರವರಿ 10ರಂದು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರು ಕೈಗೆತ್ತಿಕೊಂಡು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಸೋಮವಾರ ವಿವರವಾದ ಆದೇಶವನ್ನು ನೀಡಿದ್ದಾರೆ.

17 ವರ್ಷದ ಬಾಲಕಿಯ ತಂದೆ, ಆರೋಪಿಯ ವಿರುದ್ಧ ಯವತ್ಮಾಲ್‌ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆಟೋರಿಕ್ಷಾ ಚಾಲಕನ ವಿರುದ್ಧ, ಅಪ್ರಾಪ್ತ ಬಾಲಕಿಗೆ ಕಿರುಕಳ ನೀಡಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ:ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾ; ದೆಹಲಿ ಹೈಕೋರ್ಟ್ ತೀರ್ಪು

ದೂರುದಾರರ ಪ್ರಕಾರ, ಅವರ ಮಗಳು ಕಾಲೇಜಿಗೆ ಮತ್ತು ಟ್ಯೂಷನ್‌ಗೆ ಹೋಗಲು ಆರೋಪಿಯ ಆಟೋರಿಕ್ಷಾದಲ್ಲಿ ಕೆಲ ದಿನಗಳವರೆಗೆ ಪ್ರಯಾಣಿಸಿದ್ದಳು. ಆಕೆ ಆ ಆಟೋರಿಕ್ಷಾದಲ್ಲಿ ಹೋಗುವುದನ್ನು ನಿಲ್ಲಿಸಿದ ನಂತರ, ಆಕೆಯ ಹಿಂದೆಬಿದ್ದು ಆರೋಪಿಯು ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.

ನವೆಂಬರ್ 1, 2022 ರಂದು, ಆರೋಪಿಯು ತನ್ನ ಮೋಟರ್‌ಸೈಕಲ್‌ನಲ್ಲಿ ಹಿಂಬದಿ ಕುಳಿತುಕೊಳ್ಳಲು ಒತ್ತಾಯ ಮಾಡಿದ್ದಾನೆ. ಆಗ ಬಾಲಕಿಯು ನಿರಾಕರಿಸಿದಾಗ ಆಕೆಯ ಕೈ ಹಿಡಿದು ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಯು ಅವಳನ್ನು ಮನೆಗೆ ಬಿಡುವುದಾಗಿ ಹೇಳಿದ್ದಾನೆ ಆದರೆ ಬಾಲಕಿ ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೂ ಆತ ಬಲವಂತಪಡಿಸಿದಾಗ ಬಾಲಕಿ ಆ ಸ್ಥಳದಿಂದ ಓಡಿಹೋದಳು ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.

“ಅರ್ಜಿದಾರರು (ಆರೋಪಿ) ಮೇಲ್ನೋಟಕ್ಕೆ ಯಾವುದೇ ಲೈಂಗಿಕ ಕಿರುಕುಳ ನೀಡಿಲ್ಲ ಎಂಬುದು ತಿಳಿದುಬಂದಿದೆ, ಏಕೆಂದರೆ ಅರ್ಜಿದಾರರು ಯಾವುದೇ ಲೈಂಗಿಕ ಉದ್ದೇಶದಿಂದ ಆಕೆಯ ಕೈಯನ್ನು ಹಿಡಿದಿಲ್ಲ ಹಾಗಾಗಿ ಇದು ಕಾನೂನು ಕ್ರಮ ಜರುಗಿಸುವ ಪ್ರಕರಣವಲ್ಲ” ಎಂದು ನ್ಯಾಯಾಲಯ ತನ್ನ ಆದೇಶದ ಹೇಳಿಕೆಯಲ್ಲಿ ತಿಳಿಸಿದೆ.

“ಸಂತ್ರಸ್ತೆಯ ಹೇಳಿಕೆಯಿಂದ ಅಲ್ಲಿ ಆರೋಪಿಯಿಂದ ಯಾವುದೇ ಲೈಂಗಿಕ ಉದ್ದೇಶ ಇದೆ ಎನ್ನುವುದು ಕಂಡುಬರುವುದಿಲ್ಲ. ಹಾಗಾಗಿ ಆರೋಪಿಯು ಜಾಮೀನಿಗೆ ಅರ್ಹನಾಗಿದ್ದಾನೆ” ಎಂದರು.

ಆರೋಪಿಯು ಮುಂದೆ ಈ ರೀತಿ ನಡೆದುಕೊಳ್ಳಬಾರದು, ಒಂದು ವೇಳೆ ಹೀಗೆ ಮಾಡಿದರೆ, ಈಗ ನೀಡಿರುವ ಜಾಮೀನನ್ನು ಹಿಂಪಡೆಯಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...