Homeಮುಖಪುಟಮೈಸೂರು: ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ಮೈಸೂರು: ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

- Advertisement -
- Advertisement -

ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಘೋಷಿಸಿದ್ದಾರೆ.

ಇಂದು ಮೈಸೂರನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “2019ರಲ್ಲಿ ಆದ ಮಾರಣಾಂತಿಕ ಹಲ್ಲೆಯಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆರೋಗ್ಯ ಸರಿ ಇಲ್ಲದ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

ಬಹಳ ದಿನಗಳಿಂದ ಈ ವಿಷಯ ಬಹಿರಂಗಪಡಿಸಬೇಕೆಂದು ಅಂದುಕೊಂಡಿದ್ದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರಿಗೆ ಪತ್ರ ಬರೆದಿದ್ದೆ. ಆದರೆ ಪಕ್ಷದ ವರಿಷ್ಠರು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು. ಆದರೆ ಈಗ ಮಾಧ್ಯಮಗಳ ಮೂಲಕ ವಿಷಯ ಬಹಿರಂಗಗೊಂಡಿದೆ ಎಂದಿದ್ದಾರೆ.

ಅಭಿಮಾನಿಗಳ ಒತ್ತಾಯದ ಮೇರೆಗೆ ಕೆಪಿಸಿಸಿಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಹ ಸಾಯುವವರೆಗೂ ನಿಷ್ಟಾವಂತ ಕಾಂಗ್ರೆಸ್ಸಿಗನಾಗಿ ಇರುತ್ತೇನೆ. ಅನಾರೋಗ್ಯದ ನಡುವೆಯೂ 4 ವರ್ಷ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದ ತೃಪ್ತಿ ಇದೆ. ಹೈಕಮಾಂಡ್ ಸೂಚಿಸಿದಂತೆ ನಡೆದುಕೊಳ್ಳುತ್ತೇನೆ, ಅನುಯಾಯಿಗಳ ಮಾತಿಗೆ ಕಿವಿಗೊಡುತ್ತೇನೆ ಎಂದು ಸೇಠ್ ತಿಳಿಸಿದ್ದಾರೆ.

ಇನ್ನು ಅವರು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಂತೆ ಅವರ ಮನೆಯ ನಿವಾಸದಲ್ಲಿ ಅಭಿಮಾನಿಗಳು ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದಾರೆ. ವ್ಯಕ್ತಿಯೊಬ್ಬರೂ ಸೀಮೇಎಣ್ಣೆ ಸುರಿದುಕೊಂಡು ಬೆದರಿಕೆಯೊಡ್ಡಿದ್ದರೆ , ಮತ್ತೊಬ್ಬರು ಅವರ ಮನೆಯ ಮೇಲೆ ಹತ್ತಿ ಬಿದ್ದು ಸಾಯುವುದಾಗಿ ಬ್ಲಾಕ್ ಮೇಲ್ ಮಾಡಿದರು. ಅವರನ್ನು ಸುಮ್ಮನಾಗಿಸುವಲ್ಲಿ ತನ್ವೀರ್ ಸೇಠ್ ಹೈರಣಾದರು.

ಕಾಂಗ್ರೆಸ್ ಭದ್ರಕೋಟೆಯಾದ ನರಸಿಂಹರಾಜ ವಿಧಾನಸಭಾ ಕ್ಷೇತ್ರ

ನರಸಿಂಹರಾಜ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್ ಪಕ್ಷದ ಭದ್ರಕೋಟೆಗಿದೆ. ತನ್ವೀರ್ ಸೇಠ್‌ರವರು ಈ ಕ್ಷೇತ್ರದಿಂದ ಒಂದು ಉಪ ಚುನಾವಣೆ ಸೇರಿದಂತೆ ಸತತ ಐದು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಾರೆ. 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಇನ್ನು ತನ್ವೀರ್ ಸೇಠ್‌ರವರ ತಂದೆ ಅಜೀಜ್ ಸೇಠ್‌ರವರು ಈ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1985 ಮುಕ್ತರ್ ಉನ್ನೀಸ ಎಂಬುವವರು ಕಾಂಗ್ರೆಸ್‌ನಿಂದ ಮತ್ತು 1994ರಲ್ಲಿ ಬಿಜೆಪಿಯಿಂದ ಈ ಮಾರುತಿರಾವ್ ಪವಾರ್ ಎಂಬುವವರು ಗೆಲುವು ಸಾಧಿಸಿದ್ದರು. ಆ ಎರಡು ಚುನಾವಣೆ ಹೊರತುಪಡಿಸಿ ಉಳೆದ ಎಲ್ಲಾ ಚುನಾವಣೆಗಳಲ್ಲಿಯೂ ಸೇಠ್ ಕುಟುಂಬವೇ ಗೆಲ್ಲುತ್ತಾ ಬಂದಿದೆ.

ಇದನ್ನೂ ಓದಿ: ಒಬಿಸಿ ಸಚಿವಾಲಯ, ಜಾತಿಗಣತಿ, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ: ಕಾಂಗ್ರೆಸ್ ನಿರ್ಣಯಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...