Homeಮುಖಪುಟಮೈಸೂರು: ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ಮೈಸೂರು: ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

- Advertisement -
- Advertisement -

ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಘೋಷಿಸಿದ್ದಾರೆ.

ಇಂದು ಮೈಸೂರನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “2019ರಲ್ಲಿ ಆದ ಮಾರಣಾಂತಿಕ ಹಲ್ಲೆಯಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆರೋಗ್ಯ ಸರಿ ಇಲ್ಲದ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

ಬಹಳ ದಿನಗಳಿಂದ ಈ ವಿಷಯ ಬಹಿರಂಗಪಡಿಸಬೇಕೆಂದು ಅಂದುಕೊಂಡಿದ್ದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರಿಗೆ ಪತ್ರ ಬರೆದಿದ್ದೆ. ಆದರೆ ಪಕ್ಷದ ವರಿಷ್ಠರು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು. ಆದರೆ ಈಗ ಮಾಧ್ಯಮಗಳ ಮೂಲಕ ವಿಷಯ ಬಹಿರಂಗಗೊಂಡಿದೆ ಎಂದಿದ್ದಾರೆ.

ಅಭಿಮಾನಿಗಳ ಒತ್ತಾಯದ ಮೇರೆಗೆ ಕೆಪಿಸಿಸಿಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಹ ಸಾಯುವವರೆಗೂ ನಿಷ್ಟಾವಂತ ಕಾಂಗ್ರೆಸ್ಸಿಗನಾಗಿ ಇರುತ್ತೇನೆ. ಅನಾರೋಗ್ಯದ ನಡುವೆಯೂ 4 ವರ್ಷ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದ ತೃಪ್ತಿ ಇದೆ. ಹೈಕಮಾಂಡ್ ಸೂಚಿಸಿದಂತೆ ನಡೆದುಕೊಳ್ಳುತ್ತೇನೆ, ಅನುಯಾಯಿಗಳ ಮಾತಿಗೆ ಕಿವಿಗೊಡುತ್ತೇನೆ ಎಂದು ಸೇಠ್ ತಿಳಿಸಿದ್ದಾರೆ.

ಇನ್ನು ಅವರು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಂತೆ ಅವರ ಮನೆಯ ನಿವಾಸದಲ್ಲಿ ಅಭಿಮಾನಿಗಳು ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದಾರೆ. ವ್ಯಕ್ತಿಯೊಬ್ಬರೂ ಸೀಮೇಎಣ್ಣೆ ಸುರಿದುಕೊಂಡು ಬೆದರಿಕೆಯೊಡ್ಡಿದ್ದರೆ , ಮತ್ತೊಬ್ಬರು ಅವರ ಮನೆಯ ಮೇಲೆ ಹತ್ತಿ ಬಿದ್ದು ಸಾಯುವುದಾಗಿ ಬ್ಲಾಕ್ ಮೇಲ್ ಮಾಡಿದರು. ಅವರನ್ನು ಸುಮ್ಮನಾಗಿಸುವಲ್ಲಿ ತನ್ವೀರ್ ಸೇಠ್ ಹೈರಣಾದರು.

ಕಾಂಗ್ರೆಸ್ ಭದ್ರಕೋಟೆಯಾದ ನರಸಿಂಹರಾಜ ವಿಧಾನಸಭಾ ಕ್ಷೇತ್ರ

ನರಸಿಂಹರಾಜ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್ ಪಕ್ಷದ ಭದ್ರಕೋಟೆಗಿದೆ. ತನ್ವೀರ್ ಸೇಠ್‌ರವರು ಈ ಕ್ಷೇತ್ರದಿಂದ ಒಂದು ಉಪ ಚುನಾವಣೆ ಸೇರಿದಂತೆ ಸತತ ಐದು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಾರೆ. 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಇನ್ನು ತನ್ವೀರ್ ಸೇಠ್‌ರವರ ತಂದೆ ಅಜೀಜ್ ಸೇಠ್‌ರವರು ಈ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1985 ಮುಕ್ತರ್ ಉನ್ನೀಸ ಎಂಬುವವರು ಕಾಂಗ್ರೆಸ್‌ನಿಂದ ಮತ್ತು 1994ರಲ್ಲಿ ಬಿಜೆಪಿಯಿಂದ ಈ ಮಾರುತಿರಾವ್ ಪವಾರ್ ಎಂಬುವವರು ಗೆಲುವು ಸಾಧಿಸಿದ್ದರು. ಆ ಎರಡು ಚುನಾವಣೆ ಹೊರತುಪಡಿಸಿ ಉಳೆದ ಎಲ್ಲಾ ಚುನಾವಣೆಗಳಲ್ಲಿಯೂ ಸೇಠ್ ಕುಟುಂಬವೇ ಗೆಲ್ಲುತ್ತಾ ಬಂದಿದೆ.

ಇದನ್ನೂ ಓದಿ: ಒಬಿಸಿ ಸಚಿವಾಲಯ, ಜಾತಿಗಣತಿ, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ: ಕಾಂಗ್ರೆಸ್ ನಿರ್ಣಯಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...