HomeUncategorizedಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇಂದಿನಿಂದ ರಾಜ್ಯಾದ್ಯಾಂದ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ (ಫೆ28)ದಂದು ರಾಜ್ಯ ಸರ್ಕಾರಿ ನೌಕರರ ಜೊತೆ ನಡೆಸಿದ ಸಭೆ ವಿಫಲವಾಗಿದೆ. ಹಾಗಾಗಿ ರಾಜ್ಯದಲ್ಲಿ ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ”ಸಭೆಯಲ್ಲಿ ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ, ಭರವಸೆ ನೀಡಿದ್ದಾರೆ, ಹಾಗಂತ ನಾವು ಅದನ್ನು ಒಪ್ಪಿಕೊಂಡು ಮುಷ್ಕರ ಕೈಬಿಡುವ ಪ್ರಶ್ನೆ ಇಲ್ಲ. ಆದರೆ ನಾವು ಈಗ ಸಂಘದ ಪದಾಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇವೆ. ಈ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರದ ಬಗ್ಗೆ ಸಿಎಂ ಗಮನಕ್ಕೆ ತಂದು, ಆನಂತರ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು. ಸಿಎಂ ಜೊತೆಗಿನ ಸಭೆ ಸಫಲವೂ ಆಗಿಲ್ಲ, ವಿಫಲವೂ ಆಗಿಲ್ಲ. ಸರ್ಕಾರದ ಜತೆ ಯಾವುದೇ ಸಂಘರ್ಷವೂ ಇಲ್ಲ. ಆದರೆ ಬೇಡಿಕೆ ಈಡೇರುವವರೆ ಮಾತ್ರ ಮುಷ್ಕರ ನಡೆಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಇಷ್ಟು ದಿನ ಬರೀ ಭರವಸೆ ಕೊಡುವ ಕೆಲಸವನ್ನು ಮುಂದುವರೆಸಿತ್ತು, ಈಗಲೂ ಅದೇ ಛಾಳಿಯನ್ನು ಮುಂದುವರೆಸಿದೆ. ಆದರೆ ಇದರಿಂದ ಬೇಸತ್ತ ಸರ್ಕಾರಿ ನೌಕರರು ಭರವಸೆಗಳಿಗೆ ಬಗ್ಗದೇ, ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇಂದು ರಾಜ್ಯ ಎಲ್ಲಾ ಸರ್ಕಾರಿ ಇಲಾಖೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಪೌರ ಕಾರ್ಮಿಕರು ಸೇರಿ ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಸುಮಾರು 40 ಸಂಘಗಳು ಮುಷ್ಕರಕ್ಕೆ ಬೆಂಬಲ ನೀಡುತ್ತೀವೆ.

ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸೇರಿದಂತೆ ಇತರೆ ಇಲಾಖೆಗಳ ನೌಕರರ ಸಂಘ ಸಹ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಇದರಿಂದ ಸುಮಾರು 10 ಲಕ್ಷ ಸರ್ಕಾರಿ ನೌಕರರರಿಂದ ಮುಷ್ಕರದಲ್ಲಿ ಭಾಗಿಯಾಗಲಿದ್ದು, ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಲಭ್ಯವಿರುವುದಿಲ್ಲ. ಇದು ಒಂದು ರೀತಿಯಲ್ಲಿ ಕರ್ನಾಟಕ ಬಂದ್ ಎಂದೇ ಹೇಳಬಹುದಾಗಿದೆ.

ಈ ಬಗ್ಗೆ ಮಾತನಾಡಿರುವ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ”ಇಂದು ಓಪಿಡಿ ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ. ಆಸ್ಪತ್ರೆಯಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಆದರೆ ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರ, 19 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ. ಹಾಗಾಗಿ ರಾಜ್ಯದ ಎಲ್ಲಾ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಲಿದ್ದು, ತರಗತಿಗಳು ನಡೆಯುವುದಿಲ್ಲ. ಇದೇ ತಿಂಗಳು (ಮಾರ್ಚ್) ಮಕ್ಕಳಿಗೆ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದೆನಿಸುತ್ತದೆ.

ರಾಜ್ಯ ಸರ್ಕಾರಿ ನೌಕರರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ(ಫೆ.28) ಮಧ್ಯರಾತ್ರಿ 2.30ರ ವರೆಗೂ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಬೊಮ್ಮಾಯಿ ಇಂದು (ಮಾ.1) ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...