Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...