Homeಮುಖಪುಟಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

ಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

- Advertisement -
- Advertisement -

ಸ್ವಯಂ ಘೋಷಿತ ಗೋರಕ್ಷಕ, ಇಬ್ಬರು ಮುಸ್ಲಿಮರ ಕೊಲೆ ಪ್ರಕರಣದ ಆರೋಪಿ ಮೋನು ಮಾನೇಸರ್‌ನ ಕಾರ್ಯಕ್ರಮಗಳನ್ನು ಯೂಟ್ಯೂಬ್‌ ತನ್ನ ಮ್ಯಾನಿಟೈಸೇಷನ್‌ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಹೀಗಾಗಿ ಮೋನು ಮಾನೇಸರ್‌ ಪೋಸ್ಟ್‌ ಮಾಡುವ ವಿಡಿಯೊಗಳಿಗೆ ಇನ್ನು ಮುಂದೆ ಹಣ ಬರುವುದಿಲ್ಲ.

ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆತನ ಯೂಟ್ಯೂಬ್‌ ಚಾನೆಲ್‌ನಿಂದ ಒಂಬತ್ತು ವೀಡಿಯೊಗಳನ್ನು ತೆರೆವು ಮಾಡಲಾಗಿದೆ. ಇತರ ಇಬ್ಬರಿಗೆ ವಯಸ್ಸಿನ ನಿರ್ಬಂಧಗಳನ್ನು ಹಾಕಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಅಮೆರಿಕ ಮೂಲದ ಸುದ್ದಿ ವೆಬ್‌ಸೈಟ್‌ Codastorಗೆ ಯೂಟ್ಯೂಟ್‌‌ ಸಂಸ್ಥೆ ಮಂಗಳವಾರ ಇಮೇಲ್ ಮೂಲಕ ಸ್ಪಷ್ಟನೆ ನೀಡಿದೆ. ಮೋನು ಮೋನೇಸರ್‌‌ ಕಮ್ಯುನಿಟಿ ಸ್ಟಾಡರ್ಡ್‌ಗಳನ್ನು ಉಲ್ಲಂಘಿಸುತ್ತಿರುವುದನ್ನು ಉಲ್ಲೇಖಿಸಿದೆ. ಮೋನೇಸರ್‌ ಮತ್ತು ಇತರರು ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗುವ ಕೆಲವು ದಿನಗಳ ಮೊದಲು ತನಿಖಾ ವರದಿ ಪ್ರಕಟಿಸಿದ್ದ ಆಲ್ಟ್‌ನ್ಯೂಸ್‌, ಮೋನು ಹೇಗೆ ಕಾನೂನಿನ ತಡೆ ಇಲ್ಲದೆ ಹಲವಾರು ಹಿಂಸಾತ್ಮಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಹೊರಗೆಳೆದಿತ್ತು. ಆಲ್ಟ್‌ನ್ಯೂಸ್‌ನ ಶಿಂಜಿನಿ ಮಜುಂದಾರ್‌ ತನಿಖಾ ವರದಿ ಬರೆದಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಮೋನು, ಸಾಕಷ್ಟು ಫಾಲೋಯರ್ಸ್‌‌ಗಳನ್ನು ಹೊಂದಿದ್ದಾರೆ. ಯೂಟ್ಯೂಬ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು, ಫೇಸ್‌ಬುಕ್ ಪುಟದಲ್ಲಿ 83,000 ಫಾಲೋಯರ್ಸ್‌ಗಳನ್ನು ಹೊಂದಿದ್ದಾರೆ. ಮೆಟಾ ಮತ್ತು ಯೂಟ್ಯೂಬ್‌ನ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹಲವಾರು ವಿಷಯಗಳನ್ನು ಮೋನು ಅಪ್‌ಲೋಡ್‌ ಮಾಡುತ್ತಲೇ ಬಂದಿದ್ದಾನೆ.

ಗಾಯಗೊಂಡ ಸ್ಥಿತಿಯಲ್ಲಿರುವ ವ್ಯಕ್ತಿಗಳ ತಲೆಗೂದಲಿಡಿದು ಚಿತ್ರ ಹಿಂಸೆ ನೀಡುತ್ತಿರುವ ಪೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಮೋನು ಮತ್ತು ಆತನ ಸಹಚರರು ಅಪ್‌ಲೋಡ್ ಮಾಡುತ್ತಾ ಬಂದಿದ್ದಾರೆ. ಹಸುವಿನ ಕಳ್ಳಸಾಗಣೆಯಲ್ಲಿ ತೊಡಗಿದ ವ್ಯಕ್ತಿಗಳು ಇವರೆಂದು ಮೋನು ಬಣದವರು ವಾದಿಸುತ್ತಾರೆ.

ಮೋನು ಅವರ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಯಾವುದೇ ವಿಷಯದ ಕುರಿತು ಮೆಟಾ ಸಂಸ್ಥೆ ಈವರೆಗೆ ಕ್ರಮ ಜರುಗಿಸಿಲ್ಲ.

ಕೊಲೆ ಪ್ರಕರಣ

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಈ ಇಬ್ಬರು ಮುಸ್ಲಿಮರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...