Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...