Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...