Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...