Homeಮುಖಪುಟವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ''ಕೈಲಾಸ'' ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

ವಿಶ್ವಸಂಸ್ಥೆಯ ಸಭೆಯಲ್ಲಿ ನಿತ್ಯಾನಂದನ ”ಕೈಲಾಸ” ದೇಶದ ಪ್ರತಿನಿಧಿ ಭಾಗಿ: ಭಾರತದ ವಿರುದ್ಧ ಆರೋಪ

- Advertisement -
- Advertisement -

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿ (CESCR) ಸಭೆಯಲ್ಲಿ “ಕೈಲಾಸ” ದೇಶದ “ಶಾಶ್ವತ ರಾಯಭಾರಿ”ಯಾಗಿ ವಿಜಯಪ್ರಿಯಾ ನಿತ್ಯಾನಂದ ಎಂಬ ಮಹಿಳೆ ಪ್ರತಿನಿಧಿಸಿದ್ದಾರೆ.

ಭಾರತದಲ್ಲಿ ಕೆಲದಿನಗಳ ಹಿಂದೆ ಸ್ವಯಂ-ಘೋಷಿತ ದೇವಮಾನವ ನಿತ್ಯಾನಂದ ಅತ್ಯಾಚಾರ ಪ್ರಕರಣದಲ್ಲಿ ಕುಖ್ಯಾತಿ ಗಳಿಸಿದ್ದನು. ಆತ ದೇಶಬಿಟ್ಟು ಹೋದ ಬಳಿಕ “ಕೈಲಾಸ” ಎನ್ನುವ ದೇಶವನ್ನು ಸ್ಥಾಪನೆ ಮಾಡಿಕೊಂಡಿದ್ದನು. ಇತ್ತಿಚೆಗೆ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಆ ದೇಶದ ಪ್ರತಿನಿಧಿಯೊಬ್ಬರು ಭಾಗವಹಿಸಿದ್ದರು. ಅವರು ”ನಿತ್ಯಾನಂದ, ಭಾರತದಿಂದ ಹಿಂಸೆಗೆ ಒಳಗಾಗಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಆ ಮಹಿಳೆ ತನ್ನ ಸರದಿ ಬಂದಾಗ, ”ಕೈಲಾಸ- ಹಿಂದೂಗಳಿಗೆ ಮೊದಲ ಸಾರ್ವಭೌಮ ದೇಶವಾಗಿದೆ. ಇದನ್ನು ನಿತ್ಯಾನಂದ ಪರಮಶಿವಂ ಅವರು ಸ್ಥಾಪಿಸಿದ್ದಾರೆ. ನಿತ್ಯಾನಂದ ಪರಮಶಿವಂ ಅವರು ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರು ಆಗಿದ್ದಾರೆ. ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿ ಶೈವ ಸ್ಥಳೀಯ ಕೃಷಿ ಬುಡಕಟ್ಟು ಜನಾಂಗವನ್ನು ಒಳಗೊಂಡಂತೆ 10,000 ಹಿಂದೂ ಸಂಪ್ರದಾಯಗಳನ್ನು ಈ ದೇಶ ಒಳಗೊಂಡಿದೆ” ಎಂದು ಕೈಲಾಸ ದೇಶದ ಪರಿಚಯವನ್ನು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಈ ಕೈಲಾಸ ದೇಶವು ಈಕ್ವೆಡಾರ್‌ನ ಕರಾವಳಿಯಲ್ಲಿದೆ ಎಂದು ವರದಿಯಾಗಿದೆ. ಕೈಲಾಸ ತನ್ನದೇ ಆದ ಪಾಸ್‌ಪೋರ್ಟ್, ಧ್ವಜ ಮತ್ತು “ರಿಸರ್ವ್ ಬ್ಯಾಂಕ್ ಆಫ್ ಕೈಲಾಸ” ಎಂಬ ಬ್ಯಾಂಕ್ ಕೂಡ ಹೊಂದಿದೆ ಎಂದು ಹೇಳಲಾಗುತ್ತದೆ. ನಿತ್ಯಾನಂದ ಡಿಸೆಂಬರ್ 2020 ರಲ್ಲಿ ತಮ್ಮ ದೇಶಕ್ಕೆ ವಿಮಾನಗಳನ್ನು ಸಹ ಘೋಷಿಸಿದರು.

”ಕೈಲಾಸ” ಭೂಮಿಯ ಮೇಲಿನ ಶ್ರೇಷ್ಠ ಹಿಂದೂ ರಾಷ್ಟ್ರ. ”ತಮ್ಮದೇ ದೇಶಗಳಲ್ಲಿ ಹಿಂದೂ ಧರ್ಮವನ್ನು ಅಧಿಕೃತವಾಗಿ ಆಚರಿಸುವ ಹಕ್ಕನ್ನು ಕಳೆದುಕೊಂಡ ಹಿಂದೂಗಳಿಂದ ಸೃಷ್ಟಿಸಲ್ಪಟ್ಟ ಗಡಿಗಳಿಲ್ಲದ ರಾಷ್ಟ್ರ” ಎಂದು ಕೈಲಾಸ್‌ದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ.

ಈ ಕೈಲಾಸ ದೇಶದ ಸ್ಥಾಪಕ ನಿತ್ಯಾನಂದ, ಅತ್ಯಾಚಾರ, ಚಿತ್ರಹಿಂಸೆ, ಅಪಹರಣ, ಮತ್ತು ಮಕ್ಕಳ ಅಕ್ರಮ ಬಂಧನ (IPC) ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೇ 400,000 ಡಾಲರ್ ವಂಚನೆ ಪ್ರಕರಣದಲ್ಲಿ ಆತನನ್ನು ಫ್ರೆಂಚ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. 2019ರಲ್ಲಿ ನಿತ್ಯಾನಂದ ಭಾರತದಿಂದ ಪಲಾಯನಗೈದಿದ್ದರು.

2020 ರ ಜನವರಿಯಲ್ಲಿ ವಿವಾದಾತ್ಮಕ ಸ್ವಯಂ-ಘೋಷಿತ ದೇವಮಾನವನ ಬಗ್ಗೆ ಮಾಹಿತಿ ಕೋರಿ ಇಂಟರ್ಪೋಲ್, ಬ್ಲೂ ಕಾರ್ನರ್ ನೋಟಿಸ್ ನೀಡಿತು. (ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆ ಬ್ಲೂ ಕಾರ್ನರ್ ನೋಟೀಸ್ ಅನ್ನು ನೀಡುತ್ತದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....