HomeಮುಖಪುಟJNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

JNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರ ಪ್ರಕಾರ ಕಾಲೇಜಿನ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯು ಧರಣಿ ಮಾಡಿದರೆ 20 ಸಾವಿರ ರೂ. ಅಥವಾ 30 ಸಾವಿರ ರೂ. ದಂಡ ತೆರಬೇಕಾಗುತ್ತದೆ. ಹಿಂಸಾಚಾರದಲ್ಲಿ ಪಾಲ್ಗೊಂಡರೆ ಪ್ರವೇಶ ರದ್ದುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

ಜೆಎನ್‌ಯು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸರಿಯಾದ ನಡವಳಿಕೆಯ 10-ಪುಟದ ನಿಯಮಗಳು ಪ್ರತಿಭಟನೆ ಮತ್ತು ಫೋರ್ಜರಿಯಂತಹ ವಿವಿಧ ಕೃತ್ಯಗಳಿಗೆ ಶಿಕ್ಷೆಯನ್ನು ಸೂಚಿಸುತ್ತವೆ.

ಡಾಕ್ಯುಮೆಂಟ್ ಪ್ರಕಾರ, ಈ ನಿಯಮಗಳು ಫೆಬ್ರವರಿ 3ರಂದು ಜಾರಿಗೆ ಬಂದವೆ. ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನದ ವಿಚಾರವಾಗಿ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆಗಳು ನಡೆದವು ಆ ಬಳಿಕ ಈ ನಿಯಮಗಳನ್ನು ಮಾಡಲಾಗಿದೆ. ಇದನ್ನು ಶಿಸ್ತು ಮತ್ತು ನಡವಳಿಕೆಯ ನಿಯಮಗಳು ಎಂದು ಕರೆಯಲಾಗಿದೆ. ಈ ನಿಯಮಗಳು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. 10 ಪುಟಗಳ ನಿಯಮದಲ್ಲಿ 17 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವಿಶ್ವವಿದ್ಯಾನಿಲಯದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಎಕ್ಸಿಕ್ಯೂಟಿವ್ ಕೌನ್ಸಿಲ್ ಈ ಹೊಸ ನಿಯಮಗಳನ್ನು ಅನುಮೋದಿಸಿದೆ ಎಂದು ನಿಯಮಗಳ ದಾಖಲೆ ಹೇಳುತ್ತದೆ.

ಈ ವಿಷಯವನ್ನು ಹೆಚ್ಚುವರಿ ಕಾರ್ಯಸೂಚಿಯಾಗಿ ತರಲಾಗಿದೆ ಮತ್ತು “ಕೋರ್ಟ್ ವಿಷಯಗಳಿಗಾಗಿ” ಈ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಉಲ್ಲೇಖಿಸಿ ಕಾರ್ಯಕಾರಿ ಮಂಡಳಿಯ ಸದಸ್ಯರು ಪಿಟಿಐಗೆ ತಿಳಿಸಿದರು.

ಹೆಸರು ಹೇಳಲು ಇಚ್ಛಿಸದ ಕಾರ್ಯಕಾರಿ ಮಂಡಳಿಯ ಸದಸ್ಯರೊಬ್ಬರು, ”ಸಭೆಯಲ್ಲಿ ಈ ವಿಷಯವನ್ನು ಸುದೀರ್ಘವಾಗಿ ಚರ್ಚಿಸಲಾಗಿಲ್ಲ ಮತ್ತು ನ್ಯಾಯಾಲಯದ ವಿಷಯಗಳಿಗಾಗಿ ನಿಯಮಗಳನ್ನು ರಚಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಕಾರ್ಯಕಾರಿ ಮಂಡಳಿ ಸದಸ್ಯ ಬ್ರಹ್ಮ ಪ್ರಕಾಶ್ ಸಿಂಗ್ ಅವರು, ”ವಿಶ್ವವಿದ್ಯಾಲಯವು ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಸಂಪೂರ್ಣ ದಾಖಲೆಯನ್ನು ಸಿದ್ಧಪಡಿಸಲು ಯೋಜಿಸಿರಬಹುದು ಆದರೆ ಅದನ್ನು ಸಭೆಯಲ್ಲಿ ಸರಿಯಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ್ದಾರೆ.

ಎಬಿವಿಪಿಯ ಜೆಎನ್‌ಯು ಕಾರ್ಯದರ್ಶಿ ವಿಕಾಸ್ ಪಟೇಲ್, ”ಈ ಹೊಸ ಸರ್ವಾಧಿಕಾರಿ (‘ತುಗ್ಲಕಿ’) ನೀತಿ ಸಂಹಿತೆಯ ಅಗತ್ಯವಿಲ್ಲ, ಹಳೆಯ ನೀತಿ ಸಂಹಿತೆ ಸಾಕಷ್ಟು ಪರಿಣಾಮಕಾರಿಯಾಗಿದೆ. ಸುರಕ್ಷತಾ ಭದ್ರತೆ ಮತ್ತು ಸುವ್ಯವಸ್ಥೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಬದಲು, ಜೆಎನ್‌ಯು ನಿರ್ವಾಹಕರು ಯಾವುದೇ ಚರ್ಚೆಯಿಲ್ಲದೆ ಈ ಕಠಿಣ ನೀತಿ ಸಂಹಿತೆಯನ್ನು ಹೇರಿದ್ದಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

ಈ ನಿಯಮಗಳನ್ನು ಜಾರಿ ತರುವ ಮೊದಲು ಅಥವಾ ನಂತರ ಪ್ರವೇಶ ಪಡೆದ ಅರೆಕಾಲಿಕ ವಿದ್ಯಾರ್ಥಿಗಳು ಸೇರಿದಂತೆ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮಗಳು ಅನ್ವಯಿಸುತ್ತವೆ ಎಂದು ಡಾಕ್ಯುಮೆಂಟ್ ಹೇಳುತ್ತದೆ.

ನಿಯಮಗಳ ಪಟ್ಟಿಯಲ್ಲಿ, ತಡೆಗಟ್ಟುವಿಕೆ, ಜೂಜಾಟದಲ್ಲಿ ತೊಡಗುವುದು, ಹಾಸ್ಟೆಲ್ ಕೊಠಡಿಗಳನ್ನು ಅನಧಿಕೃತವಾಗಿ ವಶಪಡಿಸಿಕೊಳ್ಳುವುದು, ನಿಂದನೀಯ ಮತ್ತು ಅವಹೇಳನಕಾರಿ ಭಾಷೆಯ ಬಳಕೆ ಮತ್ತು ಫೋರ್ಜರಿ ಮಾಡುವುದು ಸೇರಿದಂತೆ 17 “ಅಪರಾಧಗಳಿಗೆ” ಶಿಕ್ಷೆಗಳ ಬಗ್ಗೆ ತಿಳಿಸಲಾಗಿದೆ. ದೂರುಗಳ ಪ್ರತಿಯನ್ನು ಪೋಷಕರಿಗೆ ಕಳುಹಿಸಲಾಗುವುದು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಬ್ಬರನ್ನೂ ಒಳಗೊಂಡ ಪ್ರಕರಣಗಳನ್ನು ವಿಶ್ವವಿದ್ಯಾಲಯಕ್ಕೆ ಹಾಗೂ ಕೇಂದ್ರ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿಗೆ ತಿಳಿಸಬಹುದು. ಲೈಂಗಿಕ ಕಿರುಕುಳ, ರ್ಯಾಗಿಂಗ್ ಹಾಗೂ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರಗಳು ಶಿಸ್ತುಪಾಲನಾ ಕಚೇರಿಯ ವ್ಯಾಪ್ತಿಗೆ ಬರಲಿವೆ.

”ಕಾನೂನುಗಳಲ್ಲಿ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಶಿಸ್ತುಪಾಲನಾ ವಿಚಾರಣೆಯ ನಂತರ ಹೊಸ ನಿಯಮಗಳನ್ನು ರೂಪಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಶಿಸ್ತುಪಾಲನಾಧಿಕಾರಿ ರಜನೀಶ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ. ಈ ಶಿಸ್ತುಪಾಲನಾ ವಿಚಾರಣೆ ಯಾವಾಗ ಪ್ರಾರಂಭವಾಯಿತು ಎಂದು ಅವರು ಬಹಿರಂಗಪಡಿಸಲಿಲ್ಲ.

ಘೆರಾವ್ ಹಾಕುವುದು, ಪ್ರತಿಭಟನೆಗೆ ಕೂರುವುದು ಶೈಕ್ಷಣಿಕ ಮತ್ತು ಶಿಸ್ತುಪಾಲನಾ ಕಾರ್ಯಚಟುವಟಿಕೆಯನ್ನು ಅಡ್ಡಿಪಡಿಸುವ ಅಥವಾ ಹಿಂಸಾಚಾರಕ್ಕೆ ಪ್ರಚೋದಿಸುವ ಯಾವುದೇ ಕ್ರಿಯೆಯಂತಹ ಎಲ್ಲಾ ಹಿಂಸಾಚಾರ ಮತ್ತು ದಬ್ಬಾಳಿಕೆಗೆ ಶಿಕ್ಷೆಗಳನ್ನು ಹೊಸ ನಿಯಮಗಳು ಒಳಗೊಂಡಿವೆ.

ಶಿಕ್ಷೆಗಳಲ್ಲಿ “ಪ್ರವೇಶವನ್ನು ರದ್ದುಗೊಳಿಸುವುದು ಅಥವಾ ಪದವಿಯನ್ನು ಹಿಂಪಡೆಯುವುದು ಅಥವಾ ನಿಗದಿತ ಅವಧಿಗೆ ನೋಂದಣಿ ನಿರಾಕರಣೆ, ನಾಲ್ಕು ಸೆಮಿಸ್ಟರ್‌ಗಳವರೆಗೆ, ಅಥವಾ ಸಂಪೂರ್ಣ JNU ಕ್ಯಾಂಪಸ್‌ನಿಂದ ಹೊರಹಾಕುವಿಕೆ, 30,000 ರೂ.ವರೆಗೆ ದಂಡ. ಹಳೆಯ ನಿಯಮಗಳ ಪ್ರಕಾರ, ಒಂದು/ಎರಡು ಸೆಮಿಸ್ಟರ್‌ಗಳ ಕಾಲ ಹಾಸ್ಟೆಲ್‌ನಿಂದ ಹೊರಹಾಕುವಿಕುವುದನ್ನು ಒಳಗೊಂಡಿದೆ.

ವಿಷಯವು ನ್ಯಾಯವಾಗಿದ್ದರೆ ನ್ಯಾಯಾಲಯದ ಆದೇಶ ಮತ್ತು ನಿರ್ದೇಶನದಂತೆ ಮುಖ್ಯ ಶಿಸ್ತುಪಾಲನಾ ಕಚೇರಿಯು ಕ್ರಮ ಕೈಗೊಳ್ಳುತ್ತದೆ ಎಂದು ನಿಯಮಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...