HomeಮುಖಪುಟJNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

JNU ಕ್ಯಾಂಪಸ್‌ನಲ್ಲಿ ಪ್ರತಿಭಟಿಸಿದರೆ 20-30 ಸಾವಿರ ದಂಡ: ಹೊಸ ನಿಯಮಕ್ಕೆ ಆಕ್ಷೇಪ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರ ಪ್ರಕಾರ ಕಾಲೇಜಿನ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯು ಧರಣಿ ಮಾಡಿದರೆ 20 ಸಾವಿರ ರೂ. ಅಥವಾ 30 ಸಾವಿರ ರೂ. ದಂಡ ತೆರಬೇಕಾಗುತ್ತದೆ. ಹಿಂಸಾಚಾರದಲ್ಲಿ ಪಾಲ್ಗೊಂಡರೆ ಪ್ರವೇಶ ರದ್ದುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

ಜೆಎನ್‌ಯು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸರಿಯಾದ ನಡವಳಿಕೆಯ 10-ಪುಟದ ನಿಯಮಗಳು ಪ್ರತಿಭಟನೆ ಮತ್ತು ಫೋರ್ಜರಿಯಂತಹ ವಿವಿಧ ಕೃತ್ಯಗಳಿಗೆ ಶಿಕ್ಷೆಯನ್ನು ಸೂಚಿಸುತ್ತವೆ.

ಡಾಕ್ಯುಮೆಂಟ್ ಪ್ರಕಾರ, ಈ ನಿಯಮಗಳು ಫೆಬ್ರವರಿ 3ರಂದು ಜಾರಿಗೆ ಬಂದವೆ. ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನದ ವಿಚಾರವಾಗಿ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆಗಳು ನಡೆದವು ಆ ಬಳಿಕ ಈ ನಿಯಮಗಳನ್ನು ಮಾಡಲಾಗಿದೆ. ಇದನ್ನು ಶಿಸ್ತು ಮತ್ತು ನಡವಳಿಕೆಯ ನಿಯಮಗಳು ಎಂದು ಕರೆಯಲಾಗಿದೆ. ಈ ನಿಯಮಗಳು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. 10 ಪುಟಗಳ ನಿಯಮದಲ್ಲಿ 17 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವಿಶ್ವವಿದ್ಯಾನಿಲಯದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಎಕ್ಸಿಕ್ಯೂಟಿವ್ ಕೌನ್ಸಿಲ್ ಈ ಹೊಸ ನಿಯಮಗಳನ್ನು ಅನುಮೋದಿಸಿದೆ ಎಂದು ನಿಯಮಗಳ ದಾಖಲೆ ಹೇಳುತ್ತದೆ.

ಈ ವಿಷಯವನ್ನು ಹೆಚ್ಚುವರಿ ಕಾರ್ಯಸೂಚಿಯಾಗಿ ತರಲಾಗಿದೆ ಮತ್ತು “ಕೋರ್ಟ್ ವಿಷಯಗಳಿಗಾಗಿ” ಈ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಉಲ್ಲೇಖಿಸಿ ಕಾರ್ಯಕಾರಿ ಮಂಡಳಿಯ ಸದಸ್ಯರು ಪಿಟಿಐಗೆ ತಿಳಿಸಿದರು.

ಹೆಸರು ಹೇಳಲು ಇಚ್ಛಿಸದ ಕಾರ್ಯಕಾರಿ ಮಂಡಳಿಯ ಸದಸ್ಯರೊಬ್ಬರು, ”ಸಭೆಯಲ್ಲಿ ಈ ವಿಷಯವನ್ನು ಸುದೀರ್ಘವಾಗಿ ಚರ್ಚಿಸಲಾಗಿಲ್ಲ ಮತ್ತು ನ್ಯಾಯಾಲಯದ ವಿಷಯಗಳಿಗಾಗಿ ನಿಯಮಗಳನ್ನು ರಚಿಸಲಾಗಿದೆ ಎಂದು ನಮಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ಕಾರ್ಯಕಾರಿ ಮಂಡಳಿ ಸದಸ್ಯ ಬ್ರಹ್ಮ ಪ್ರಕಾಶ್ ಸಿಂಗ್ ಅವರು, ”ವಿಶ್ವವಿದ್ಯಾಲಯವು ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಸಂಪೂರ್ಣ ದಾಖಲೆಯನ್ನು ಸಿದ್ಧಪಡಿಸಲು ಯೋಜಿಸಿರಬಹುದು ಆದರೆ ಅದನ್ನು ಸಭೆಯಲ್ಲಿ ಸರಿಯಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ್ದಾರೆ.

ಎಬಿವಿಪಿಯ ಜೆಎನ್‌ಯು ಕಾರ್ಯದರ್ಶಿ ವಿಕಾಸ್ ಪಟೇಲ್, ”ಈ ಹೊಸ ಸರ್ವಾಧಿಕಾರಿ (‘ತುಗ್ಲಕಿ’) ನೀತಿ ಸಂಹಿತೆಯ ಅಗತ್ಯವಿಲ್ಲ, ಹಳೆಯ ನೀತಿ ಸಂಹಿತೆ ಸಾಕಷ್ಟು ಪರಿಣಾಮಕಾರಿಯಾಗಿದೆ. ಸುರಕ್ಷತಾ ಭದ್ರತೆ ಮತ್ತು ಸುವ್ಯವಸ್ಥೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಬದಲು, ಜೆಎನ್‌ಯು ನಿರ್ವಾಹಕರು ಯಾವುದೇ ಚರ್ಚೆಯಿಲ್ಲದೆ ಈ ಕಠಿಣ ನೀತಿ ಸಂಹಿತೆಯನ್ನು ಹೇರಿದ್ದಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

ಈ ನಿಯಮಗಳನ್ನು ಜಾರಿ ತರುವ ಮೊದಲು ಅಥವಾ ನಂತರ ಪ್ರವೇಶ ಪಡೆದ ಅರೆಕಾಲಿಕ ವಿದ್ಯಾರ್ಥಿಗಳು ಸೇರಿದಂತೆ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮಗಳು ಅನ್ವಯಿಸುತ್ತವೆ ಎಂದು ಡಾಕ್ಯುಮೆಂಟ್ ಹೇಳುತ್ತದೆ.

ನಿಯಮಗಳ ಪಟ್ಟಿಯಲ್ಲಿ, ತಡೆಗಟ್ಟುವಿಕೆ, ಜೂಜಾಟದಲ್ಲಿ ತೊಡಗುವುದು, ಹಾಸ್ಟೆಲ್ ಕೊಠಡಿಗಳನ್ನು ಅನಧಿಕೃತವಾಗಿ ವಶಪಡಿಸಿಕೊಳ್ಳುವುದು, ನಿಂದನೀಯ ಮತ್ತು ಅವಹೇಳನಕಾರಿ ಭಾಷೆಯ ಬಳಕೆ ಮತ್ತು ಫೋರ್ಜರಿ ಮಾಡುವುದು ಸೇರಿದಂತೆ 17 “ಅಪರಾಧಗಳಿಗೆ” ಶಿಕ್ಷೆಗಳ ಬಗ್ಗೆ ತಿಳಿಸಲಾಗಿದೆ. ದೂರುಗಳ ಪ್ರತಿಯನ್ನು ಪೋಷಕರಿಗೆ ಕಳುಹಿಸಲಾಗುವುದು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಬ್ಬರನ್ನೂ ಒಳಗೊಂಡ ಪ್ರಕರಣಗಳನ್ನು ವಿಶ್ವವಿದ್ಯಾಲಯಕ್ಕೆ ಹಾಗೂ ಕೇಂದ್ರ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿಗೆ ತಿಳಿಸಬಹುದು. ಲೈಂಗಿಕ ಕಿರುಕುಳ, ರ್ಯಾಗಿಂಗ್ ಹಾಗೂ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರಗಳು ಶಿಸ್ತುಪಾಲನಾ ಕಚೇರಿಯ ವ್ಯಾಪ್ತಿಗೆ ಬರಲಿವೆ.

”ಕಾನೂನುಗಳಲ್ಲಿ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಶಿಸ್ತುಪಾಲನಾ ವಿಚಾರಣೆಯ ನಂತರ ಹೊಸ ನಿಯಮಗಳನ್ನು ರೂಪಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ಶಿಸ್ತುಪಾಲನಾಧಿಕಾರಿ ರಜನೀಶ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ. ಈ ಶಿಸ್ತುಪಾಲನಾ ವಿಚಾರಣೆ ಯಾವಾಗ ಪ್ರಾರಂಭವಾಯಿತು ಎಂದು ಅವರು ಬಹಿರಂಗಪಡಿಸಲಿಲ್ಲ.

ಘೆರಾವ್ ಹಾಕುವುದು, ಪ್ರತಿಭಟನೆಗೆ ಕೂರುವುದು ಶೈಕ್ಷಣಿಕ ಮತ್ತು ಶಿಸ್ತುಪಾಲನಾ ಕಾರ್ಯಚಟುವಟಿಕೆಯನ್ನು ಅಡ್ಡಿಪಡಿಸುವ ಅಥವಾ ಹಿಂಸಾಚಾರಕ್ಕೆ ಪ್ರಚೋದಿಸುವ ಯಾವುದೇ ಕ್ರಿಯೆಯಂತಹ ಎಲ್ಲಾ ಹಿಂಸಾಚಾರ ಮತ್ತು ದಬ್ಬಾಳಿಕೆಗೆ ಶಿಕ್ಷೆಗಳನ್ನು ಹೊಸ ನಿಯಮಗಳು ಒಳಗೊಂಡಿವೆ.

ಶಿಕ್ಷೆಗಳಲ್ಲಿ “ಪ್ರವೇಶವನ್ನು ರದ್ದುಗೊಳಿಸುವುದು ಅಥವಾ ಪದವಿಯನ್ನು ಹಿಂಪಡೆಯುವುದು ಅಥವಾ ನಿಗದಿತ ಅವಧಿಗೆ ನೋಂದಣಿ ನಿರಾಕರಣೆ, ನಾಲ್ಕು ಸೆಮಿಸ್ಟರ್‌ಗಳವರೆಗೆ, ಅಥವಾ ಸಂಪೂರ್ಣ JNU ಕ್ಯಾಂಪಸ್‌ನಿಂದ ಹೊರಹಾಕುವಿಕೆ, 30,000 ರೂ.ವರೆಗೆ ದಂಡ. ಹಳೆಯ ನಿಯಮಗಳ ಪ್ರಕಾರ, ಒಂದು/ಎರಡು ಸೆಮಿಸ್ಟರ್‌ಗಳ ಕಾಲ ಹಾಸ್ಟೆಲ್‌ನಿಂದ ಹೊರಹಾಕುವಿಕುವುದನ್ನು ಒಳಗೊಂಡಿದೆ.

ವಿಷಯವು ನ್ಯಾಯವಾಗಿದ್ದರೆ ನ್ಯಾಯಾಲಯದ ಆದೇಶ ಮತ್ತು ನಿರ್ದೇಶನದಂತೆ ಮುಖ್ಯ ಶಿಸ್ತುಪಾಲನಾ ಕಚೇರಿಯು ಕ್ರಮ ಕೈಗೊಳ್ಳುತ್ತದೆ ಎಂದು ನಿಯಮಗಳು ಹೇಳುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...