Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ - ಒಂದು...

ಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ – ಒಂದು ಮೌಲ್ಯಮಾಪನ

- Advertisement -
- Advertisement -

ಜಯಪ್ರಕಾಶ ನಾರಾಯಣ (ಜೆ.ಪಿ) ಅವರ ಹೆಸರು ಕೇಳಿದಾಕ್ಷಣ ನಮಗೆ ನೆನಪಾಗುವುದು 1970ರ ದಶಕದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದ ಜನರ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದು, ಮತ್ತು ಜೆ.ಪಿಯವರ ನೇತೃತ್ವದಲ್ಲಿ ಅದಕ್ಕೆ ಪ್ರತಿರೋಧ ಉಂಟಾಗಿ 1977ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಸೋಲು ಕಂಡಿದ್ದು. ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜೈಲುಪಾಲಾದ ಜೆ.ಪಿ. ಬಿಡುಗಡೆಗೊಂಡ ಮೇಲೆ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಸಾಧ್ಯ ಅನ್ನುವುದನ್ನು ತೋರಿಸಿದರು. ಆ ಸಂದರ್ಭದ ಅವರ ’ಸಂಪೂರ್ಣ ಕ್ರಾಂತಿ’ಯ ಪರಿಕಲ್ಪನೆ ಹಾಗೂ ಜೈಲು ದಿನಚರಿಗಳಿಂದಾಗಿ ದೇಶದಲ್ಲಿ ಮನೆಮಾತಾದ ಜೆ.ಪಿ. ಭಾರತದ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನೇ ಆರಂಭಿಸಿದರು. ಹೀಗಾಗಿ ಆಧುನಿಕ ಭಾರತದ ಇತಿಹಾಸದಲ್ಲಿ ಜೆ.ಪಿ.ಯವರು ಭದ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆದರೆ ಜೆ.ಪಿ.ಯವರಿಗೆ ಸಂಬಂಧಪಟ್ಟಂತೆ ಇಷ್ಟು ಮಾತ್ರ ಇತಿಹಾಸವಲ್ಲ. ಇಂದಿರಾ ಗಾಂಧಿಯವರ ನಿರಂಕುಶಾಧಿಕಾರವನ್ನು ಎದುರಿಸುವುದಕ್ಕೊ ಮೊದಲೇ, ಅಂದರೆ 1947ರವರೆಗೂ ಈ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಸಕ್ರಿಯವಾಗಿದ್ದರು. ಆನಂತರವೂ ಅವರು ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರುರವರ ಟೀಕಾಕಾರರಾಗಿದ್ದರು. ಬಿಹಾರದ ಶ್ರೀಮಂತವೇ ಎನ್ನಬಹುದಾದ ಕುಟುಂಬದಲ್ಲಿ ಹುಟ್ಟಿದ ಜೆ.ಪಿ. ಒಳ್ಳೆಯ ಶಿಕ್ಷಣವನ್ನು ಪಡೆದರು; ಆಧುನಿಕ ಚಿಂತನೆಗೆ ತಮ್ಮನ್ನು ತಾವು ತೆರೆದುಕೊಂಡರು. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಗತಿಪರ ಮನೋಧರ್ಮವನ್ನು ಮೈಗೂಡಿಸಿಕೊಂಡು ಸಮಾಜವಾದ ಮಾರ್ಕ್ಸ್‌ವಾದಗಳ ಕಡೆ ಆಕರ್ಷಿತರಾದರು. ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಅದರೊಳಗಿನ ಸಮಾಜವಾದಿ ಗುಂಪಿನ ಮುಖ್ಯ ಸದಸ್ಯರೂ ಅಗಿದ್ದರು.

ಇಂದಿನ ಪೀಳಿಗೆಯವರಿಗೆ ಜೆ.ಪಿ. ಎಂದು ಮಾತ್ರ ತಿಳಿದಿರುವ ಜಯಪ್ರಕಾಶ ನಾರಾಯಣದ ಬೌದ್ಧಿಕ ಪಯಣದ ವಿವರಗಳು ಅಪರಿಚಿತವೆಂದೇ ಹೇಳಬೇಕು. ಯಡೂರ ಮಹಾಬಲ ಅವರು ಈ ಅವಶ್ಯಕತೆಯನ್ನು ಪೂರೈಸಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತರಾದ ಮಹಾಬಲರವರು ಈಗಾಗಲೇ ಲೋಹಿಯಾರವರ ವಿಚಾರಗಳ ವಿಮರ್ಶೆಯ ಮೂಲಕ ಲೋಹಿಯಾವಾದಿಗಳ ಬಗ್ಗೆ, ಲೋಹಿಯಾವಾದದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಜೆ.ಪಿಯವರ ಜೀವನ ಚರಿತ್ರೆಯಾಗಿರುವ ಈ ಕೃತಿಯೂ ಸಹ ಆ ಪ್ರಶ್ನೆಗಳ ಮುಂದುವರಿಕೆ ಎನ್ನಬಹುದು. ಅಲ್ಲದೆ ಈಶಾನ್ಯ ರಾಜ್ಯಗಳ ಹಿನ್ನೆಲೆಯಲ್ಲಿ ಭಾರತ-ಚೀನಾ ದೇಶಗಳ ಸಂಬಂಧಗಳ ಕುರಿತಾದ ಹಲವು ಗ್ರಂಥಗಳೂ ಅವರ ಲೇಖನಿಯಿಂದ ಹೊರಬಂದಿದೆ. ’ನಿಗೂಢ ಟಿಬೆಟ್, ’ಯುದ್ಧೋತ್ತರ ಕಾಂಡ’, ’ಅಕ್ಸಾಯ್ ಚಿನ್’ ಮುಂತಾದ ಕೃತಿಗಳೇ ಅಲ್ಲದೆ ’ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’ ಎಂಬ ಸ್ವಾತಂತ್ರ್ಯ ಹೋರಾಟದ ಕುರಿತಾದ ಪುಸ್ತಕವನ್ನೂ ರಚಿಸಿ ಮಹಾಬಲರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಪುಸ್ತಕ ಪರಿಚಯ: ನನ್ನ ಸಂಗೀತ ವ್ಯಾಸಂಗ (ಆತ್ಮಕಥೆ)

ಯಾವುದೇ ವಿಷಯದ ಕುರಿತು ಬರೆಯಲಿ, ಮಹಾಬಲ ಅವರ ಆ ಪ್ರಯತ್ನದಲ್ಲಿ ಸಾಕಷ್ಟು ಓದು, ಸಂಶೋಧನೆಗಳು ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಸಂಶೋಧನೆಯ ಫಲವಾಗಿ ಅವರು ಸಾಧಾರಣಕ್ಕಿಂತ ಭಿನ್ನವಾದ ತೀರ್ಮಾನಗಳಿಗೆ ಬರುತ್ತಾರೆ, ಆ ಮೂಲಕ ಓದುಗರಲ್ಲಿ ಹೊಸ ಪ್ರಶ್ನೆಗಳನ್ನು ಮೂಡಿಸುತ್ತಾರೆ.

ಜೆ.ಪಿಯವರ ಬಗೆಗಿನ ಈ ಕೃತಿಯೂ ಸಹ ಮಹಾಬಲರ ಸಂಶೋಧನೆಯ ಮತ್ತೊಂದು ಫಲ. ಜೆ.ಪಿ.ಯವರ ಬಾಲ್ಯ, ವಿದ್ಯಾಭ್ಯಾಸ, ಕೌಟುಂಬಿಕ ಜೀವನ, ರಾಜಕಾರಣ ಮುಂತಾದವುಗಳನ್ನು ಹಲವು ಆಕರಗಳ ಅಧ್ಯಯನದ ಮೂಲಕ ಪ್ರಸ್ತುತಪಡಿಸಲಾಗಿದೆ. ಅಲ್ಲದೆ, ಆ ಜೀವನದ ವಿವರಗಳನ್ನು ನೀಡುವಾಗಲೇ ಆಯಾ ಸಂದರ್ಭಗಳಲ್ಲಿನ ಜೆ.ಪಿ.ಯವರ ನಿಲುವುಗಳ ಮೌಲ್ಯಮಾಪನವನ್ನು ಮಹಾಬಲರು ನಡೆಸಿದ್ದಾರೆ. ಹೀಗೆ ಮಾಡುವಲ್ಲಿ ಇವರು ಯಾವ ಮುಲಾಜನ್ನು ತೋರುವುದಿಲ್ಲ; ಸರಿಯಾದ ತೀರ್ಮಾನಗಳನ್ನು ಹೊಗಳುವಂತೆಯೇ ವೈರುಧ್ಯಗಳಿಂದ ಕೂಡಿದ, ಅಥವಾ ಆ ಸಂದರ್ಭಕ್ಕೆ ಸರಿಹೊಂದದ ತೀರ್ಮಾನವನ್ನು ಅಷ್ಟೇ ಕಟುವಾಗಿ ಟೀಕಿಸುತ್ತಾರೆ.

ಕಾಂಗ್ರೆಸ್ ಪಕ್ಷದ ಸಮಾಜವಾದಿ ಗುಂಪಿನ ಸಕ್ರಿಯ ಸದಸ್ಯರಾಗಿದ್ದಾಗ ಜೆ.ಪಿ.ಯವರ ನಿಲುವುಗಳಿಗೂ, ನಂತರದ ಘಟ್ಟದ ಅವರ ನಿಲುವುಗಳಿಗೂ ಇರುವ ವೈರುಧ್ಯವನ್ನು ಎತ್ತಿತೋರಿಸುತ್ತಾರೆ. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಆರ್.ಎಸ್.ಎಸ್. ಕುರಿತ ಅವರ ವಿಮರ್ಶೆಗಳಿಗೂ ತುರ್ತು ಪರಿಸ್ಥಿತಿಯ ನಂತರ ಅದೇ ಸಂಘಟನೆಯ ಬಗ್ಗೆ ಬದಲಾದ ಅಭಿಪ್ರಾಯಗಳಿಗೂ ಒಂದಕ್ಕೊಂದು ತಾಳೆಯಾಗುವುದಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ನಿರೂಪಿಸುತ್ತಾರೆ.

ಮಾತ್ರವಲ್ಲದೆ ಜೆ.ಪಿ.ಯವರ ಸಮಕಾಲೀನರಾದ ಹಲವಾರು ರಾಜಕಾರಣಿಗಳು, ಆ ಕಾಲದ ಪ್ರಮುಖ ಬೆಳವಣಿಗೆಗಳು ಸಹ ಮಹಾಬಲರ ಪರಿಶೀಲನೆಯ ವಸ್ತುಗಳಾಗಿವೆ. ಸಾಮಾಜಿಕ ಬದಲಾವಣೆಗಾಗಿ ನಿರಂತರ ತುಡಿಯುತ್ತಿದ್ದ ಮನಸ್ಸುಳ್ಳ ಜೆ.ಪಿ.ಯವರ ನಿಲುವುಗಳು ಅವರ ಇಂಥ ತುಡಿತದ ಕಾರಣದಿಂದಲೇ ಕಾಲಕಾಲಕ್ಕೆ ಪರಸ್ಪರ ವಿರುದ್ಧವೆನಿಸುವ ರೀತಿಯಲ್ಲಿ ಬದಲಾಗುತ್ತಿದ್ದವೇನೋ ಎನ್ನುವ ಭಾವನೆಯನ್ನೂ ಮಹಾಬಲರ ಈ ಕೃತಿ ಹುಟ್ಟಿಸುತ್ತದೆ. ’ಸಂಪೂರ್ಣ ಕ್ರಾಂತಿ’ಯನ್ನು ಸದರಿ ಪುಸ್ತಕದ ಲೇಖಕರು ’ಸಂಪೂರ್ಣ ಭ್ರಾಂತಿ’ ಎಂತಲೂ ಕರೆಯುತ್ತಾರೆ ಮತ್ತು ಅದಕ್ಕೆ ಕಾರಣಗಳನ್ನು ಒದಗಿಸುತ್ತಾರೆ.

ಮಹಾಬಲರ ತೀರ್ಮಾನಗಳನ್ನು, ಮೌಲ್ಯಮಾಪನವನ್ನು ಓದುಗರು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ ಜೆ.ಪಿ.ಯವರಂತಹ ಪ್ರಮುಖ ವ್ಯಕ್ತಿಯ ಜೀವನದ ವಿವರಗಳನ್ನು ಅದರ ಎಲ್ಲ ಸಂಕೀರ್ಣತೆಗಳೊಂದಿಗೆ ತಿಳಿಯಲು ಈ ಕೃತಿ ಸಹಾಯಕವಾಗುತ್ತದೆ. ಜೆ.ಪಿ.ಯವರ ಬಗೆಗಿನ ಓದುಗರ ಮೌಲ್ಯಮಾಪನವನ್ನೇ ಮೌಲ್ಯಮಾಪನ ಮಾಡುವಂತೆ ಈ ಪುಸ್ತಕ ಪ್ರೇರೇಪಿಸುತ್ತದೆ; ಈ ಕಾರಣಗಳಿಗಾಗಿ ಇದೊಂದು ಓದಬೇಕಾದ ಪುಸ್ತಕ.

ಮುಗಿಸುವ ಮುನ್ನ ಒಂದು ಮಾತು; ಮಹಾಬಲರು ಕೈಗೆತ್ತಿಕೊಂಡಿರುವ ವಿಷಯಗಳು ಮೌಲಿಕವಾದವು. ಅವುಗಳು ಎಲ್ಲರನ್ನೂ ಸುಲಭವಾಗಿ ತಟ್ಟಬೇಕೆಂದರೆ ಮಹಾಬಲರ ಭಾಷೆಯ ಬಳಕೆ ಇನ್ನಷ್ಟ ಉತ್ತಮಗೊಳ್ಳಬೇಕಿದೆ; ಆಗ ಈ ಪುಸ್ತಕವು ಸೇರಿದಂತೆ ಅವರ ಅನೇಕ ಕೃತಿಗಳನ್ನು ಓದುಗರು ಸುಲಭವಾಗಿ ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಅವರು ತಮ್ಮ ವಿಷಯಮಂಡನೆ ಮತ್ತು ಬರವಣಿಗೆಯ ಶೈಲಿಯಲ್ಲಿ ಇನ್ನಷ್ಟು ಪ್ರಯೋಗಗಳನ್ನು ನಡೆಸಿ ಉತ್ತಮಪಡಿಸಿಕೊಂಡರೆ ಅವರ ಕೃತಿಗಳ ಮೌಲ್ಯ ಮತ್ತಷ್ಟು ಹೆಚ್ಚುವುದರಲ್ಲಿ ಅನುಮಾನವಿಲ್ಲ.

ಪ್ರೊ. ನಗರಗೆರೆ ರಮೇಶ್

ಪ್ರೊ. ನಗರಗೆರೆ ರಮೇಶ್
ನಗರಗೆರೆ ರಮೇಶ್ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆಯವರು. ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು ನಂತರ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಮಾನವ ಹಕ್ಕು ಸಂಘಟನೆಯಾದ ಪ್ರಜಾತಾಂತ್ರಿಕ ಜನರ ವೇದಿಕೆ ಮೊದಲಾದವುಗಳ ಭಾಗವಾಗಿದ್ದಾರೆ. ಎಲ್ಲ ಜನಪರ ಚಳವಳಿಗಳ ದೀರ್ಘಕಾಲದ ಒಡನಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...