Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ - ಒಂದು...

ಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ – ಒಂದು ಮೌಲ್ಯಮಾಪನ

- Advertisement -
- Advertisement -

ಜಯಪ್ರಕಾಶ ನಾರಾಯಣ (ಜೆ.ಪಿ) ಅವರ ಹೆಸರು ಕೇಳಿದಾಕ್ಷಣ ನಮಗೆ ನೆನಪಾಗುವುದು 1970ರ ದಶಕದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದ ಜನರ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದು, ಮತ್ತು ಜೆ.ಪಿಯವರ ನೇತೃತ್ವದಲ್ಲಿ ಅದಕ್ಕೆ ಪ್ರತಿರೋಧ ಉಂಟಾಗಿ 1977ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಸೋಲು ಕಂಡಿದ್ದು. ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜೈಲುಪಾಲಾದ ಜೆ.ಪಿ. ಬಿಡುಗಡೆಗೊಂಡ ಮೇಲೆ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಸಾಧ್ಯ ಅನ್ನುವುದನ್ನು ತೋರಿಸಿದರು. ಆ ಸಂದರ್ಭದ ಅವರ ’ಸಂಪೂರ್ಣ ಕ್ರಾಂತಿ’ಯ ಪರಿಕಲ್ಪನೆ ಹಾಗೂ ಜೈಲು ದಿನಚರಿಗಳಿಂದಾಗಿ ದೇಶದಲ್ಲಿ ಮನೆಮಾತಾದ ಜೆ.ಪಿ. ಭಾರತದ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನೇ ಆರಂಭಿಸಿದರು. ಹೀಗಾಗಿ ಆಧುನಿಕ ಭಾರತದ ಇತಿಹಾಸದಲ್ಲಿ ಜೆ.ಪಿ.ಯವರು ಭದ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆದರೆ ಜೆ.ಪಿ.ಯವರಿಗೆ ಸಂಬಂಧಪಟ್ಟಂತೆ ಇಷ್ಟು ಮಾತ್ರ ಇತಿಹಾಸವಲ್ಲ. ಇಂದಿರಾ ಗಾಂಧಿಯವರ ನಿರಂಕುಶಾಧಿಕಾರವನ್ನು ಎದುರಿಸುವುದಕ್ಕೊ ಮೊದಲೇ, ಅಂದರೆ 1947ರವರೆಗೂ ಈ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಸಕ್ರಿಯವಾಗಿದ್ದರು. ಆನಂತರವೂ ಅವರು ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರುರವರ ಟೀಕಾಕಾರರಾಗಿದ್ದರು. ಬಿಹಾರದ ಶ್ರೀಮಂತವೇ ಎನ್ನಬಹುದಾದ ಕುಟುಂಬದಲ್ಲಿ ಹುಟ್ಟಿದ ಜೆ.ಪಿ. ಒಳ್ಳೆಯ ಶಿಕ್ಷಣವನ್ನು ಪಡೆದರು; ಆಧುನಿಕ ಚಿಂತನೆಗೆ ತಮ್ಮನ್ನು ತಾವು ತೆರೆದುಕೊಂಡರು. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಗತಿಪರ ಮನೋಧರ್ಮವನ್ನು ಮೈಗೂಡಿಸಿಕೊಂಡು ಸಮಾಜವಾದ ಮಾರ್ಕ್ಸ್‌ವಾದಗಳ ಕಡೆ ಆಕರ್ಷಿತರಾದರು. ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಅದರೊಳಗಿನ ಸಮಾಜವಾದಿ ಗುಂಪಿನ ಮುಖ್ಯ ಸದಸ್ಯರೂ ಅಗಿದ್ದರು.

ಇಂದಿನ ಪೀಳಿಗೆಯವರಿಗೆ ಜೆ.ಪಿ. ಎಂದು ಮಾತ್ರ ತಿಳಿದಿರುವ ಜಯಪ್ರಕಾಶ ನಾರಾಯಣದ ಬೌದ್ಧಿಕ ಪಯಣದ ವಿವರಗಳು ಅಪರಿಚಿತವೆಂದೇ ಹೇಳಬೇಕು. ಯಡೂರ ಮಹಾಬಲ ಅವರು ಈ ಅವಶ್ಯಕತೆಯನ್ನು ಪೂರೈಸಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತರಾದ ಮಹಾಬಲರವರು ಈಗಾಗಲೇ ಲೋಹಿಯಾರವರ ವಿಚಾರಗಳ ವಿಮರ್ಶೆಯ ಮೂಲಕ ಲೋಹಿಯಾವಾದಿಗಳ ಬಗ್ಗೆ, ಲೋಹಿಯಾವಾದದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಜೆ.ಪಿಯವರ ಜೀವನ ಚರಿತ್ರೆಯಾಗಿರುವ ಈ ಕೃತಿಯೂ ಸಹ ಆ ಪ್ರಶ್ನೆಗಳ ಮುಂದುವರಿಕೆ ಎನ್ನಬಹುದು. ಅಲ್ಲದೆ ಈಶಾನ್ಯ ರಾಜ್ಯಗಳ ಹಿನ್ನೆಲೆಯಲ್ಲಿ ಭಾರತ-ಚೀನಾ ದೇಶಗಳ ಸಂಬಂಧಗಳ ಕುರಿತಾದ ಹಲವು ಗ್ರಂಥಗಳೂ ಅವರ ಲೇಖನಿಯಿಂದ ಹೊರಬಂದಿದೆ. ’ನಿಗೂಢ ಟಿಬೆಟ್, ’ಯುದ್ಧೋತ್ತರ ಕಾಂಡ’, ’ಅಕ್ಸಾಯ್ ಚಿನ್’ ಮುಂತಾದ ಕೃತಿಗಳೇ ಅಲ್ಲದೆ ’ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’ ಎಂಬ ಸ್ವಾತಂತ್ರ್ಯ ಹೋರಾಟದ ಕುರಿತಾದ ಪುಸ್ತಕವನ್ನೂ ರಚಿಸಿ ಮಹಾಬಲರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಪುಸ್ತಕ ಪರಿಚಯ: ನನ್ನ ಸಂಗೀತ ವ್ಯಾಸಂಗ (ಆತ್ಮಕಥೆ)

ಯಾವುದೇ ವಿಷಯದ ಕುರಿತು ಬರೆಯಲಿ, ಮಹಾಬಲ ಅವರ ಆ ಪ್ರಯತ್ನದಲ್ಲಿ ಸಾಕಷ್ಟು ಓದು, ಸಂಶೋಧನೆಗಳು ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಸಂಶೋಧನೆಯ ಫಲವಾಗಿ ಅವರು ಸಾಧಾರಣಕ್ಕಿಂತ ಭಿನ್ನವಾದ ತೀರ್ಮಾನಗಳಿಗೆ ಬರುತ್ತಾರೆ, ಆ ಮೂಲಕ ಓದುಗರಲ್ಲಿ ಹೊಸ ಪ್ರಶ್ನೆಗಳನ್ನು ಮೂಡಿಸುತ್ತಾರೆ.

ಜೆ.ಪಿಯವರ ಬಗೆಗಿನ ಈ ಕೃತಿಯೂ ಸಹ ಮಹಾಬಲರ ಸಂಶೋಧನೆಯ ಮತ್ತೊಂದು ಫಲ. ಜೆ.ಪಿ.ಯವರ ಬಾಲ್ಯ, ವಿದ್ಯಾಭ್ಯಾಸ, ಕೌಟುಂಬಿಕ ಜೀವನ, ರಾಜಕಾರಣ ಮುಂತಾದವುಗಳನ್ನು ಹಲವು ಆಕರಗಳ ಅಧ್ಯಯನದ ಮೂಲಕ ಪ್ರಸ್ತುತಪಡಿಸಲಾಗಿದೆ. ಅಲ್ಲದೆ, ಆ ಜೀವನದ ವಿವರಗಳನ್ನು ನೀಡುವಾಗಲೇ ಆಯಾ ಸಂದರ್ಭಗಳಲ್ಲಿನ ಜೆ.ಪಿ.ಯವರ ನಿಲುವುಗಳ ಮೌಲ್ಯಮಾಪನವನ್ನು ಮಹಾಬಲರು ನಡೆಸಿದ್ದಾರೆ. ಹೀಗೆ ಮಾಡುವಲ್ಲಿ ಇವರು ಯಾವ ಮುಲಾಜನ್ನು ತೋರುವುದಿಲ್ಲ; ಸರಿಯಾದ ತೀರ್ಮಾನಗಳನ್ನು ಹೊಗಳುವಂತೆಯೇ ವೈರುಧ್ಯಗಳಿಂದ ಕೂಡಿದ, ಅಥವಾ ಆ ಸಂದರ್ಭಕ್ಕೆ ಸರಿಹೊಂದದ ತೀರ್ಮಾನವನ್ನು ಅಷ್ಟೇ ಕಟುವಾಗಿ ಟೀಕಿಸುತ್ತಾರೆ.

ಕಾಂಗ್ರೆಸ್ ಪಕ್ಷದ ಸಮಾಜವಾದಿ ಗುಂಪಿನ ಸಕ್ರಿಯ ಸದಸ್ಯರಾಗಿದ್ದಾಗ ಜೆ.ಪಿ.ಯವರ ನಿಲುವುಗಳಿಗೂ, ನಂತರದ ಘಟ್ಟದ ಅವರ ನಿಲುವುಗಳಿಗೂ ಇರುವ ವೈರುಧ್ಯವನ್ನು ಎತ್ತಿತೋರಿಸುತ್ತಾರೆ. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಆರ್.ಎಸ್.ಎಸ್. ಕುರಿತ ಅವರ ವಿಮರ್ಶೆಗಳಿಗೂ ತುರ್ತು ಪರಿಸ್ಥಿತಿಯ ನಂತರ ಅದೇ ಸಂಘಟನೆಯ ಬಗ್ಗೆ ಬದಲಾದ ಅಭಿಪ್ರಾಯಗಳಿಗೂ ಒಂದಕ್ಕೊಂದು ತಾಳೆಯಾಗುವುದಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ನಿರೂಪಿಸುತ್ತಾರೆ.

ಮಾತ್ರವಲ್ಲದೆ ಜೆ.ಪಿ.ಯವರ ಸಮಕಾಲೀನರಾದ ಹಲವಾರು ರಾಜಕಾರಣಿಗಳು, ಆ ಕಾಲದ ಪ್ರಮುಖ ಬೆಳವಣಿಗೆಗಳು ಸಹ ಮಹಾಬಲರ ಪರಿಶೀಲನೆಯ ವಸ್ತುಗಳಾಗಿವೆ. ಸಾಮಾಜಿಕ ಬದಲಾವಣೆಗಾಗಿ ನಿರಂತರ ತುಡಿಯುತ್ತಿದ್ದ ಮನಸ್ಸುಳ್ಳ ಜೆ.ಪಿ.ಯವರ ನಿಲುವುಗಳು ಅವರ ಇಂಥ ತುಡಿತದ ಕಾರಣದಿಂದಲೇ ಕಾಲಕಾಲಕ್ಕೆ ಪರಸ್ಪರ ವಿರುದ್ಧವೆನಿಸುವ ರೀತಿಯಲ್ಲಿ ಬದಲಾಗುತ್ತಿದ್ದವೇನೋ ಎನ್ನುವ ಭಾವನೆಯನ್ನೂ ಮಹಾಬಲರ ಈ ಕೃತಿ ಹುಟ್ಟಿಸುತ್ತದೆ. ’ಸಂಪೂರ್ಣ ಕ್ರಾಂತಿ’ಯನ್ನು ಸದರಿ ಪುಸ್ತಕದ ಲೇಖಕರು ’ಸಂಪೂರ್ಣ ಭ್ರಾಂತಿ’ ಎಂತಲೂ ಕರೆಯುತ್ತಾರೆ ಮತ್ತು ಅದಕ್ಕೆ ಕಾರಣಗಳನ್ನು ಒದಗಿಸುತ್ತಾರೆ.

ಮಹಾಬಲರ ತೀರ್ಮಾನಗಳನ್ನು, ಮೌಲ್ಯಮಾಪನವನ್ನು ಓದುಗರು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ ಜೆ.ಪಿ.ಯವರಂತಹ ಪ್ರಮುಖ ವ್ಯಕ್ತಿಯ ಜೀವನದ ವಿವರಗಳನ್ನು ಅದರ ಎಲ್ಲ ಸಂಕೀರ್ಣತೆಗಳೊಂದಿಗೆ ತಿಳಿಯಲು ಈ ಕೃತಿ ಸಹಾಯಕವಾಗುತ್ತದೆ. ಜೆ.ಪಿ.ಯವರ ಬಗೆಗಿನ ಓದುಗರ ಮೌಲ್ಯಮಾಪನವನ್ನೇ ಮೌಲ್ಯಮಾಪನ ಮಾಡುವಂತೆ ಈ ಪುಸ್ತಕ ಪ್ರೇರೇಪಿಸುತ್ತದೆ; ಈ ಕಾರಣಗಳಿಗಾಗಿ ಇದೊಂದು ಓದಬೇಕಾದ ಪುಸ್ತಕ.

ಮುಗಿಸುವ ಮುನ್ನ ಒಂದು ಮಾತು; ಮಹಾಬಲರು ಕೈಗೆತ್ತಿಕೊಂಡಿರುವ ವಿಷಯಗಳು ಮೌಲಿಕವಾದವು. ಅವುಗಳು ಎಲ್ಲರನ್ನೂ ಸುಲಭವಾಗಿ ತಟ್ಟಬೇಕೆಂದರೆ ಮಹಾಬಲರ ಭಾಷೆಯ ಬಳಕೆ ಇನ್ನಷ್ಟ ಉತ್ತಮಗೊಳ್ಳಬೇಕಿದೆ; ಆಗ ಈ ಪುಸ್ತಕವು ಸೇರಿದಂತೆ ಅವರ ಅನೇಕ ಕೃತಿಗಳನ್ನು ಓದುಗರು ಸುಲಭವಾಗಿ ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಅವರು ತಮ್ಮ ವಿಷಯಮಂಡನೆ ಮತ್ತು ಬರವಣಿಗೆಯ ಶೈಲಿಯಲ್ಲಿ ಇನ್ನಷ್ಟು ಪ್ರಯೋಗಗಳನ್ನು ನಡೆಸಿ ಉತ್ತಮಪಡಿಸಿಕೊಂಡರೆ ಅವರ ಕೃತಿಗಳ ಮೌಲ್ಯ ಮತ್ತಷ್ಟು ಹೆಚ್ಚುವುದರಲ್ಲಿ ಅನುಮಾನವಿಲ್ಲ.

ಪ್ರೊ. ನಗರಗೆರೆ ರಮೇಶ್

ಪ್ರೊ. ನಗರಗೆರೆ ರಮೇಶ್
ನಗರಗೆರೆ ರಮೇಶ್ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆಯವರು. ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು ನಂತರ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಮಾನವ ಹಕ್ಕು ಸಂಘಟನೆಯಾದ ಪ್ರಜಾತಾಂತ್ರಿಕ ಜನರ ವೇದಿಕೆ ಮೊದಲಾದವುಗಳ ಭಾಗವಾಗಿದ್ದಾರೆ. ಎಲ್ಲ ಜನಪರ ಚಳವಳಿಗಳ ದೀರ್ಘಕಾಲದ ಒಡನಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...