Homeಮುಖಪುಟಸಿನಿಮಾ ವಿಮರ್ಶೆ: ಯುಎಪಿಎ ಕಾನೂನಿನ ಕರಾಳತೆ ತೆರೆದಿಟ್ಟ `19.20.21’

ಸಿನಿಮಾ ವಿಮರ್ಶೆ: ಯುಎಪಿಎ ಕಾನೂನಿನ ಕರಾಳತೆ ತೆರೆದಿಟ್ಟ `19.20.21’

‘ಯುಎಪಿಎ’ ಎಂಬ ಕರಾಳ ಕಾನೂನಿನ ಕುರಿತು ಕನ್ನಡ ಚಿತ್ರರಂಗದಲ್ಲಿ ಇಷ್ಟು ನೇರವಾಗಿ ಮಾತನಾಡಿರುವ ಸಿನಿಮಾ ಮತ್ತೊಂದಿಲ್ಲ.

- Advertisement -
- Advertisement -

ಭಾರತೀಯರಿಗೆ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿರುವುದು ಸಂವಿಧಾನದ 19ನೇ ವಿಧಿ; ಒಂದೇ ಅಪರಾಧಕ್ಕೆ ಒಂದಕ್ಕಿಂತ ಹೆಚ್ಚು ಭಾರಿ ಶಿಕ್ಷೆ ವಿಧಿಸುವಂತಿಲ್ಲ, ಒಬ್ಬ ವ್ಯಕ್ತಿಯನ್ನು ತನ್ನ ವಿರುದ್ಧ ತಾನೇ ಸಾಕ್ಷಿ ಹೇಳುವಂತೆ ಒತ್ತಾಯಿಸುವಂತಿಲ್ಲ ಎನ್ನುವುದು 20ನೇ ವಿಧಿ; ಬದುಕುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ರಕ್ಷಣೆ ನೀಡುವ 21ನೇ ವಿಧಿ- ಈ ಮೂರನ್ನು ಪ್ರಭುತ್ವ (ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಸೇನೆ) ಹೇಗೆ ದಮನ ಮಾಡಲು ಯತ್ನಿಸುತ್ತಿದೆ ಎಂಬುದನ್ನು ಒಂದು ಪ್ರಕರಣದ ಸುತ್ತ ಹೇಳಿರುವ ಕನ್ನಡ ಸಿನಿಮಾ- ‘19.20.21’.

ಪ್ರಾಸಂಗಿಕವಾಗಿಯಷ್ಟೇ ‘19.20.21’ ವಿಧಿಗಳನ್ನು ನಿರ್ದೇಶಕ ಮಂಸೋರೆಯವರು ಪ್ರಸ್ತಾಪಿಸಿದ್ದಾರೆಂಬುದು ನಿರ್ವೀವಾದ. ನಿಜ ಘಟನೆಯೊಂದರ ಸುತ್ತ ಹೆಣೆದಿರುವ ಇಲ್ಲಿನ ಕತೆ, ಚಿತ್ರಕತೆಯು- ಸಂವಿಧಾನದ ವಿರುದ್ಧ ಪ್ರಭುತ್ವ ಹೇಗೆ ನಡೆದುಕೊಳ್ಳುತ್ತದೆ ಎಂಬುದಕ್ಕೆ ಒಂದು ನಿದರ್ಶನವಷ್ಟೇ. ಈ ಮೂರು ವಿಧಿಗಳ ನೆಪದಲ್ಲಿ, ಸಂವಿಧಾನ ಪ್ರತಿಪಾದಿಸುವ ಏನೆಲ್ಲ ಆಶಯಗಳನ್ನು ಹೇಳಲು ಸಾಧ್ಯವೇ ಅದೆಲ್ಲವನ್ನೂ ಒಂದು ಪ್ರಕರಣದ ಹಿನ್ನೆಲೆಯಲ್ಲಿ ‘ಮಂಸೋರೆ’ ಹೇಳಲು ಪ್ರಯತ್ನಿಸಿದ್ದಾರೆ.

‘ಹರಿವು’, ‘ನಾತಿಚರಾಮಿ’ಯ ನಂತರದಲ್ಲಿ ‘ಆಕ್ಟಿವಿಸಂ’ ಪ್ರೇರಿತ ಕಥೆಗೆ ಧುಮುಕಿರುವ ಮಂಸೋರೆ, ‘ಆಕ್ಟ್‌- 1978’ಗಿಂತ ಗಟ್ಟಿಯಾಗಿ, ಶೋಷಿತ ಸಮುದಾಯಗಳ ಕಷ್ಟವನ್ನು ನೇರವಾಗಿ, ನಿರ್ಭಿಡೆಯಿಂದ ಇಲ್ಲಿ ಮಾತನಾಡಿದ್ದಾರೆ. ‘ಆಕ್ಟ್‌ 1978’ ಅತಿ ಭಾವುಕತೆಗೆ ಒತ್ತು ನೀಡಿದಂತೆ ಭಾಸವಾಗಿತ್ತು. ಆದರೆ ಇಲ್ಲಿ ಸಹಜ ಸೌಂದರ್ಯಕ್ಕೆ ಆದ್ಯತೆ ನೀಡಿದ್ದಾರೆ.

ಇಲ್ಲಿನ ಪಾತ್ರಗಳು ಕಾಲ್ಪನಿಕವಲ್ಲ. ನಿಜ ಘಟನೆಯಾಧಾರಿತ ಈ ಸಿನಿಮಾದೊಳಗೆ ಬಳಸಲಾಗಿರುವ ಹೆಸರುಗಳನ್ನು ಬದಲಿಸಲಾಗಿದ್ದರೂ ಅವು ನಮ್ಮ ನಡುವೆಯೇ ಇರುವ ನಿಜ ಜೀವಗಳು. ಪ್ರಭುತ್ವದ ಹಿಂಸಾ ಪ್ರವೃತ್ತಿಯನ್ನು, ಪ್ರಜಾಪ್ರತಿನಿಧಿಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ಹೇಗೆ ಒಂದು ಸ್ಥಾಪಿತ ವ್ಯವಸ್ಥೆ ಅಸಹಾಯಕ ಜೀವಗಳ ಮೇಲೆ ಗದಾಪ್ರಹಾರ ಮಾಡುತ್ತದೆ ಎಂಬುದನ್ನು ‘ರಿವರ್ಸ್ ಸ್ಕ್ರೀನ್‌ ಪ್ಲೇ’ನಲ್ಲಿ ಈ ಸಿನಿಮಾ ಕಟ್ಟಿಕೊಡುತ್ತದೆ.

ಇದನ್ನೂ ಓದಿರಿ: ಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

‘ನಕ್ಸಲ್‌’ ಎಂಬ ಹಣೆಪಟ್ಟಿಯು ಪ್ರಶ್ನಿಸುವವರನ್ನು ದಮನ ಮಾಡಲು ಬಳಸುವ ಅಸ್ತ್ರವೂ ಹೌದು. ಹಾಗೆಯೇ ನಕ್ಸಲ್‌ ಚಳವಳಿಗೆ ‘ಭಯೋತ್ಪಾದನೆ’ಯ ಬಣ್ಣ ಹಚ್ಚುವುದು ಹೊಸದೇನಲ್ಲ! ‘ವಿಠ್ಠಲ್‌ ಮಲೆಕುಡಿಯ’ ಎಂಬ ಆದಿವಾಸಿ ಯುವಕನನ್ನು ಇನ್ನಿಲ್ಲದಂತೆ ಶೋಷಿಸಿದ ನಿಜ ಘಟನೆಯ ಸುತ್ತ ಕಥೆ ಹರಡಿದೆ. ಈ ನೆಲದ ಮೂಲ ನಿವಾಸಿಗಳನ್ನು ಕಾಡಿನಿಂದ ನಾಡಿಗೆ ದಬ್ಬುವ ವಿಛಿದ್ರಕಾರಿ ನೀತಿಗಳ ನಡುವೆ ಹುಟ್ಟಿಕೊಂಡ ನಕ್ಸಲ್‌ ಚಳವಳಿ, ಅದರ ನೆಪದಲ್ಲಿ ಬಂದ ನಕ್ಸಲ್‌ ನಿಗ್ರಹ ದಳ ಎಸಗುವ ದೌರ್ಜನ್ಯ, ಕಾಡಿನಿಂದ ಹೊರದಬ್ಬಲು ಆದಿವಾಸಿಗಳನ್ನು ಇನ್ನಿಲ್ಲದಂತೆ ಹಿಂಸಿಸುವ ರೀತಿ- ಇವೆಲ್ಲವನ್ನೂ ಈ ಕಥೆ ಒಳಗೊಂಡಿದೆ.

‘ಯುಎಪಿಎ’ (ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ- ಕಾಯಿದೆ, 1967) ಎಂಬ ಕರಾಳ ಕಾನೂನಿನ ಕುರಿತು ಕನ್ನಡ ಚಿತ್ರರಂಗದಲ್ಲಿ ಇಷ್ಟು ನೇರವಾಗಿ ಮಾತನಾಡಿರುವ ಸಿನಿಮಾ ಮತ್ತೊಂದಿಲ್ಲ. ಪ್ರಶ್ನಿಸುವವರನ್ನು, ಸಾಂವಿಧಾನಿಕ ಹಕ್ಕುಗಳನ್ನು ಪ್ರತಿಪಾದಿಸುವವರನ್ನು ‘ಯುಎಪಿಎ’ ಅಡಿ ಬಂಧಿಸಿ, ಭಯೋತ್ಪಾದಕ, ದೇಶದ್ರೋಹಿ ಎಂಬೆಲ್ಲಾ ಪಟ್ಟ ಕಟ್ಟುವ ಪ್ರಭುತ್ವದ ಆಟಾಟೋಪಗಳನ್ನು ಈ ಸಿನಿಮಾ ಮನವರಿಕೆ ಮಾಡಿದೆ; ‘ಯುಎಪಿಎ’ ಹಾಕಿಸಿಕೊಂಡವರಲ್ಲ ದೇಶದ್ರೋಹಿಗಳಲ್ಲ, ಭಯೋತ್ಪಾದಕರಲ್ಲ ಎಂಬುದನ್ನು ಮನವರಿಕೆ ಮಾಡುತ್ತದೆ.

‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಕುರಿತು ಓದುವುದು ದೇಶದ್ರೋಹವೇ?’ ಎಂಬ ಪ್ರಶ್ನೆಯನ್ನು ಪ್ರಭುತ್ವದ ಎದೆಗೆ ಒದ್ದಂತೆ ಕೇಳಲಾಗಿದೆ. ಎಡ- ಬಲ ನಡುವೆ ಬ್ಯಾಲೆನ್ಸ್ ಮಾಡಿ, ಪ್ರಭುತ್ವ ಪ್ರೇರಿತ ಬಲಪಂಥೀಯ ದಾಳಿಯಿಂದ ನುಣುಚಿಕೊಳ್ಳುವ ಯತ್ನವನ್ನು ಮಂಸೋರೆ ಮತ್ತು ತಂಡ ಮಾಡಿಲ್ಲ. ನೇರವಾಗಿ ಸಂವಿಧಾನ ಮತ್ತು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಶ್ರೀರಕ್ಷೆಗೆ ಅಥವಾ ಆಶ್ರಯಕ್ಕೆ ಹೊರಳಿ, ಹೇಳಬೇಕಾದದ್ದನ್ನು ಗಟ್ಟಿಯಾಗಿ ಹೇಳಿ ಮುಗಿಸಿದ್ದಾರೆ. ಈ ಕಾಲದಲ್ಲಿ ನಡೆಯುತ್ತಿರುವುದು ‘ಪ್ರಭುತ್ವ v/s ಸಂವಿಧಾನ’ ಎಂಬುದನ್ನು ಸ್ಪಷ್ಟವಾಗಿ ತಿಳಿಸಲು ಯಾವುದೇ ಮುಲಾಜಿಗೆ ಚಿತ್ರತಂಡ ಒಳಗಾಗಿಲ್ಲ.

ನಕ್ಸಲ್‌ ಚಳವಳಿಯ ಉದ್ದೇಶಗಳಿಗೆ ಕಥೆ ಹೆಚ್ಚಾಗಿ ಹೊರಳದಿದ್ದರೂ ನಕ್ಸಲ್‌ ಹಣೆಪಟ್ಟಿ ಕಟ್ಟಿ ಅಸಹಾಯಕ ಸಮುದಾಯಗಳನ್ನು ಶೋಷಿಸುವ ಪ್ರಭುತ್ವದ ಮೇಲೆ ಇಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಕ್ಸಲ್‌ ಚಳವಳಿಯ ರಕ್ತಸಿಕ್ತ ಹಾದಿಯ ಕುರಿತು ಚರ್ಚಿಸದಿದ್ದರೂ ಕತೆಯ ಮೂಲಕವೇ ನಮ್ಮದು ‘ಪ್ರಜಾಸತ್ತಾತ್ಮಕ ಎಡಪಂಥ’ ಆಗಿರಬೇಕು ಎಂಬ ಆಶಯವನ್ನು ಈ ಸಿನಿಮಾ ಧ್ವನಿಸಿದಂತಿದೆ.

‘ಲಾಲ್‌ ಸಲಾಂ, ಇನ್‌ಕ್ವಿಲಾಬ್‌ ಜಿಂದಾಬಾದ್‌’ ಎಂಬ ಘೋಷಣೆಗಳನ್ನು ನಕ್ಸಲ್‌ ಚಳವಳಿಯಲ್ಲಿ ತೊಡಗಿಸಿಕೊಂಡವರೂ ಹೇಳುತ್ತಾರೆ, ಅದರ ಜೊತೆಗೆ ನಾಡಿನೊಳಗೆ ಪ್ರಭುತ್ವವನ್ನು ಎದುರಿಸುತ್ತಿರುವ ಎಡಪಂಥೀಯ ಧೋರಣೆಯ ಚಳವಳಿಗಾರರೂ ಕೂಗುತ್ತಾರೆ. ಆದರೆ ಬಂದೂಕು ಹಿಡಿದ ‘ಲಾಲ್‌ ಸಲಾಂ, ಇನ್‌ಕ್ವಿಲಾಬ್‌ ಜಿಂದಾಬಾದ್‌’ಅನ್ನು ಪ್ರಭುತ್ವ ಸುಲಭವಾಗಿ ಮುಗಿಸಬಲ್ಲದು, ಆದರೆ ಪ್ರಜಾಸತ್ತಾತ್ಮಕವಾದ ‘ಲಾಲ್‌ ಸಲಾಂ, ಇನ್‌ಕ್ವಿಲಾಬ್‌ ಜಿಂದಾಬಾದ್‌’ಅನ್ನು ಅಷ್ಟು ಸುಲಭವಾಗಿ ದಮನ ಮಾಡಲು ಸಾಧ್ಯವಿಲ್ಲ ಎಂಬುದನ್ನು- ಎರಡು ನೆಲೆಯ ದೃಷ್ಟಿಕೋನಗಳ ಮೂಲಕ ಸೂಕ್ಷ್ಮವಾಗಿ ಹೇಳುವ ಪ್ರಯತ್ನವನ್ನು ಮಂಸೋರೆ ಮಾಡಿದಂತಿದೆ. ಇಲ್ಲಿ ಬರುವ ರಫಿ, ಪತ್ರಕರ್ತ ವಿಜಯ್, ಸುರೇಶ್ ಹೆಗ್ಡೆ ಮೊದಲಾದವರು ಪ್ರಜಾಸತ್ತಾತ್ಮಕ ಎಡಪಂಥೀಯ ‘ಕೆಂಬಾವುಟ’ದ ಉದಾಹರಣೆಯಾಗಿ ನಿಲ್ಲುತ್ತಾರೆ.

ನಿರ್ದೇಶಕ ಮಂಸೋರೆ

ದ್ವಿತೀಯಾರ್ಧದಲ್ಲಿ ಕೋರ್ಟ್ ರೂಮ್‌ಗೆ ಹೆಚ್ಚಿನ ಸ್ಪೇಸ್‌ ಸಿಕ್ಕಿದೆ. ಕತೆಗೆ ಅದು ಅನಿವಾರ್ಯವೂ ಆಗಿದೆ. ಈ ವೇಳೆ ಸಂಭಾಷಣೆಗೆ ಹೆಚ್ಚು ಒತ್ತು ಕೊಟ್ಟಿರುವುದು ಢಾಳಾಗಿ ಕಾಣುತ್ತದೆ. ಆದರೆ ಆ ಸಂಭಾಷಣೆ ಈ ಸಿನಿಮಾದ ಆತ್ಮವೂ ಹೌದು. ಆದರೆ ಇಲ್ಲಿ ಬೋಧನೆ ಮಾಡಲಾಗುತ್ತಿದೆ ಎಂಬ ಅಪವಾದದಿಂದ ಪಾರಾಗಲು ನಿರ್ದೇಶಕರು ಜಾಣ್ಮೆ ವಹಿಸಿದ್ದಾರೆ. ‘ಸಂವಿಧಾನದ ಕುರಿತು ಕೋರ್ಟ್‌ನಲ್ಲಿ ಹೇಳದೆ, ಕಾಡಿನಲ್ಲಿ ಹೇಳಲೇ?’ ಎಂಬ ಡೈಲಾ‌ಗ್‌ ಇರಬಹುದು, ಸಂವಿಧಾನದ ಮೂರು ವಿಧಿಗಳನ್ನು ಮಲೆ ಕುಡಿಯ ಸಮುದಾಯದ ನೋವಿನ ಕತೆಗೆ ಥಳುಕು ಹಾಕಿ ಹೇಳುವುದಿರಬಹುದು, ಆ ಮೂಲಕ ಸಂವಿಧಾನದ ಆಶಯವನ್ನು ನಿಚ್ಚಳವಾಗಿ ಪ್ರತಿಪಾದಿಸುವುದಿರಬಹುದು- ಇವೆಲ್ಲ ಚಿತ್ರಕತೆಗಾರರು ವಹಿಸಿರುವ ಎಚ್ಚರಿಕೆಯಾಗಿಯೂ ಕಾಣುತ್ತವೆ.

ಇಲ್ಲಿಯೇ ಇನ್ನೊಂದು ಮಾತು ಸೇರಿಸಬೇಕು; ತಮಿಳಿನ ‘ಜೈ ಭೀಮ್‌’, ಮಲಯಾಳಂನ ‘ಜನಗಣಮನ’ ಸಿನಿಮಾದಲ್ಲಿನ ಕೋರ್ಟ್ ರೂಮ್‌ ದೃಶ್ಯಗಳು ಅತಿ ಅನಿಸಬಹುದಾದ ಅಭಿನಯ, ಹೀರೋಯಿಸಂ, ನಾಟಕೀಯತೆಯಿಂದ ಭಾರವಾದಂತೆ ಭಾಸವಾಗಿದ್ದವು. ಆದರೆ ಅಂಥದ್ದೇ ಕತೆಯನ್ನು ವ್ಯವಹರಿಸುತ್ತಿರುವ ‘19.20.21’ ಸಿನಿಮಾದಲ್ಲಿ ಕೋರ್ಟ್ ಸೀನ್‌ಗಳು, ನ್ಯಾಯಾಧೀಶರ ಮಾತುಕತೆಗಳು, ವಕೀಲರ ವಾದಗಳು ಸಹಜವೂ ಸುಂದರವೂ ಆಗಿ ಹೊಮ್ಮಿವೆ. ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆ, ಉದ್ಗಾರಗಳೇ ಈ ಸಹಜತೆಗೆ ಸಾಕ್ಷಿಯಾಗಿ ನಿಲ್ಲುತ್ತವೆ.

ಇದನ್ನೂ ಓದಿರಿ: ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

ನಕ್ಸಲ್‌ ನಿಗ್ರಹ ಪಡೆಯ ಕ್ರೌರ್ಯ, ಪೊಲೀಸ್ ವ್ಯವಸ್ಥೆ ಕೈಗೊಳ್ಳುವ ಪಿತೂರಿಗಳು ಪ್ರಭುತ್ವದ ಭಾಗವಷ್ಟೇ. ಅವರದ್ದು ವೃತ್ತಿಪರವಾಗಿ, ಸರ್ಕಾರದ ಭಾಗವಾಗಿ ಎಸಗುವ ಅಪರಾಧ. ಹೀಗಾಗಿಯೇ ಪ್ರಭುತ್ವದ ಪ್ರತಿನಿಧಿಯಾಗಿದ್ದ ಪೊಲೀಸ್ ಅಧಿಕಾರಿ, ನಿವೃತ್ತಿಯ ನಂತರದಲ್ಲಿ ಕೋರ್ಟ್ ಮುಂದೆ ನಿಂತು, ತಾನು ಹಿನ್ನಡೆ ಅನುಭವಿಸಿದ ಬಳಿಕವೂ ಹಸ್ತಲಾಘನ ಮಾಡುವುದು ನಿಜಕ್ಕೂ ಅರ್ಥಪೂರ್ಣವಾಗಿದೆ. ನಾವೆಲ್ಲ ಒಂದು ಪಿತೂರಿ ಕಾನೂನು ವ್ಯವಸ್ಥೆಯ ಭಾಗವಷ್ಟೇ ಎಂಬುದನ್ನು ಈ ಪಾತ್ರ ಸೂಚ್ಯವಾಗಿ ಹೇಳಿದಂತಿದೆ.

ಆದಿವಾಸಿಗಳ ಮೇಲಾಗುವ ದೌರ್ಜನ್ಯಗಳನ್ನು ಚಿತ್ರಿಸುವಾಗ ಒಂದಿಷ್ಟು ಲಂಬಿಸಿದಂತೆ ಭಾಸವಾಗುತ್ತದೆ. ಕತೆ ಹೇಳುವುದಕ್ಕೆ ನಮಗೆ ಧಾವಂತವಿಲ್ಲ ಎಂಬುದನ್ನು ಕತೆ, ಚಿತ್ರಕತೆ ಬರೆದಿರುವ ಮಂಸೋರೆ ಹಾಗೂ ವೀರೇಂದ್ರ ಮಲ್ಲಣ್ಣ ಒಪ್ಪಿಕೊಂಡಿದ್ದಾರೆ.

ಶೃಂಗ ಬಿ.ವಿ., ಬಾಲಾಜಿ ಮನೋಹರ್, ಎಂ.ಡಿ. ಪಲ್ಲವಿ, ರಾಜೇಶ್ ನಟರಂಗ, ಅವಿನಾಶ್, ಮಹದೇವ್ ಹಡಪದ್, ವೆಂಕಟೇಶ್ ಪ್ರಸಾದ್, ಬಿ.ಎಂ.ಗಿರಿರಾಜ್‌, ವೈ.ಜಿ.ಉಮಾ- ಹೀಗೆ ಎಲ್ಲರೂ ತಮ್ಮ ಅಭಿನಯದ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಅನೇಕರು ಚಿಕ್ಕಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಂದು ಮಾಲಿನಿಯವರ ಸಂಗೀತ, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ, ಶಿವ ಬಿ.ಕೆ.ಕುಮಾರ್‌ ಅವರ ಸಿನಿಮಾಟೋಗ್ರಫಿ ಕತೆಯ ತೂಕವನ್ನು ಹೆಚ್ಚಿಸಿವೆ. ಇಂಥದೊಂದು ಸಿನಿಮಾಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕ ದೇವರಾಜ್ ಆರ್‌. ಅವರು ಗೆದ್ದರೆ ಮತ್ತಷ್ಟು ಇಂತಹ ಒಳ್ಳೆಯ ಕಥೆಗಳು ಕನ್ನಡ ಚಿತ್ರರಂಗದಲ್ಲಿ ಮೂಡಿ ಬರಲು ಸಾಧ್ಯವಾಗಬಹುದು.

ಆದಿವಾಸಿಗಳ ಕತೆ ಹೇಳುತ್ತೇವೆ ಎಂದು ನಯವಾಗಿ ಪ್ರಭುತ್ವಕ್ಕೆ ಶರಣಾಗಬೇಕೆಂಬ ಸಂದೇಶ ನೀಡುವ, ರಂಜನೆಯ ಮೂಲಕ ವಂಚಿಸುವ ಸಿನಿಮಾಗಳಿಗಿಂತ ‘19.20.21’ ಥರದ ನೆಲದ ವಾಸ್ತವಗಳನ್ನು ಒಳಗೊಂಡ ಮತ್ತಷ್ಟು ಸಿನಿಮಾಗಳು ಮೂಡಿಬರಬೇಕಾದ ತುರ್ತು ಇಂದಿಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...