Homeಮುಖಪುಟನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

ನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

- Advertisement -
- Advertisement -

”ದೇಶದ ಪ್ರಜಾಪ್ರಭುತ್ವದ ಮೂಲಭೂತ ರಚನೆಯ ಮೇಲೆ ಭಾರತ ಸರ್ಕಾರ ದಾಳಿ ಮಾಡುತ್ತಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಉಪನ್ಯಾಸದ ಸಂದರ್ಭದಲ್ಲಿ  ಆರೋಪಿಸಿದ್ದಾರೆ. ಇಸ್ರೇಲಿ ಸ್ಪೈವೇರ್ ಪೆಗಾಸಸ್ ಬಳಸಿ ತಮ್ಮ ಫೋನ್‌ನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅವರ ಸಂಭಾಷಣೆಗಳು ರೆಕಾರ್ಡ್ ಆಗುತ್ತಿರುವುದರಿಂದ ಫೋನ್‌ನಲ್ಲಿ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ಗುಪ್ತಚರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

“ನನ್ನ ಫೋನ್‌ನಲ್ಲಿ ಸ್ಪೈವೇರ್ ಪೆಗಾಸಸ್ ಬಳಸಿ ಸಂಭಾಷೆಣೆಯನ್ನು ಕದಿಯಲಾಗಿದೆ. ಅದೇ ರೀತಿ ಅನೇಕ ರಾಜಕಾರಣಿಗಳ ಫೋನ್‌ಗಳನ್ನು ಹ್ಯಾಕ್ ಮಾಡಿದ್ದಾರೆ. ನನಗೆ ಗುಪ್ತಚರ ಅಧಿಕಾರಿಗಳು ಕರೆ ಮಾಡಿ, ‘ದಯವಿಟ್ಟು ನೀವು ಫೋನ್‌ನಲ್ಲಿ ಏನು ಮಾತನಾಡುತ್ತಿದ್ದೀರಿ ಎಂಬುದರ ಬಗ್ಗೆ ಜಾಗರೂಕರಾಗಿರಿ, ಏಕೆಂದರೆ ನಾವು ಆ ವಿಷಯವನ್ನು ರೆಕಾರ್ಡ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದರು. ಇದು ನಾವು ಅನುಭವಿಸುವ ನಿರಂತರ ಒತ್ತಡವಾಗಿದೆ. ನನ್ನ ಮೇಲೆ ಹಲವಾರು ಕ್ರಿಮಿನಲ್ ಹೊಣೆಗಾರಿಕೆಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಭಾರತ ಸರ್ಕಾರದ ಈ ನಡೆಯ ವಿರುದ್ಧ ಮತ್ತು ನಮ್ಮನ್ನು ನಾವು ರಕ್ಷಿಸಲು ಹೋರಾಡುತ್ತಲೇ ಇದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಸಂಸತ್ತು, ಪತ್ರಿಕಾ ರಂಗ ಮತ್ತು ನ್ಯಾಯಾಂಗವನ್ನು ನಿರ್ಬಂಧಿಸಲಾಗಿದೆ ಎಂದು ಗಾಂಧಿ ಆರೋಪಿಸಿದರು.

”ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ಆಕ್ರಮಣದಲ್ಲಿದೆ ಎಂದು ಸಾಕಷ್ಟು ಸುದ್ದಿಯಾಗಿದೆ. ಈ ಬಗ್ಗೆ ಎಲ್ಲರಿಗೂ ತಿಳಿದಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ(ವಿರೋಧ) ಜಾಗದಲ್ಲಿ ಕುಳಿತು ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು-ಸಂಸತ್ತು, ಮುಕ್ತ ಪತ್ರಿಕಾ, ನ್ಯಾಯಾಂಗ, ಚರ್ಚೆಗಳು ಎಲ್ಲವೂ ನಿರ್ಬಂಧಿತವಾಗುತ್ತಿವೆ. ಹಾಗಾಗಿ, ನಾವು ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದ್ದೇವೆ” ಎಂದು ಕಾಂಗ್ರೆಸ್ ಸಂಸದರು ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕರು ಸಂಸತ್ ಭವನದ ಮುಂದೆ ಸುಮ್ಮನೆ ನಿಂತು ಸಮಸ್ಯೆಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಗಳು ಹಿಡಿದಿರುವ ಚಿತ್ರವನ್ನು ತೋರಿಸಿದರು.

ಅಲ್ಪಸಂಖ್ಯಾತರು ಮತ್ತು ಪತ್ರಿಕೆಗಳ ಮೇಲೆ ಸರ್ಕಾರವು ದಾಳಿ ಮಾಡುತ್ತಿದೆ. ಭಾರತದಲ್ಲಿ ಪರಿಸ್ಥಿತಿ ಭೀಕರವಾಗಿದೆ ಎಂದು ಅವರು ಆರೋಪಿಸಿದರು.

”ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಸಂವಿಧಾನದಲ್ಲಿ ವಿವರಿಸಲಾಗಿದೆ ಮತ್ತು ಆ ಒಕ್ಕೂಟಕ್ಕೆ ಮಾತುಕತೆ ಮತ್ತು ಸಂಭಾಷಣೆಯ ಅಗತ್ಯವಿದೆ. ಆದರೆ ಈಗ ಒಕ್ಕೂಟ ವ್ಯವಸ್ಥೆ ದಾಳಿ ಮತ್ತು ಬೆದರಿಕೆಗೆ ಒಳಗಾಗಿದೆ. ಸಂಸತ್ ಭವನದ ಮುಂದೆ ತೆಗೆದ ಚಿತ್ರವನ್ನು ನೀವು ನೋಡಬಹುದು. ವಿರೋಧ ಪಕ್ಷದ ನಾಯಕರು ಕೆಲವು ವಿಷಯಗಳ ಬಗ್ಗೆ ಮಾತನಾಡುತ್ತಾ ನಿಂತಿದ್ದೇವೆ. ಆದರೂ ನಮ್ಮನ್ನು ಜೈಲಿಗೆ ಹಾಕಲಾಯಿತು, ಈ ರೀತಿ 3 ಅಥವಾ 4 ಬಾರಿ ಸಂಭವಿಸಿದೆ. ಅಲ್ಪಸಂಖ್ಯಾತರು ಮತ್ತು ಪತ್ರಿಕಾ ದಾಳಿಗಳ ಬಗ್ಗೆಯೂ ನೀವು ಕೇಳಿದ್ದೀರಿ, ಏನಾಗುತ್ತಿದೆ ಎಂದು ನಿಮಗೆ ಅರ್ಥವಾಗುತ್ತದೆ” ಎಂದು ರಾಹುಲ್ ಹೇಳಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...