Homeದಲಿತ್ ಫೈಲ್ಸ್ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ...

ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ ಹೇಳಿಕೆ

- Advertisement -
- Advertisement -

“ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ” ಎಂದು ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಹೋದರ ಪ್ರತಿಕ್ರಿಯಿಸಿದ್ದಾರೆ. ವಿಶೇಷ ನ್ಯಾಯಾಲಯವು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಖುಲಾಸೆಗೊಳಿಸಿದ ಬಳಿಕ ಸಂತ್ರಸ್ತ ಕುಟುಂಬ ಬೇಸರ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್‌ನಲ್ಲಿ 19 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಖುಲಾಸೆಗೊಳಿಸಿ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲಾ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಧೀಶರಾದ ತ್ರಿಲೋಕ್ ಪಾಲ್ ಸಿಂಗ್ ಅವರು ತೀರ್ಪು ಪ್ರಕಟಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ನಂತರ ‘ದಿ ಕ್ವಿಂಟ್‌’ ಜೊತೆ ಮಾತನಾಡಿರುವ ಸಂತ್ರಸ್ತ ಯುವತಿಯ ಸಹೋದರ “ನಮ್ಮ ಕುಟುಂಬವು ಧ್ವಂಸಗೊಂಡಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಭಾರತೀಯ ನ್ಯಾಯಾಂಗದಿಂದ ನಾವು ಹೆಚ್ಚಿನ ಭರವಸೆ ಹೊಂದಿದ್ದೇವೆ. ಆದರೆ ನಮ್ಮ ಭಾರತೀಯ ನ್ಯಾಯ ವ್ಯವಸ್ಥೆ ಏನು ಎಂದು ಈಗ ನಮಗೆ ತಿಳಿದಿದೆ. ನಮ್ಮ ತಂಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ, ನಂತರ ಆಕೆಯ ದೇಹವನ್ನು ಮಧ್ಯರಾತ್ರಿಯಲ್ಲಿ ಸುಡಲಾಗಿದೆ. ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದವರನ್ನು ಖುಲಾಸೆಗೊಳಿಸಲು ನ್ಯಾಯಾಲಯ ಅವಕಾಶ ನೀಡಿದೆ. ನಾವು ಧ್ವಂಸಗೊಂಡಿದ್ದೇವೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಗ್ರಾಮದ ನಾಲ್ವರ ವಿರುದ್ಧ ಅತ್ಯಾಚಾರ (ಐಪಿಸಿ ಸೆಕ್ಷನ್ 376), ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376 ಡಿ) ಮತ್ತು ಕೊಲೆ (ಐಪಿಸಿ ಸೆಕ್ಷನ್ 304) ಆರೋಪ ಹೊರಿಸಿದೆ.

ಆದರೆ, ಅವರಲ್ಲಿ ಯಾರೊಬ್ಬರೂ ಅತ್ಯಾಚಾರ ಅಥವಾ ಕೊಲೆಯ ತಪ್ಪಿತಸ್ಥರೆಂದು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ. ಮಿಗಿಲಾಗಿ ನ್ಯಾಯಾಲಯದಿಂದ ತಪ್ಪಿತಸ್ಥನೆಂದು ಗುರುತಿಸಲ್ಪಟ್ಟಿರುವ ಆರೋಪಿ ಸಂದೀಪ್‌ಗೆ, ಕೊಲೆಗೆ ಸಮನಾಗದ (ಐಪಿಸಿ ಸೆಕ್ಷನ್ 304) ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯಲ್ಲಿನ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗಿದೆ.

“ಅತ್ಯಾಚಾರ ಮತ್ತು ಕೊಲೆ ಆರೋಪದಡಿಯಲ್ಲಿ ಆತನಿಗೆ ಶಿಕ್ಷೆಯಾಗಿಲ್ಲ. ಅಂದರೆ ಅವರಿಗೂ ಬೇಗ ಜಾಮೀನು ಸಿಗುವುದು ಖಚಿತ. ಇದು ಅತಿರೇಕದ ಸಂಗತಿ” ಎಂದು ಸಂತ್ರಸ್ತೆಯ ಸಹೋದರ ನೊಂದು ನುಡಿದಿದ್ದಾರೆ.

“ಉಸ್ಕಿ ಆತ್ಮಾ ಕೋ ಶಾಂತಿ ಕೈಸೇ ಮಿಲೇಗೀ? (ಅವಳ ಆತ್ಮ ಈಗ ಹೇಗೆ ವಿಶ್ರಾಂತಿ ಪಡೆಯುತ್ತದೆ?)” ಎಂದು ಪ್ರಶ್ನಿಸಿದ್ದಾರೆ.

‘ಗ್ರಾಮಸ್ಥರಿಂದ ಆರೋಪಿಗಳಿಗೆ ಬೆಂಬಲ’

ಸೆಪ್ಟೆಂಬರ್ 2020ರಲ್ಲಿ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಯಿತು. 29 ಸೆಪ್ಟೆಂಬರ್ 2020ರಂದು, ಹತ್ರಾಸ್ ಪೋಲೀಸ್ ಮತ್ತು ಆಡಳಿತದ ವರ್ಗವು ರಾತ್ರೋರಾತ್ರಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿತ್ತು. ಇದು ಬೆಳಕಿಗೆ ಬಂದಾಗ ದೇಶಾದ್ಯಂತ ಆಘಾತ ಉಂಟಾಗಿತ್ತು.

ಘಟನೆ ನಡೆದ ಎರಡು ವರ್ಷಗಳ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ‘ದಿ ಕ್ವಿಂಟ್’ ತಂಡ ವರದಿ ಮಾಡುತ್ತಾ, “ಅಪರಾಧದ ಆರೋಪಿಗಳಿಗೆ ವ್ಯಾಪಕ ಬೆಂಬಲ ಮುಂದುವರಿದಿದೆ. ಆರೋಪಗಳನ್ನು ಸುಳ್ಳು ಎಂದು ಅನೇಕ ಗ್ರಾಮಸ್ಥರು ಹೇಳುತ್ತಿದ್ದಾರೆ. ಆರೋಪಿಗಳ ಪರವಾಗಿ ನಿಂತಿದ್ದಾರೆ” ಎಂದಿತ್ತು.

“ಈ ಜನರು ಮೊದಲ ದಿನದಿಂದಲೂ ಆರೋಪಿಗಳನ್ನು ಬೆಂಬಲಿಸುತ್ತಿದ್ದಾರೆ. ಈಗ ಅವರನ್ನು ಖುಲಾಸೆಗೊಳಿಸುವ ತೀರ್ಪು ಬಂದಿರುವುದರಿಂದ ಗ್ರಾಮಸ್ಥರು ಆರೋಪಿಗಳಿಗೆ ಮತ್ತಷ್ಟು ಧೈರ್ಯ ತುಂಬಲಿದ್ದಾರೆ” ಎಂದು ಸಂತ್ರಸ್ತೆಯ ಸಹೋದರ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...