Homeಕರ್ನಾಟಕರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ; ಎಚ್‌ಡಿಕೆ

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, “ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್‌ ರಾಜ್ಯವಾಗಿದೆ” ಎಂದು ಟೀಕಿಸಿದ್ದಾರೆ.

ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ, ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮಿಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ” ಎಂದಿದ್ದಾರೆ.

“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ! ವಾರೆವ್ಹಾ” ಎಂದು ವ್ಯಂಗ್ಯವಾಡಿದ್ದಾರೆ.

“ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.

“ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?” ಎಂದು ಅಮಿತ್ ಶಾ ಅವರನ್ನು ಕೇಳಿದ್ದಾರೆ.

“ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮಿಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?” ಎಂದು ಕುಟುಕಿದ್ದಾರೆ.

“ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ

“ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮಿಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮಿಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...