Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...