Homeಮುಖಪುಟಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

- Advertisement -
- Advertisement -

ಕೇಂದ್ರ ಸರ್ಕಾರಿ ನೌಕರರ ಆಯ್ದ ಗುಂಪಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಸಿಬ್ಬಂದಿ ಸಚಿವಾಲಯ ನೀಡಿದೆ.

ಈ ಕುರಿತು ಸಚಿವಾಲಯ ಆದೇಶ ಹೊರಡಿಸಿದ್ದು, “ಹೊಸ ಪಿಂಚಿಣಿ ಯೋಜನೆ (ಎನ್‌ಪಿಎಸ್‌) ಜಾರಿ ಅಧಿಸೂಚನೆ 2003ರ ಡಿಸೆಂಬರ್‌ 22ರಂದು ಪ್ರಕಟವಾಗುವುದಕ್ಕೂ ಮುನ್ನ ಕೇಂದ್ರ ಸರ್ಕಾರದ ಸೇವೆಗೆ ಸೇರಿಕೊಂಡ ನೌಕರರು, ‘ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ನಿಯಮ, 1972’ರ ಅಡಿಯಲ್ಲಿ ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ” ಎಂದು ತಿಳಿಸಲಾಗಿದೆ.

ಆಗಸ್ಟ್ 31, 2023ರೊಳಗೆ ಸಂಬಂಧಿಸಿದ ಸರ್ಕಾರಿ ನೌಕರರು ಈ ಆಯ್ಕೆಯನ್ನು ಮಾಡಿಕೊಳ್ಳಬಹುದು. ವಿವಿಧ ಉಲ್ಲೇಖಗಳು ಮತ್ತು ನ್ಯಾಯಾಲಯದ ನಿರ್ಧಾರಗಳನ್ನು ಆಧರಿಸಿ ಈ ಆದೇಶ ಹೊರಬಿದ್ದಿದೆ.

ನ್ಯಾಯಾಲಯಗಳ ವಿವಿಧ ಉಲ್ಲೇಖಗಳು ಮತ್ತು ನಿರ್ಧಾರಗಳ ಹಿನ್ನೆಲೆಯಲ್ಲಿ ಹಣಕಾಸು ಸೇವೆಗಳ ಇಲಾಖೆ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ವೆಚ್ಚ ಇಲಾಖೆ ಮತ್ತು ಕಾನೂನು ವ್ಯವಹಾರಗಳ ಇಲಾಖೆಯೊಂದಿಗೆ ಸಮಾಲೋಚಿಸಿ ವಿಷಯವನ್ನು ಪರಿಶೀಲಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನಿಗದಿತ ದಿನಾಂಕದೊಳಗೆ ಈ ಆಯ್ಕೆಯನ್ನು ಮಾಡಿಕೊಳ್ಳದಿದ್ದರೆ ಸಂಬಂಧಪಟ್ಟ ಎಲ್ಲಾ ನೌಕರರೂ ಎನ್‌ಪಿಎಸ್‌ನೊಳಗೆ ಬರಲಿದ್ದಾರೆ. ಒಮ್ಮೆ ಪ್ರಯೋಗಿಸಿದ ಆಯ್ಕೆಯೇ ಅಂತಿಮವಾಗಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿರಿ: ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಸಂಬಂಧಪಟ್ಟ ನೌಕರರು ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ನಿಯಮ, 1972 (ಈಗ 2021)ರ ಅಡಿಯಲ್ಲಿ ಷರತ್ತುಗಳನ್ನು ಪೂರೈಸಿದರೆ, ಈ ನಿಟ್ಟಿನಲ್ಲಿ ಅಗತ್ಯ ಆದೇಶವನ್ನು 31 ಅಕ್ಟೋಬರ್, 2023 ರೊಳಗೆ ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ. ಒಪಿಎಸ್‌ ಆಯ್ಕೆ ಮಾಡಿಕೊಳ್ಳುವ ಸರ್ಕಾರಿ ನೌಕರರ ಎನ್‌ಪಿಎಸ್‌ ಖಾತೆಯನ್ನು ಡಿಸೆಂಬರ್ 31, 2023ರಿಂದ ಮುಚ್ಚಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗುತ್ತದೆ.

14 ಲಕ್ಷಕ್ಕೂ ಹೆಚ್ಚಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಸಂಸ್ಥೆಯಾದ ‘ಹಳೆಯ ಪಿಂಚಣಿ ಯೋಜನೆಗಾಗಿ ರಾಷ್ಟ್ರೀಯ ಚಳವಳಿ’ (NMOPS) ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

“ಅರ್ಹ ಕೇಂದ್ರ ಸರ್ಕಾರಿ ನೌಕರರಿಗೆ ಇದು ಒಳ್ಳೆಯ ಸುದ್ದಿ. ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ಎಲ್ಲಾ ಕೇಂದ್ರ ಸರ್ಕಾರಿ ಸಿಬ್ಬಂದಿಗೆ ವಿಸ್ತರಿಸುವುದನ್ನು ಖಚಿತಪಡಿಸಿಕೊಳ್ಳಲು, ಅಸ್ತಿತ್ವದಲ್ಲಿರುವ ಎನ್‌ಪಿಎಸ್ ಅನ್ನು ತಿದ್ದುಪಡಿ ಮಾಡಲು ನಾವು ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಎನ್‌ಎಂಒಪಿಎಸ್ ದೆಹಲಿ ಘಟಕದ ಮುಖ್ಯಸ್ಥ ಮಂಜೀತ್ ಸಿಂಗ್ ಪಟೇಲ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...