Homeಮುಖಪುಟಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ - ಸಂತೋಷ್ ಹೆಗ್ಡೆ

- Advertisement -
- Advertisement -

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಆ ಸ್ವತಂತ್ರ ಸಂಸ್ಥೆ ಲೋಕಾಯುಕ್ತ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಪ್ರಶಾಂತ್ ಮಾಡಾಳ್ ರವರ ಭಾರೀ ಭ್ರಷ್ಟಾಚಾರವನ್ನು ಬಯಲಿಗೆಳೆದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಲೋಕಾಯುಕ್ತ ಪುನರ್‌ ಸ್ಥಾಪಿಸಿದ್ದು ನಾವು ಎಂದು ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ತಮ್ಮ ಪಕ್ಷದ ಶಾಸಕರ ಕಮಿಷನ್ ದಂಧೆಯನ್ನು ಮರೆಮಾಚುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಹೇಗೆ ಎಂಬ ಚರ್ಚೆಗಳು ನಡೆಯುತ್ತಿವೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಮುಖ್ಯವಾಗಿ  ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ, ವಕೀಲರ ಸಂಘ ಮತ್ತು ವಕೀಲ ಚಿದಾನಂದ ಅರಸ್‌ರವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠವು ಸುಧೀರ್ಘ ವಿಚಾರಣೆಯ ನಂತರ ಆಗಸ್ಟ್ 12, 2022 ರಂದು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಪಡಿಸಿಬೇಕು, ಲೋಕಾಯುಕ್ತವನ್ನು ಬಲಪಡಸಿಬೇಕು ಎಂದು ತೀರ್ಪು ನೀಡಿತ್ತು. ಅಲ್ಲದೆ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿತ್ತು.

ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದೆ: ಎಸ್.ಆರ್ ಹಿರೇಮಠ

ಎಸಿಬಿ ರದ್ದಾಗಬೇಕು ಮತ್ತು ಲೋಕಾಯುಕ್ತ ಮರು ಸ್ಥಾಪಿಸಬೇಕು ಎಂದು ಪಿಐಎಲ್ ಹೂಡಿ ಹೋರಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್‌.ಆರ್ ಹೀರೇಮಠರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನಾವು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು ನಮ್ಮ ಆತ್ಮತೃಪ್ತಿಗೆ ಹೊರತು ಕ್ಲೈಮ್ ಮಾಡಿಕೊಳ್ಳುವುದಕ್ಕಲ್ಲ. ನಾವು 12ನೇ ಶತಮಾನದ ಶರಣದ ಹೋರಾಟದಿಂದ ಪ್ರೇರಿತರಾಗಿದ್ದೇವೆ. ಲೋಕಾಯುಕ್ತ ವಿಚಾರಕ್ಕೆ ಹೇಳುವುದಾದರೆ ‘ಯಶಸ್ಸಿಗೆ ಹಲವಾರು ತಂದೆಗಳು, ಸೋಲು ತಬ್ಬಲಿ’ ಎಂಬ ಗಾದೆ ಮಾತಿನಂತೆ ಬಿಜೆಪಿ ಈಗ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ 2018ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಪುನರ್‌ ಸ್ಥಾಪಿಸುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಅವರು ಹೇಳಿದ್ದರು. ಆ ಕುರಿತು ಹಲವರು ಅವರಿಗೆ ಪದೇ ಪದೇ ನೆನಪು ಮಾಡಿದರೂ ಸಹ ಲೋಕಾಯುಕ್ತ ಮರುಸ್ಥಾಪಿಸಿರಲಿಲ್ಲ. ಕೊನೆಗೆ ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಎಲ್ಲರಿಗೂ ತಿಳಿದಿದೆ” ಎಂದರು.

“ಅಧಿಕಾರದಲ್ಲಿರುವ ಯಾರಿಗೂ, ಯಾವುದೇ ಪಕ್ಷಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಸಿದ್ದರಾಮಯ್ಯನವರು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಸಂತೋಷ್ ಹೆಗ್ಡೆಯವರು ನೀಡಿದ್ದ ವರದಿಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದ್ದರು. ಬಿಜೆಪಿಯವರನ್ನು ಟೀಕಿಸಿ ಮಾತನಾಡಿದ್ದರು. ಆದರೆ ಅವರು ಅಧಿಕಾರಕ್ಕೆ ಬಂದ ನಂತರ ಆ ವರದಿಯನ್ನು ಜಾರಿ ಮಾಡಲಿಲ್ಲ ಮಾತ್ರವಲ್ಲ, ಲೋಕಾಯುಕ್ತದ ರೆಕ್ಕೆಗಳನ್ನೆ ಕಿತ್ತು ಹಾಕಿದರು” ಎಂದು ಹಿರೇಮಠರವರು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟು ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಲೋಕಾಯುಕ್ತ ಸರಿಯಾದ ದಾರಿಯಲ್ಲಿ ನಡೆಯುತ್ತಿರುವಾಗ ಅದನ್ನು ಬಲಹೀನಗೊಳಿಸಿದ್ದು ಏಕೆ? ಅವು ಸ್ಥಾಪನೆಯಾದ ಹಿನ್ನೆಲೆ ಅವರಿಗೆ ಗೊತ್ತಿಲ್ಲವೇ? ಎಷ್ಟು ನಾಚಿಕೆಗೇಡುತನದಿಂದ ತಾವು ಮಾಡಿದ ಆ ಕೆಲಸವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇನ್ನು ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ನಿರ್ಗತಿಕ ಎಂದು ಹೇಳಿ ಗೋಮಾಳ ಸೇರಿ 20 ಎಕರೆ ಭೂಮಿ ಕಬಳಿಸಿದ್ದರು. ಅವರ ತಂದೆ ಎಚ್.ಡಿ ದೇವೇಗೌಡರು ತಮ್ಮ ಹೆಂಡತಿಯ ತಂಗಿಯ ಹೆಸರಿನಲ್ಲಿ 20 ಎಕರೆ ಜಮೀನು ಮಾಡಿದ್ದರು. ಈ ಕುರಿತು ನಾವು ದೂರು ನೀಡಿದ್ದೆವು. 2014ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅವೆಲ್ಲವೂ ಹೊರ ಬರುತ್ತವೆ ಎಂದು ಲೋಕಾಯುಕ್ತ ಮುಚ್ಚಿದ್ದನ್ನು ಪ್ರಶ್ನಿಸದೇ ಸುಮ್ಮನಿದ್ದರು. ಒಟ್ಟಿನಲ್ಲಿ ಮೂರು ಪಕ್ಷಗಳ ಭ್ರಷ್ಟರು ಲೋಕಾಯುಕ್ತವನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಇದನ್ನು ಈ ಪೀಳಿಗೆಯ ಯುವಜನರು ಪ್ರಶ್ನಿಸಬೇಕು ಎಂದರು.

ಇದೇ ರೀತಿಯ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಸಹ ಹೇಳಿದ್ಧಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿರುವ ಅವರು, “ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ ಎಂದಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಎಸಿಬಿ ತೆಗೆದು ಲೋಕಾಯುಕ್ತ ತರುತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು 24 ತಿಂಗಳು ಆದರೂ ಆ ಕೆಲಸ ಮಾಡಲಿಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿತು” ಎಂದಿದ್ದಾರೆ.

“ಯಾವ ಸರ್ಕಾರಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಏಕೆಂದರೆ ಅದರ ಕೆಲಸವೇ ಅಧಿಕಾರದಲ್ಲಿರುವವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು. ಆದ್ದರಿಂದ ಯಾರಿಗೂ ತಮ್ಮ ಮೇಲೆಯೇ ದಾಳಿ ಮಾಡುವ ಸ್ವತಂತ್ರ ಮತ್ತು ಬಲಿಷ್ಟ ಸಂಸ್ಥೆ ಬೇಕಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ರವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ “ಸುಳ್ಳು ಹೇಳುವದರಲ್ಲಿ ನಿಸ್ಸೀಮರು ಯಾರಾದರು ಇದ್ದರೆ ಅದು ಭಾರತೀಯ ಜನತ ಪಕ್ಷ. #BhrashtaBJP” ಎಂದು ಸಂತೋಷ್ ಹೆಗ್ಡೆಯವರ ಮಾತುಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....