Homeಮುಖಪುಟಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

- Advertisement -
- Advertisement -

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಬಂಧನದ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಸಹಿ ಮಾಡಿದ ಪತ್ರದಿಂದ ಕಾಂಗ್ರೆಸ್ ದೂರ ಉಳಿದಿದೆ.

ಈ ಪತ್ರಕ್ಕೆ ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಹಿ ಹಾಕಿದ್ದಾರೆ.

“ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂದು ಸೂಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಇಬ್ಬರನ್ನೂ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

”ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ” ಎಂದು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

”ಅದಾನಿ ಗ್ರೂಪ್‌ನ “ಹಣಕಾಸಿನ ಅಕ್ರಮಗಳ” ಬಗ್ಗೆ ಏಕೆ ತನಿಖೆ ಮಾಡಿಲ್ಲ, ಸಂಘಟಿತ ಸಂಸ್ಥೆಯನ್ನು ಹೆಸರಿಸದೆ ಪ್ರಶ್ನಿಸಿದೆ.

ಈ ಪತ್ರದಲ್ಲಿ ”ಅಂತರರಾಷ್ಟ್ರೀಯ ವಿಧಿವಿಜ್ಞಾನ ಹಣಕಾಸು ಸಂಶೋಧನಾ ವರದಿಯ ಪ್ರಕಟಣೆಯ ನಂತರ, ಎಸ್‌ಬಿಐ ಮತ್ತು ಎಲ್‌ಐಸಿ ನಿರ್ದಿಷ್ಟ ಸಂಸ್ಥೆಗೆ ಒಡ್ಡಿಕೊಂಡ ಕಾರಣ ತಮ್ಮ ಷೇರುಗಳ ಮಾರುಕಟ್ಟೆ ಬಂಡವಾಳದಲ್ಲಿ ₹78,000 ಕೋಟಿಗಳನ್ನು ಕಳೆದುಕೊಂಡಿವೆ ಎಂದು ವರದಿಯಾಗಿದೆ. ಸಾರ್ವಜನಿಕರ ಹಣವನ್ನು ಪಣಕ್ಕಿಟ್ಟಿದ್ದರೂ ಸಂಸ್ಥೆಯ ಹಣಕಾಸು ಅವ್ಯವಹಾರಗಳ ತನಿಖೆಗೆ ಕೇಂದ್ರ ಏಜೆನ್ಸಿಗಳನ್ನು ಏಕೆ ಸೇವೆಗೆ ಒತ್ತಾಯಿಸಲಿಲ್ಲ? ಈ ಏಜೆನ್ಸಿಗಳು ತಮ್ಮ ಆದ್ಯತೆಯನ್ನು ಈ ಪ್ರಕರಣಕ್ಕೆ ನೀಡಬೇಕಿತ್ತು ಎಂದು ಪತ್ರವನ್ನು ಸೇರಿಸಲಾಗಿದೆ.

”ದೆಹಲಿಯ ಶಾಲಾ ಶಿಕ್ಷಣವನ್ನು ಪರಿವರ್ತಿಸಲು ಮನೀಶ್ ಸಿಸೋಡಿಯಾ ಜಾಗತಿಕವಾಗಿ ಗುರುತಿಸಿಕೊಂಡಿದ್ದಾರೆ. ಅವರ ಬಂಧನದ ಬಗ್ಗೆ ವಿಶ್ವದಾದ್ಯಂತ ಮಾತನಾಡಲಾಗುತ್ತಿದೆ ಮತ್ತು ಈ ವಿಚಾರದಿಂದ ವಿಶ್ವವು  ಅನುಮಾನಿಸುತ್ತಿರುವುದನ್ನು ಮತ್ತಷ್ಟು ದೃಢಪಡಿಸುತ್ತದೆ. ಭಾರತದ ಪ್ರಜಾಪ್ರಭುತ್ವದ ಮೌಲ್ಯಗಳು ನಿರಂಕುಶ ಬಿಜೆಪಿ ಆಡಳಿತದಿಂದ ಅಪಾಯದಲ್ಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

”2014 ರಿಂದ ನಿಮ್ಮ ಆಡಳಿತದ ಅಡಿಯಲ್ಲಿ ತನಿಖಾ ಸಂಸ್ಥೆಗಳು ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಟ್ಟದಲ್ಲಿ ಪ್ರತಿಪಕ್ಷದವರೇ ಸೇರಿದ್ದಾರೆ. ಕುತೂಹಲಕಾರಿಯಾಗಿ ವಿಚಾರ ಎಂದರೆ, ವಿರೋಧ ಪಕ್ಷದ ರಾಜಕಾರಣಿಗಳು ಬಿಜೆಪಿಗೆ ಸೇರಿದರೆ ಅವರ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖಾ ಸಂಸ್ಥೆಗಳು ಮೌನವಾಗುತ್ತವೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದ ಕುರಿತು 2014 ಮತ್ತು 2015 ರಲ್ಲಿ ಸಿಬಿಐ ಮತ್ತು ಇಡಿ ವಿಚಾರಣೆಗೆ ಒಳಗಾಗಿದ್ದ ಉದಾಹರಣೆಯನ್ನು ವಿರೋಧ ಪಕ್ಷದ ನಾಯಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಹಿಮಂತ ಬಿಸ್ವಾ ಶರ್ಮಾ ಬಿಜೆಪಿಗೆ ಸೇರಿದ ನಂತರ ಪ್ರಕರಣವು ಪ್ರಗತಿಯಾಗಲಿಲ್ಲ. ಹಾಗೆಯೇ, ಟಿಎಂಸಿ (ತೃಣಮೂಲ ಕಾಂಗ್ರೆಸ್) ಮಾಜಿ ನಾಯಕರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಅವರು ನಾರದ ಕುಟುಕು ಕಾರ್ಯಾಚರಣೆ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ವಿಚಾರಣೆಯಲ್ಲಿದ್ದರು. ಆದರೆ ರಾಜ್ಯದಲ್ಲಿ (ಪಶ್ಚಿಮ ಬಂಗಾಳ) ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿಗೆ ಸೇರಿದ ನಂತರ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಯಿತು” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...