Homeಮುಖಪುಟಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

“ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರು ಲಂಡನ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘ (ಐಜೆಎ)ದ ಜೊತೆಯಲ್ಲಿ ಸಂವಾದ ನಡೆಸಿರುವ ರಾಹುಲ್‌ ಗಾಂಧಿಯವರಿಗೆ “ಭಾರತದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಬ್ಯಾನ್‌” ವಿಷಯ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ.

“ರಾಜಕೀಯ ಮತ್ತು ಸಾರ್ವಜನಿಕರು: ಗ್ರಹಿಕೆಯಿಂದ ಕಾರ್ಯಕ್ಷಮತೆಯೆಡೆಗೆ” ಎಂಬ ವಿಷಯದ ಕುರಿತ ಸಂವಾದ ಇದಾಗಿತ್ತು. ಭಾರತ್ ಜೋಡೋ ಯಾತ್ರೆ, ಚೀನಾ ಮತ್ತು ರಷ್ಯಾದ ಕುರಿತ ಭಾರತದ ವಿದೇಶಾಂಗ ನೀತಿ, ಕ್ರೋನಿ ಕ್ಯಾಪಿಟಲಿಸಂ ಮತ್ತು 2024ರ ಸಾರ್ವತ್ರಿಕ ಚುನಾವಣೆಗಳ ಕುರಿತ ಪ್ರಶ್ನೆಗಳಿಗೆ ಸಂವಾದದಲ್ಲಿ ಅವರು ಉತ್ತರಿಸಿದ್ದಾರೆ.

ಐಜೆಎ ಅಧ್ಯಕ್ಷ ಡ್ಯಾನಿಶ್ ಖಾನ್ ಅವರು ಸಂವಾದವನ್ನು ಆಯೋಜಿಸಿದ್ದರು. ಭಾರತ ಮತ್ತು ಯುಕೆಯ ಪತ್ರಕರ್ತರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. “ಬಿಬಿಸಿ ಸಾಕ್ಷ್ಯಚಿತ್ರದ ಸುತ್ತಲಿನ ವಿವಾದ, ಹೊಸದಿಲ್ಲಿಯ ಬಿಬಿಸಿ ಕಚೇರಿಗಳ ಮೇಲಿನ ದಾಳಿ ಕುರಿತು ರಾಹುಲ್‌ ಅಭಿಪ್ರಾಯವೇನು?” ಎಂದು ಕೇಳಲಾಯಿತು.

“ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ರಾಹುಲ್‌ ದೂರಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಉಪನ್ಯಾಸದ ಅಂಶಗಳನ್ನು ರಾಹುಲ್ ಗಾಂಧಿಯವರು ಇಲ್ಲಿಯೂ ಪ್ರತಿಧ್ವನಿಸಿದರು. “ಭಾರತದಲ್ಲಿನ ಸಂಸ್ಥೆಗಳು ಅಪಾಯದಲ್ಲಿವೆ ಮತ್ತು ಅಲ್ಪಸಂಖ್ಯಾತರು ತೊಂದರೆಗೆ ಸಿಲುಕಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

“ಅಂತಾರಾಷ್ಟ್ರೀಯ ಪ್ರವಾಸಗಳ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದರೆ, ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದಂತೆ” ಎಂಬ ವಾದಗಳಿಗೆ ಪ್ರತಿಕ್ರಿಯಿಸಿರುವ ರಾಹು‌ಲ್, “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಮಾಡಿರುವ ಭಾಷಣಗಳನ್ನು ಗಮನಿಸಿ” ಎಂದು ತಿಳಿಸಿದ್ದಾರೆ.

“60 ವರ್ಷಗಳಲ್ಲಿ ಭಾರತದಲ್ಲಿ ಏನೂ ಆಗಿಲ್ಲ”, “ಭಾರತದಲ್ಲಿ ಅನಿಯಮಿತ ಭ್ರಷ್ಟಾಚಾರವಿದೆ” ಮೊದಲಾಗಿ ಮೋದಿ ಹೇಳಿರುವುದನ್ನು ಪ್ರಸ್ತಾಪಿಸಿರುವ ರಾಹುಲ್‌, “ಭಾರತವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರನ್ನು ಮೋದಿ ಅವಮಾನಿಸಿದ್ದಾರೆ” ಎಂದಿದ್ದಾರೆ.

“ಹಾಗಾಗಿ, ವಿದೇಶಕ್ಕೆ ಹೋದಾಗ ಭಾರತವನ್ನು ದೂಷಿಸುವ ವ್ಯಕ್ತಿ ಭಾರತದ ಪ್ರಧಾನಿ ಮೋದಿ” ಎಂದು ಟೀಕಿಸಿದ್ದಾರೆ.

“ನಾನು ಎಂದಿಗೂ ನನ್ನ ದೇಶಕ್ಕೆ ಮಾನಹಾನಿ ಮಾಡಿಲ್ಲ. ನಾನು ಅದನ್ನು ಎಂದಿಗೂ ಮಾಡುವುದಿಲ್ಲ” ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. “ನಾನು ಹೇಳುದ ವಿಚಾರವನ್ನು ತಿರುಚಲು ಬಿಜೆಪಿಯವರು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷಗಳು ದುರ್ಬಲವಾಗಿದೆ ಮತ್ತು ಅದರೊಳಗೆ ಬಿರುಕುಗಳಿವೆ ಎಂಬ ವಾದಗಳನ್ನು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. “ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಹೋರಾಡಿ ಸೋಲಿಸಬೇಕು ಎಂಬ ಮೂಲ ಕಲ್ಪನೆಯು ಪ್ರತಿಪಕ್ಷಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

“ಕೆಲವು ಚರ್ಚೆಯ ಅಗತ್ಯವಿದೆ. ಆದರೆ ವಿರೋಧ ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ಸಮರ್ಥವಾಗಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ” ಎಂದು ಸುಳಿವು ನೀಡಿದ್ದಾರೆ.

“ನಾವು ಭಾರತದ ಸಾಂಸ್ಥಿಕ ರಚನೆಗಳ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದ ಬಹುತೇಕ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಸಂವಾದದಲ್ಲಿ ತಿಳಿಸಿದ್ದಾರೆ.

ನಿರೂಪಣೆಗಳನ್ನು (ನೆರೇಟಿವ್‌ಗಳನ್ನು) ಕಟ್ಟುವಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂಬುದನ್ನು ರಾಹುಲ್ ನಿರಾಕರಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯು ಪರಿಸ್ಥಿತಿಯನ್ನು ಬದಲಾಯಿಸಿದೆ. ಕಾಂಗ್ರೆಸ್ ಈಗ ನೆರೇಟಿವ್‌ಗಳನ್ನು ಮುನ್ನಡೆಸುತ್ತಿದೆ. ನಾವು ದೇಶಾದ್ಯಂತ ಯಾತ್ರೆಯನ್ನು ನಡೆಸಿದ್ದೇವೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಲ್ಲಿ ನೆರೇಟಿವ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ್ದೇವೆ. ಇದು ರೂಪಾಂತರ ಸ್ಥಿತಿ. ರಾಷ್ಟ್ರೀಯ ಪತ್ರಿಕೆಗಳು ಯಾತ್ರೆಯನ್ನು ಕವರ್‌ ಮಾಡಲೇಬೇಕಾಯಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...