Homeಮುಖಪುಟಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

“ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರು ಲಂಡನ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘ (ಐಜೆಎ)ದ ಜೊತೆಯಲ್ಲಿ ಸಂವಾದ ನಡೆಸಿರುವ ರಾಹುಲ್‌ ಗಾಂಧಿಯವರಿಗೆ “ಭಾರತದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಬ್ಯಾನ್‌” ವಿಷಯ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ.

“ರಾಜಕೀಯ ಮತ್ತು ಸಾರ್ವಜನಿಕರು: ಗ್ರಹಿಕೆಯಿಂದ ಕಾರ್ಯಕ್ಷಮತೆಯೆಡೆಗೆ” ಎಂಬ ವಿಷಯದ ಕುರಿತ ಸಂವಾದ ಇದಾಗಿತ್ತು. ಭಾರತ್ ಜೋಡೋ ಯಾತ್ರೆ, ಚೀನಾ ಮತ್ತು ರಷ್ಯಾದ ಕುರಿತ ಭಾರತದ ವಿದೇಶಾಂಗ ನೀತಿ, ಕ್ರೋನಿ ಕ್ಯಾಪಿಟಲಿಸಂ ಮತ್ತು 2024ರ ಸಾರ್ವತ್ರಿಕ ಚುನಾವಣೆಗಳ ಕುರಿತ ಪ್ರಶ್ನೆಗಳಿಗೆ ಸಂವಾದದಲ್ಲಿ ಅವರು ಉತ್ತರಿಸಿದ್ದಾರೆ.

ಐಜೆಎ ಅಧ್ಯಕ್ಷ ಡ್ಯಾನಿಶ್ ಖಾನ್ ಅವರು ಸಂವಾದವನ್ನು ಆಯೋಜಿಸಿದ್ದರು. ಭಾರತ ಮತ್ತು ಯುಕೆಯ ಪತ್ರಕರ್ತರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. “ಬಿಬಿಸಿ ಸಾಕ್ಷ್ಯಚಿತ್ರದ ಸುತ್ತಲಿನ ವಿವಾದ, ಹೊಸದಿಲ್ಲಿಯ ಬಿಬಿಸಿ ಕಚೇರಿಗಳ ಮೇಲಿನ ದಾಳಿ ಕುರಿತು ರಾಹುಲ್‌ ಅಭಿಪ್ರಾಯವೇನು?” ಎಂದು ಕೇಳಲಾಯಿತು.

“ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ರಾಹುಲ್‌ ದೂರಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಉಪನ್ಯಾಸದ ಅಂಶಗಳನ್ನು ರಾಹುಲ್ ಗಾಂಧಿಯವರು ಇಲ್ಲಿಯೂ ಪ್ರತಿಧ್ವನಿಸಿದರು. “ಭಾರತದಲ್ಲಿನ ಸಂಸ್ಥೆಗಳು ಅಪಾಯದಲ್ಲಿವೆ ಮತ್ತು ಅಲ್ಪಸಂಖ್ಯಾತರು ತೊಂದರೆಗೆ ಸಿಲುಕಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

“ಅಂತಾರಾಷ್ಟ್ರೀಯ ಪ್ರವಾಸಗಳ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದರೆ, ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದಂತೆ” ಎಂಬ ವಾದಗಳಿಗೆ ಪ್ರತಿಕ್ರಿಯಿಸಿರುವ ರಾಹು‌ಲ್, “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಮಾಡಿರುವ ಭಾಷಣಗಳನ್ನು ಗಮನಿಸಿ” ಎಂದು ತಿಳಿಸಿದ್ದಾರೆ.

“60 ವರ್ಷಗಳಲ್ಲಿ ಭಾರತದಲ್ಲಿ ಏನೂ ಆಗಿಲ್ಲ”, “ಭಾರತದಲ್ಲಿ ಅನಿಯಮಿತ ಭ್ರಷ್ಟಾಚಾರವಿದೆ” ಮೊದಲಾಗಿ ಮೋದಿ ಹೇಳಿರುವುದನ್ನು ಪ್ರಸ್ತಾಪಿಸಿರುವ ರಾಹುಲ್‌, “ಭಾರತವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರನ್ನು ಮೋದಿ ಅವಮಾನಿಸಿದ್ದಾರೆ” ಎಂದಿದ್ದಾರೆ.

“ಹಾಗಾಗಿ, ವಿದೇಶಕ್ಕೆ ಹೋದಾಗ ಭಾರತವನ್ನು ದೂಷಿಸುವ ವ್ಯಕ್ತಿ ಭಾರತದ ಪ್ರಧಾನಿ ಮೋದಿ” ಎಂದು ಟೀಕಿಸಿದ್ದಾರೆ.

“ನಾನು ಎಂದಿಗೂ ನನ್ನ ದೇಶಕ್ಕೆ ಮಾನಹಾನಿ ಮಾಡಿಲ್ಲ. ನಾನು ಅದನ್ನು ಎಂದಿಗೂ ಮಾಡುವುದಿಲ್ಲ” ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. “ನಾನು ಹೇಳುದ ವಿಚಾರವನ್ನು ತಿರುಚಲು ಬಿಜೆಪಿಯವರು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷಗಳು ದುರ್ಬಲವಾಗಿದೆ ಮತ್ತು ಅದರೊಳಗೆ ಬಿರುಕುಗಳಿವೆ ಎಂಬ ವಾದಗಳನ್ನು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. “ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಹೋರಾಡಿ ಸೋಲಿಸಬೇಕು ಎಂಬ ಮೂಲ ಕಲ್ಪನೆಯು ಪ್ರತಿಪಕ್ಷಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

“ಕೆಲವು ಚರ್ಚೆಯ ಅಗತ್ಯವಿದೆ. ಆದರೆ ವಿರೋಧ ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ಸಮರ್ಥವಾಗಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ” ಎಂದು ಸುಳಿವು ನೀಡಿದ್ದಾರೆ.

“ನಾವು ಭಾರತದ ಸಾಂಸ್ಥಿಕ ರಚನೆಗಳ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದ ಬಹುತೇಕ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಸಂವಾದದಲ್ಲಿ ತಿಳಿಸಿದ್ದಾರೆ.

ನಿರೂಪಣೆಗಳನ್ನು (ನೆರೇಟಿವ್‌ಗಳನ್ನು) ಕಟ್ಟುವಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂಬುದನ್ನು ರಾಹುಲ್ ನಿರಾಕರಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯು ಪರಿಸ್ಥಿತಿಯನ್ನು ಬದಲಾಯಿಸಿದೆ. ಕಾಂಗ್ರೆಸ್ ಈಗ ನೆರೇಟಿವ್‌ಗಳನ್ನು ಮುನ್ನಡೆಸುತ್ತಿದೆ. ನಾವು ದೇಶಾದ್ಯಂತ ಯಾತ್ರೆಯನ್ನು ನಡೆಸಿದ್ದೇವೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಲ್ಲಿ ನೆರೇಟಿವ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ್ದೇವೆ. ಇದು ರೂಪಾಂತರ ಸ್ಥಿತಿ. ರಾಷ್ಟ್ರೀಯ ಪತ್ರಿಕೆಗಳು ಯಾತ್ರೆಯನ್ನು ಕವರ್‌ ಮಾಡಲೇಬೇಕಾಯಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...