Homeಮುಖಪುಟಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

“ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರು ಲಂಡನ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘ (ಐಜೆಎ)ದ ಜೊತೆಯಲ್ಲಿ ಸಂವಾದ ನಡೆಸಿರುವ ರಾಹುಲ್‌ ಗಾಂಧಿಯವರಿಗೆ “ಭಾರತದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಬ್ಯಾನ್‌” ವಿಷಯ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ.

“ರಾಜಕೀಯ ಮತ್ತು ಸಾರ್ವಜನಿಕರು: ಗ್ರಹಿಕೆಯಿಂದ ಕಾರ್ಯಕ್ಷಮತೆಯೆಡೆಗೆ” ಎಂಬ ವಿಷಯದ ಕುರಿತ ಸಂವಾದ ಇದಾಗಿತ್ತು. ಭಾರತ್ ಜೋಡೋ ಯಾತ್ರೆ, ಚೀನಾ ಮತ್ತು ರಷ್ಯಾದ ಕುರಿತ ಭಾರತದ ವಿದೇಶಾಂಗ ನೀತಿ, ಕ್ರೋನಿ ಕ್ಯಾಪಿಟಲಿಸಂ ಮತ್ತು 2024ರ ಸಾರ್ವತ್ರಿಕ ಚುನಾವಣೆಗಳ ಕುರಿತ ಪ್ರಶ್ನೆಗಳಿಗೆ ಸಂವಾದದಲ್ಲಿ ಅವರು ಉತ್ತರಿಸಿದ್ದಾರೆ.

ಐಜೆಎ ಅಧ್ಯಕ್ಷ ಡ್ಯಾನಿಶ್ ಖಾನ್ ಅವರು ಸಂವಾದವನ್ನು ಆಯೋಜಿಸಿದ್ದರು. ಭಾರತ ಮತ್ತು ಯುಕೆಯ ಪತ್ರಕರ್ತರು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. “ಬಿಬಿಸಿ ಸಾಕ್ಷ್ಯಚಿತ್ರದ ಸುತ್ತಲಿನ ವಿವಾದ, ಹೊಸದಿಲ್ಲಿಯ ಬಿಬಿಸಿ ಕಚೇರಿಗಳ ಮೇಲಿನ ದಾಳಿ ಕುರಿತು ರಾಹುಲ್‌ ಅಭಿಪ್ರಾಯವೇನು?” ಎಂದು ಕೇಳಲಾಯಿತು.

“ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ರಾಹುಲ್‌ ದೂರಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಉಪನ್ಯಾಸದ ಅಂಶಗಳನ್ನು ರಾಹುಲ್ ಗಾಂಧಿಯವರು ಇಲ್ಲಿಯೂ ಪ್ರತಿಧ್ವನಿಸಿದರು. “ಭಾರತದಲ್ಲಿನ ಸಂಸ್ಥೆಗಳು ಅಪಾಯದಲ್ಲಿವೆ ಮತ್ತು ಅಲ್ಪಸಂಖ್ಯಾತರು ತೊಂದರೆಗೆ ಸಿಲುಕಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

“ಅಂತಾರಾಷ್ಟ್ರೀಯ ಪ್ರವಾಸಗಳ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದರೆ, ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಮಾನಿಸಿದಂತೆ” ಎಂಬ ವಾದಗಳಿಗೆ ಪ್ರತಿಕ್ರಿಯಿಸಿರುವ ರಾಹು‌ಲ್, “ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಮಾಡಿರುವ ಭಾಷಣಗಳನ್ನು ಗಮನಿಸಿ” ಎಂದು ತಿಳಿಸಿದ್ದಾರೆ.

“60 ವರ್ಷಗಳಲ್ಲಿ ಭಾರತದಲ್ಲಿ ಏನೂ ಆಗಿಲ್ಲ”, “ಭಾರತದಲ್ಲಿ ಅನಿಯಮಿತ ಭ್ರಷ್ಟಾಚಾರವಿದೆ” ಮೊದಲಾಗಿ ಮೋದಿ ಹೇಳಿರುವುದನ್ನು ಪ್ರಸ್ತಾಪಿಸಿರುವ ರಾಹುಲ್‌, “ಭಾರತವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರನ್ನು ಮೋದಿ ಅವಮಾನಿಸಿದ್ದಾರೆ” ಎಂದಿದ್ದಾರೆ.

“ಹಾಗಾಗಿ, ವಿದೇಶಕ್ಕೆ ಹೋದಾಗ ಭಾರತವನ್ನು ದೂಷಿಸುವ ವ್ಯಕ್ತಿ ಭಾರತದ ಪ್ರಧಾನಿ ಮೋದಿ” ಎಂದು ಟೀಕಿಸಿದ್ದಾರೆ.

“ನಾನು ಎಂದಿಗೂ ನನ್ನ ದೇಶಕ್ಕೆ ಮಾನಹಾನಿ ಮಾಡಿಲ್ಲ. ನಾನು ಅದನ್ನು ಎಂದಿಗೂ ಮಾಡುವುದಿಲ್ಲ” ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. “ನಾನು ಹೇಳುದ ವಿಚಾರವನ್ನು ತಿರುಚಲು ಬಿಜೆಪಿಯವರು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷಗಳು ದುರ್ಬಲವಾಗಿದೆ ಮತ್ತು ಅದರೊಳಗೆ ಬಿರುಕುಗಳಿವೆ ಎಂಬ ವಾದಗಳನ್ನು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. “ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಹೋರಾಡಿ ಸೋಲಿಸಬೇಕು ಎಂಬ ಮೂಲ ಕಲ್ಪನೆಯು ಪ್ರತಿಪಕ್ಷಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

“ಕೆಲವು ಚರ್ಚೆಯ ಅಗತ್ಯವಿದೆ. ಆದರೆ ವಿರೋಧ ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ಸಮರ್ಥವಾಗಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ” ಎಂದು ಸುಳಿವು ನೀಡಿದ್ದಾರೆ.

“ನಾವು ಭಾರತದ ಸಾಂಸ್ಥಿಕ ರಚನೆಗಳ ವಿರುದ್ಧ ಹೋರಾಡುತ್ತಿದ್ದೇವೆ. ಭಾರತದ ಬಹುತೇಕ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಾವು ಹೋರಾಡುತ್ತಿದ್ದೇವೆ” ಎಂದು ಸಂವಾದದಲ್ಲಿ ತಿಳಿಸಿದ್ದಾರೆ.

ನಿರೂಪಣೆಗಳನ್ನು (ನೆರೇಟಿವ್‌ಗಳನ್ನು) ಕಟ್ಟುವಲ್ಲಿ ಕಾಂಗ್ರೆಸ್ ಸೋಲುತ್ತಿದೆ ಎಂಬುದನ್ನು ರಾಹುಲ್ ನಿರಾಕರಿಸಿದ್ದಾರೆ. “ಭಾರತ್ ಜೋಡೋ ಯಾತ್ರೆಯು ಪರಿಸ್ಥಿತಿಯನ್ನು ಬದಲಾಯಿಸಿದೆ. ಕಾಂಗ್ರೆಸ್ ಈಗ ನೆರೇಟಿವ್‌ಗಳನ್ನು ಮುನ್ನಡೆಸುತ್ತಿದೆ. ನಾವು ದೇಶಾದ್ಯಂತ ಯಾತ್ರೆಯನ್ನು ನಡೆಸಿದ್ದೇವೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಲ್ಲಿ ನೆರೇಟಿವ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ್ದೇವೆ. ಇದು ರೂಪಾಂತರ ಸ್ಥಿತಿ. ರಾಷ್ಟ್ರೀಯ ಪತ್ರಿಕೆಗಳು ಯಾತ್ರೆಯನ್ನು ಕವರ್‌ ಮಾಡಲೇಬೇಕಾಯಿತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...