Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...