Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...