Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...