Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...