Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...