Homeಮುಖಪುಟಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಕರೆ

ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಕರೆ

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳ್ ಪ್ರಶಾಂತ್ ಕಮಿಷನ್ ಲಂಚ ಮತ್ತು ಬಹುಕೋಟಿ ಅಕ್ರಮ ಹಣ ಸಂಗ್ರಹ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಂತರ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ತೀವ್ರಗೊಳಿಸಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಮಾರ್ಚ್ 9 ರಂದು ಕರ್ನಾಟಕ ಬಂದ್ ಹೋರಾಟಕ್ಕೆ ಕರೆ ನೀಡಿದೆ.

ಪ್ರಕರಣ ಹೊರಬಿದ್ದು 5 ದಿನಗಳಾದರೂ ಪ್ರಮುಖ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಬಂಧಿಸಿಲ್ಲ ಹಾಗೂ ಸಾಲು ಸಾಲು ಭ್ರಷ್ಟಾಚಾರ ಹಗರಣಗಳ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

“ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. ಶೇ.40 ಕಮಿಷನ್ ಸರ್ಕಾರದಿಂದ ಜನರ ಬದುಕು ನಾಶವಾಗಿದೆ. ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ ಮತ್ತು ಭ್ರಷ್ಟಾಚಾರಕ್ಕೋಸ್ಕರ ಇರುವ ಸರ್ಕಾರವಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 9 ರಂದು ಬೆಳಿಗ್ತೆ 9 ಗಂಟೆಯಿಂದ 11 ಗಂಟೆಯವರೆಗೆ ವ್ಯಾಪಾರ ವಹಿವಾಟು ಬಂದ್ ಮಾಡಿ ಹೋರಾಟ ನಡೆಸುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

40% ಕಮಿಷನ್ ಭ್ರಷ್ಟಾಚಾರಕ್ಕೆ ದಾಖಲೆ ಕೊಡಿ ಎಂದು ಸಿಎಂ ಬೊಮ್ಮಾಯಿಯವರು ಹೇಳುತ್ತಿದ್ದರು. ಈಗ ಲೋಕಾಯುಕ್ತ ಅಧಿಕಾರಗಳು ಸಂಪೂರ್ಣ ಸಾಕ್ಷಿ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈಗಲಾದರೂ ಬೊಮ್ಮಾಯಿಯವರು ರಾಜೀನಾಮೆ ನೀಡುವರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕೊರಟಗೆರೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ರಾಜ್ಯದ 40% ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮೋದಿ, ಅಮಿಶ್ ಶಾ ಅವರು ಯಾಕೆ ಏನನ್ನೂ ಮಾತನಾಡುತ್ತಿಲ್ಲ? ಮೋದಿಯವರು ದೇಶದಲ್ಲಿ ಬಹಳ ಭ್ರಷ್ಟಾಚಾರ ಇದೆ ಎನ್ನುತ್ತಾರೆ ಆದರೆ ತಮ್ಮ ಕಣ್ಣ ಕೆಳಗೇ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಅದನ್ಯಾಕೆ ನೋಡುತ್ತಿಲ್ಲ? ನೀವೂ ತಿನ್ನಿ, ನಮ್ಮ ಪಾಲು ನಮಗೆ ಕಳುಹಿಸಿ ಎಂಬಂತಿದೆ ಅವರ ವರ್ತನೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚಾದ ಹಿಂಸಾಚಾರ: ಸಿಪಿಐ(ಎಂ) ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...