Homeಮುಖಪುಟಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

- Advertisement -
- Advertisement -

ಅದಾನಿ ಗ್ರೂಪ್ ಸ್ಟಾಕ್‌ನಲ್ಲಿನ ಶೇಕಡ 90ರಷ್ಟು ಅಂದರೆ 6.9 ಬಿಲಿಯನ್ ಡಾಲರ್‌ನಷ್ಟು ಹೂಡಿಕೆ ಮಾಡಿರುವ ಮಾರಿಷಸ್ ಫಂಡ್ ಮಾಲೀಕರ ಬಗ್ಗೆ ಸೆಬಿ (SEBI) ಯಾಕೆ ಇನ್ನೂ ಪ್ರಶ್ನೆ ಮಾಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕೇಳಿದ್ದಾರೆ.

ಎಲಾರಾ ಇಂಡಿಯ ಆಪೋರ್ಚಿನಿಟೀಸ್ ಫಂಡ್, ಕ್ರೆಸ್ಟಾ ಫಂಡ್, ಅಲ್ಬುಲಾ ಇನ್‌ವೆಸ್ಟ್‌ಮೆಂಟ್ ಫಂಡ್ ಮತ್ತು ಎಪಿಎಂಎಸ್ ಇನ್‌ವೆಸ್ಟ್‌ಮೆಂಟ್ ಫಂಡ್‌ ಸಂಸ್ಥೆಗಳು ಶೆಲ್ ಸಂಸ್ಥೆಗಳು ಎಂಬ ಆರೋಪದ ಬಳಿಕ ಕಣ್ಮರೆಯಾಗಿದ್ದವು. ಶೆಲ್‌ ಸಂಸ್ಥೆ ಎಂದರೆ ತೆರಿಗೆ ವಂಚಿಸುವುದಕ್ಕಾಗಿ ತೆರಿಗೆ ಮುಕ್ತ ರಾಷ್ಟ್ರಗಳಲ್ಲಿ ಬರೀ ಹೆಸರಿಗಿರುವ ಸಂಸ್ಥೆಯಾಗಿದೆ. ಅದಾನಿ ಸಮೂಹವು ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿಕೊಳ್ಳಲು ಈ ಸಂಸ್ಥೆಗಳ ಮೂಲಕ ಹೂಡಿಕೆ ಮಾಡಿದ್ದಾರೆ ಎಂದು ಹಿಂಡನ್‌ಬರ್ಗ್ ವರದಿ ಆರೋಪಿಸಿದೆ.

ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಬಂಧದ ಕುರಿತು ಪಾರದರ್ಶಕತೆ ಇಲ್ಲದಿದ್ದಾಗ ಸೆಬಿಯಂತಹ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುವುದನ್ನು ಉತ್ತೇಜಿಸಬೇಕು. ಮಾರಿಷಸ್‌ನಿಂದ ಅದಾನಿ ಕಂಪನಿ ಷೇರುಗಳನ್ನು ಮಾರುತ್ತಿರುವ ಮತ್ತು ಹೋಲ್ಡಿಂಗ್ ಮಾಡುತ್ತಿರುವ ಕಂಪನಿಗಳ ಮಾಲೀಕರು ಯಾರು ಎಂಬುದನ್ನು ಏಕೆ ಸೆಬಿ ಪತ್ತೆ ಹಚ್ಚುತ್ತಿಲ್ಲ. ಏಕೆಂದರೆ ಅವುಗಳ ಮಾಲೀಕತ್ವ ನಿಗೂಢವಾಗಿದ್ದು, ಅದಾನಿ ಕುಟುಂಬದವರೆ ಆ ಕಂಪನಿಗಳನ್ನು ನಡೆಸುತ್ತಿವೆ ಎಂದು ಹಿಂಡೆನ್‌ ಬರ್ಗ್ ವರದಿ ಆರೋಪಿಸಿದೆ ಎಂದು ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆಯ ದರ ಕುಸಿತ

ಭಾರತದ ಆರ್ಥಿಕ ಬೆಳವಣಿಗೆಯ ದರವು ಮೂರನೇ ತ್ರೈಮಾಸಿಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಭಾರತವು ಅಪಾಯಕಾರಿ ಹಂತದ ಹತ್ತಿರದಲ್ಲಿದೆ ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ)ಯು ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ತ್ರೈಮಾಸಿಕ ಬೆಳವಣಿಗೆಯಲ್ಲಿ ಅನುಕ್ರಮವಾದ ನಿಧಾನಗತಿಯನ್ನು ನೋಡಿದರೆ ಬಹಳ ಕಳವಳಕಾರಿಯಾಗಿದೆ ಎಂದು ರಾಜನ್ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ಯು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 4.4%ಕ್ಕೆ ಕಡಿಮೆಯಾಗಿದೆ. ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) 6.3% ಮತ್ತು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 13.2% ಇತ್ತು. ಈ ರೀತಿ ಅನುಕ್ರಮವಾದ ನಿಧಾನಗತಿಯ ಬೆಳವಣಿಗೆಯು ಆತಂಕ ಸೃಷ್ಟಿಸುತ್ತದೆ ಎಂದಿದ್ದಾರೆ.

”ಆಶಾವಾದಿಗಳು GDP [ಒಟ್ಟು ದೇಶೀಯ ಉತ್ಪನ್ನ] ಹೆಚ್ಚಳದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅನುಕ್ರಮವಾದ ನಿಧಾನಗತಿಯ ಬಗ್ಗೆ ನಾನು ಚಿಂತಿತನಾಗಿದ್ದೇನೆ” ಎಂದು ರಾಜನ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

”ಖಾಸಗಿ ವಲಯವು ಹೂಡಿಕೆ ಮಾಡಲು ಇಷ್ಟವಿಲ್ಲದ ಕಾರಣ RBI ಇನ್ನೂ ದರಗಳನ್ನು ಹೆಚ್ಚಿಸುತ್ತಿದೆ ಮತ್ತು ಜಾಗತಿಕ ಬೆಳವಣಿಗೆಯು ವರ್ಷದ ನಂತರ ನಿಧಾನಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿ ಬೆಳವಣಿಗೆಯ ಆವೇಗವನ್ನು ನಾವು ಎಲ್ಲಿ ಕಂಡುಕೊಳ್ಳುತ್ತೇವೆ ಎಂದು ನನಗೆ ಖಚಿತವಿಲ್ಲ” ಎಂದು ಹೇಳಿದ್ದಾರೆ.

“ಈ ಹಂತದಲ್ಲಿ, ಮೂರು ವರ್ಷಗಳ ಹಿಂದೆ ಅಂದರೆ ಕೊರೊನಾ ಸಾಂಕ್ರಾಮಿಕ ಬರುವ ಮುಂಚೆ ಹೋಲಿಸಿದರೆ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಸರಾಸರಿ ವಾರ್ಷಿಕ ಬೆಳವಣಿಗೆಯು 3.7% ಆಗಿದೆ. ಇದು ದೇಶಕ್ಕೆ ಅಪಾಯಕಾರಿಯಾದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. MY OPINION …As Governer OF RBI this route WAS THERE via MAURITIOUS . AT HIS WATCH HE NEVER FOUND ANYTHING WRONG. WHY NOW? WHY WAS THIS ROUTE CREATED What was the need

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...