Homeಮುಖಪುಟರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ...

ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೊಮ್ಮೆ ತಮ್ಮ ನಾಲಿಗೆ ಹರಿಯ ಬಿಟ್ಟಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ಕೀಳು ಮಟ್ಟದ ಅಸಹ್ಯಕರ ಹೇಳಿಕೆ ನೀಡಿದ್ದಾರೆ. ಉದ್ದೇಶ ಪೂರ್ವಕವಾಗಿ ವೈಯಕ್ತಿಯ ತೇಜೋವಧೆ ಮಾಡುವ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಟೀಲ್, “ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಆದರೆ ರಾತ್ರಿ ವೇಳೆ ಕದ್ದು ರಾಹುಲ್ ಗಾಂಧಿ, ಸಿದ್ದರಾಮಯ್ಯ ಲಸಿಕೆ ತೆಗೆದುಕೊಂಡರು. ಅದಕ್ಕೆ ಮೊನ್ನೆ ನಮ್ಮ ಎಂಎಲ್‌ಸಿ ಮಂಜುನಾಥ್ ಹೇಳಿದರು, ಅದಕ್ಕೆ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಹೇಗೂ ಅವರಿಗೆ ಮಕ್ಕಳಾಗುವುದಿಲ್ಲ ಅಂತ” ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ – ಕಾಂಗ್ರೆಸ್

“ಕರ್ನಾಟಕದ ಬಿಜೆಪಿಯ ಸರ್ಕಸ್‌ನಲ್ಲಿ ಜೋಕರ್ ಒಬ್ಬ ಶಾಶ್ವತ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕ ಎರಡೂ ವಿಷಯದಲ್ಲಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಸುದ್ದಿಯಾಗಲು ಅವಿವೇಕದ ಹೇಳಿಕೆಗಳನ್ನು ನೀಡುತ್ತಾರೆ. ಅವರೆ ನಳೀನ್ ಕುಮಾರ್ ಕಟೀಲ್ ಆಗಿದ್ದು ದಯವಿಟ್ಟು ಆತನನ್ನು ನಿರ್ಲಕ್ಷಿಸಿ” ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣ್‌ದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಮುಂದುವರಿದು “ಇಂತಹ ಮೂರ್ಖತನಗಳು ಯಾವಾಗಲೂ ಹೇಡಿಗಳು ಮತ್ತು ಮೂರ್ಖರ ಆಶ್ರಯವಾಗಿದೆ – ಇದು ಬಿಜೆಪಿಯ ಹುಟ್ಟುಗುಣವಾಗಿದೆ. ಅವರು ವಿಜ್ಞಾನ ಮತ್ತು ವಿಜ್ಞಾನಿಗಳನ್ನು ಅವಮಾನಿಸುತ್ತಾರೆ. ಅವರು ವೈಜ್ಞಾನಿಕ ಮನೋಭಾವವನ್ನು ವಿರೋಧಿಸುತ್ತಾರೆ. ಅವರು ಸಾಂಪ್ರದಾಯಿಕತೆಯನ್ನು ಉತ್ತೇಜಿಸುತ್ತಾರೆ. ಅವರನ್ನು ಇತಿಹಾಸದ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, “ನಮ್ಮ ಅಧ್ಯಕ್ಷರು ಯಾವ ಸಂದರ್ಭದಲ್ಲಿ ಆ ಟೀಕೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ನಾನು ಆ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಮತ್ತು ಅದರಿಂದ ದೂರವಿರಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು “ಎಷ್ಟೊಂದು ಅಸಹ್ಯಕರ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರಾಗಲಿ, ಸಿದ್ದರಾಮಯ್ಯನವರಾಗಲಿ ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂಬ ಹೇಳಿಕೆಯನ್ನು ಎಂದೂ ನೀಡಿಲ್ಲ. ರಾಹುಲ್ ಗಾಂಧಿ ಮದುವೆಯಾಗದಿರುವುದು ಅವರ ವೈಯಕ್ತಿಕ ವಿಷಯ. ಆದರೂ ಅನಾವಶ್ಯಕವಾಗಿ ಅವರ ಹೆಸರನ್ನು ಎಳೆದುತಂದು ನಳೀನ್ ಕುಮಾರ್ ಕಟೀಲ್ ಅಸಹ್ಯವಾಗಿ ಅಪಹಾಸ್ಯ ಮಾಡುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....