Homeಮುಖಪುಟರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ...

ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೊಮ್ಮೆ ತಮ್ಮ ನಾಲಿಗೆ ಹರಿಯ ಬಿಟ್ಟಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ಕೀಳು ಮಟ್ಟದ ಅಸಹ್ಯಕರ ಹೇಳಿಕೆ ನೀಡಿದ್ದಾರೆ. ಉದ್ದೇಶ ಪೂರ್ವಕವಾಗಿ ವೈಯಕ್ತಿಯ ತೇಜೋವಧೆ ಮಾಡುವ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಟೀಲ್, “ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಆದರೆ ರಾತ್ರಿ ವೇಳೆ ಕದ್ದು ರಾಹುಲ್ ಗಾಂಧಿ, ಸಿದ್ದರಾಮಯ್ಯ ಲಸಿಕೆ ತೆಗೆದುಕೊಂಡರು. ಅದಕ್ಕೆ ಮೊನ್ನೆ ನಮ್ಮ ಎಂಎಲ್‌ಸಿ ಮಂಜುನಾಥ್ ಹೇಳಿದರು, ಅದಕ್ಕೆ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಹೇಗೂ ಅವರಿಗೆ ಮಕ್ಕಳಾಗುವುದಿಲ್ಲ ಅಂತ” ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ – ಕಾಂಗ್ರೆಸ್

“ಕರ್ನಾಟಕದ ಬಿಜೆಪಿಯ ಸರ್ಕಸ್‌ನಲ್ಲಿ ಜೋಕರ್ ಒಬ್ಬ ಶಾಶ್ವತ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕ ಎರಡೂ ವಿಷಯದಲ್ಲಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಸುದ್ದಿಯಾಗಲು ಅವಿವೇಕದ ಹೇಳಿಕೆಗಳನ್ನು ನೀಡುತ್ತಾರೆ. ಅವರೆ ನಳೀನ್ ಕುಮಾರ್ ಕಟೀಲ್ ಆಗಿದ್ದು ದಯವಿಟ್ಟು ಆತನನ್ನು ನಿರ್ಲಕ್ಷಿಸಿ” ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣ್‌ದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಮುಂದುವರಿದು “ಇಂತಹ ಮೂರ್ಖತನಗಳು ಯಾವಾಗಲೂ ಹೇಡಿಗಳು ಮತ್ತು ಮೂರ್ಖರ ಆಶ್ರಯವಾಗಿದೆ – ಇದು ಬಿಜೆಪಿಯ ಹುಟ್ಟುಗುಣವಾಗಿದೆ. ಅವರು ವಿಜ್ಞಾನ ಮತ್ತು ವಿಜ್ಞಾನಿಗಳನ್ನು ಅವಮಾನಿಸುತ್ತಾರೆ. ಅವರು ವೈಜ್ಞಾನಿಕ ಮನೋಭಾವವನ್ನು ವಿರೋಧಿಸುತ್ತಾರೆ. ಅವರು ಸಾಂಪ್ರದಾಯಿಕತೆಯನ್ನು ಉತ್ತೇಜಿಸುತ್ತಾರೆ. ಅವರನ್ನು ಇತಿಹಾಸದ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, “ನಮ್ಮ ಅಧ್ಯಕ್ಷರು ಯಾವ ಸಂದರ್ಭದಲ್ಲಿ ಆ ಟೀಕೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ನಾನು ಆ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಮತ್ತು ಅದರಿಂದ ದೂರವಿರಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು “ಎಷ್ಟೊಂದು ಅಸಹ್ಯಕರ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರಾಗಲಿ, ಸಿದ್ದರಾಮಯ್ಯನವರಾಗಲಿ ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂಬ ಹೇಳಿಕೆಯನ್ನು ಎಂದೂ ನೀಡಿಲ್ಲ. ರಾಹುಲ್ ಗಾಂಧಿ ಮದುವೆಯಾಗದಿರುವುದು ಅವರ ವೈಯಕ್ತಿಕ ವಿಷಯ. ಆದರೂ ಅನಾವಶ್ಯಕವಾಗಿ ಅವರ ಹೆಸರನ್ನು ಎಳೆದುತಂದು ನಳೀನ್ ಕುಮಾರ್ ಕಟೀಲ್ ಅಸಹ್ಯವಾಗಿ ಅಪಹಾಸ್ಯ ಮಾಡುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...