Homeದಲಿತ್ ಫೈಲ್ಸ್ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

- Advertisement -
- Advertisement -

ದಲಿತ ವಿದ್ಯಾರ್ಥಿ ದರ್ಶನ ಸೋಲಂಕಿಯವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮಾಡಲು ಐಐಟಿ-ಬಾಂಬೆ ರಚಿಸಿದ್ದ ವಿಚಾರಣಾ ಸಮಿತಿಯು ವರದಿ ನೀಡಿದ್ದು, “ದರ್ಶನ್‌ ಸೋಲಂಕಿ ಜಾತಿ ತಾರತಮ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ” ಎಂದಿದೆ.

“ಕ್ಷೀಣಿಸುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆಯು ಈ ನಿರ್ಧಾರದ ಹಿಂದೆ ಇರಬಹುದು” ಎಂದು ವರದಿ ಹೇಳಿದೆ.

ಐಐಟಿ ಬಾಂಬೆಯಲ್ಲಿ ಪ್ರಥಮ ವರ್ಷದ ರಾಸಾಯನಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಹಮದಾಬಾದ್‌ನ ದರ್ಶನ್‌ ಸೋಲಂಕಿಯವರು ಫೆಬ್ರವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸೆಮಿಸ್ಟರ್ ಪರೀಕ್ಷೆಗಳು ಮುಗಿದ ಒಂದು ದಿನದ ನಂತರ ಈ ಘಟನೆ ನಡೆದಿತ್ತು. “ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ದರ್ಶನ್ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ” ಎಂದು ಸೊಲಂಕಿಯ ಕುಟುಂಬ ಆರೋಪಿಸಿತ್ತು.

ದರ್ಶನ್‌ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ನಂದ್ ಕಿಶೋರ್ ನೇತೃತ್ವದಲ್ಲಿ 12 ಸದಸ್ಯರ ಸಮಿತಿಯನ್ನು ಐಐಟಿ ಬಾಂಬೆ ರಚಿಸಿತ್ತು. ಮಾರ್ಚ್ 2ರಂದು ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಂದು ನಕಲನ್ನು ಕೇಂದ್ರ ಸರ್ಕಾರದೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ದರ್ಶನ್‌ ಸೋಲಂಕಿಯವರ ಸಹೋದರಿ ಮಾತ್ರ ಜಾತಿ ತಾರತಮ್ಯವನ್ನು ಪ್ರಸ್ತಾಪ ಮಾಡಿದ್ದಾರೆ. ತನ್ನ ಸಹೋದರ ಐಐಟಿ ಬಾಂಬೆಯಲ್ಲಿ ಕೆಲವು ವಿದ್ಯಾರ್ಥಿಗಳಿಂದ ಜಾತಿ ಸಂಬಂಧಿತ ತಾರತಮ್ಯವನ್ನು ಎದುರಿಸುತ್ತಿರುವಾಗಿ ಸೋಲಂಕಿ ಸಹೋದರಿ ತಿಳಿಸಿದ್ದಾರೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ‘ಎಕ್ಸ್‌ಪ್ರೆಸ್‌’ ತಿಳಿಸಿದೆ.

ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಐಐಟಿ ಬಾಂಬೆಯಲ್ಲಿನ ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್’ ಮತ್ತು ಅಂಬೇಡ್ಕರ್‌ವಾದಿ ವಿದ್ಯಾರ್ಥಿಗಳ್ಯಾರೂ ದರ್ಶನ್‌ ಸೋಲಂಕಿಯವರನ್ನು ಭೇಟಿ ಮಾಡಿಲ್ಲ. ದರ್ಶನ್ ಅವರು ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆಂದು ನೇರವಾಗಿ ಕೇಳಿ ತಿಳಿದುಕೊಂಡಿರಲಿಲ್ಲ ಎಂದಿದೆ ವರದಿ.

“ಆದ್ದರಿಂದ ದರ್ಶನ್ ಸಹೋದರಿಯ ಹೇಳಿಕೆಯನ್ನು ಹೊರತುಪಡಿಸಿ, ಐಐಟಿ ಬಾಂಬೆಯಲ್ಲಿದ್ದ ಸಮಯದಲ್ಲಿ ದರ್ಶನ್‌ ಎದುರಿಸುತ್ತಿರುವ ನೇರ ಜಾತಿ ಆಧಾರಿತ ತಾರತಮ್ಯದ ಬಗ್ಗೆ ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲ” ಎಂದು ಮಧ್ಯಂತರ ವರದಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಚಿವರು

ಸಮಿತಿಯು ಜಾತಿ ತಾರತಮ್ಯವನ್ನು ಒಂದು ಕಾರಣವೆಂದು ತಳ್ಳಿಹಾಕಿದ್ದರೂ, ವರದಿಯಲ್ಲಿ ಸೋಲಂಕಿಯವರ ಶೈಕ್ಷಣಿಕ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯವನ್ನು ಹೊರತುಪಡಿಸಿ, ಇತರ ಎಲ್ಲದರಲ್ಲೂ ಸೋಲಂಕಿಯವರ ಅಧ್ಯಯನ ತೀರಾ ಕಳಪೆಯಾಗಿದೆ ಎಂದು ವಿಚಾರಣಾ ಸಮಿತಿ ತಿಳಿಸಿದೆ.

“ಉಪನ್ಯಾಸಗಳನ್ನು ಅರ್ಥಮಾಡಿಕೊಳ್ಳುವಲ್ಲಿ ದರ್ಶನ್‌ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ಅದು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು. ದರ್ಶನ್‌ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಆದ್ದರಿಂದ, ಕ್ಷೀಣಿಸುತ್ತಿರುವ ಶೈಕ್ಷಣಿಕ ಕಾರ್ಯಕ್ಷಮತೆಯ ಹತಾಶೆಯು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು” ಎಂದಿದ್ದಾರೆ.

ಫೆಬ್ರವರಿ 12ರಂದು ಮಧ್ಯಾಹ್ನ ಶಾಪಿಂಗ್ ಮಾಡಲು ಸೋಲಂಕಿ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಲು ಯೋಜಿಸಿದ್ದರು. “ಸ್ವಲ್ಪ ಹಣವನ್ನು ತನ್ನ ತಂದೆಯಿಂದ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದರು” ಎಂದು ಸಮಿತಿ ತಿಳಿಸಿದೆ.

“ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ಮತ್ತು ದುರಂತ ಘಟನೆಯ ಮೊದಲು ಏನಾಯಿತು ಎಂಬುದರ ಕುರಿತು ಸಮಿತಿಗೆ ಯಾವುದೇ ಮಾಹಿತಿ ಇಲ್ಲ” ಎಂದಿದೆ ವರದಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...