Homeದಲಿತ್ ಫೈಲ್ಸ್ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

- Advertisement -
- Advertisement -

ದಲಿತ ವಿದ್ಯಾರ್ಥಿ ದರ್ಶನ ಸೋಲಂಕಿಯವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ಮಾಡಲು ಐಐಟಿ-ಬಾಂಬೆ ರಚಿಸಿದ್ದ ವಿಚಾರಣಾ ಸಮಿತಿಯು ವರದಿ ನೀಡಿದ್ದು, “ದರ್ಶನ್‌ ಸೋಲಂಕಿ ಜಾತಿ ತಾರತಮ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಿರ್ದಿಷ್ಟ ಪುರಾವೆಗಳಿಲ್ಲ” ಎಂದಿದೆ.

“ಕ್ಷೀಣಿಸುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆಯು ಈ ನಿರ್ಧಾರದ ಹಿಂದೆ ಇರಬಹುದು” ಎಂದು ವರದಿ ಹೇಳಿದೆ.

ಐಐಟಿ ಬಾಂಬೆಯಲ್ಲಿ ಪ್ರಥಮ ವರ್ಷದ ರಾಸಾಯನಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಹಮದಾಬಾದ್‌ನ ದರ್ಶನ್‌ ಸೋಲಂಕಿಯವರು ಫೆಬ್ರವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸೆಮಿಸ್ಟರ್ ಪರೀಕ್ಷೆಗಳು ಮುಗಿದ ಒಂದು ದಿನದ ನಂತರ ಈ ಘಟನೆ ನಡೆದಿತ್ತು. “ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ದರ್ಶನ್ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ” ಎಂದು ಸೊಲಂಕಿಯ ಕುಟುಂಬ ಆರೋಪಿಸಿತ್ತು.

ದರ್ಶನ್‌ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲು ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ನಂದ್ ಕಿಶೋರ್ ನೇತೃತ್ವದಲ್ಲಿ 12 ಸದಸ್ಯರ ಸಮಿತಿಯನ್ನು ಐಐಟಿ ಬಾಂಬೆ ರಚಿಸಿತ್ತು. ಮಾರ್ಚ್ 2ರಂದು ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಂದು ನಕಲನ್ನು ಕೇಂದ್ರ ಸರ್ಕಾರದೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ದರ್ಶನ್‌ ಸೋಲಂಕಿಯವರ ಸಹೋದರಿ ಮಾತ್ರ ಜಾತಿ ತಾರತಮ್ಯವನ್ನು ಪ್ರಸ್ತಾಪ ಮಾಡಿದ್ದಾರೆ. ತನ್ನ ಸಹೋದರ ಐಐಟಿ ಬಾಂಬೆಯಲ್ಲಿ ಕೆಲವು ವಿದ್ಯಾರ್ಥಿಗಳಿಂದ ಜಾತಿ ಸಂಬಂಧಿತ ತಾರತಮ್ಯವನ್ನು ಎದುರಿಸುತ್ತಿರುವಾಗಿ ಸೋಲಂಕಿ ಸಹೋದರಿ ತಿಳಿಸಿದ್ದಾರೆ” ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ‘ಎಕ್ಸ್‌ಪ್ರೆಸ್‌’ ತಿಳಿಸಿದೆ.

ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಐಐಟಿ ಬಾಂಬೆಯಲ್ಲಿನ ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್’ ಮತ್ತು ಅಂಬೇಡ್ಕರ್‌ವಾದಿ ವಿದ್ಯಾರ್ಥಿಗಳ್ಯಾರೂ ದರ್ಶನ್‌ ಸೋಲಂಕಿಯವರನ್ನು ಭೇಟಿ ಮಾಡಿಲ್ಲ. ದರ್ಶನ್ ಅವರು ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದರೆಂದು ನೇರವಾಗಿ ಕೇಳಿ ತಿಳಿದುಕೊಂಡಿರಲಿಲ್ಲ ಎಂದಿದೆ ವರದಿ.

“ಆದ್ದರಿಂದ ದರ್ಶನ್ ಸಹೋದರಿಯ ಹೇಳಿಕೆಯನ್ನು ಹೊರತುಪಡಿಸಿ, ಐಐಟಿ ಬಾಂಬೆಯಲ್ಲಿದ್ದ ಸಮಯದಲ್ಲಿ ದರ್ಶನ್‌ ಎದುರಿಸುತ್ತಿರುವ ನೇರ ಜಾತಿ ಆಧಾರಿತ ತಾರತಮ್ಯದ ಬಗ್ಗೆ ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲ” ಎಂದು ಮಧ್ಯಂತರ ವರದಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಚಿವರು

ಸಮಿತಿಯು ಜಾತಿ ತಾರತಮ್ಯವನ್ನು ಒಂದು ಕಾರಣವೆಂದು ತಳ್ಳಿಹಾಕಿದ್ದರೂ, ವರದಿಯಲ್ಲಿ ಸೋಲಂಕಿಯವರ ಶೈಕ್ಷಣಿಕ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯವನ್ನು ಹೊರತುಪಡಿಸಿ, ಇತರ ಎಲ್ಲದರಲ್ಲೂ ಸೋಲಂಕಿಯವರ ಅಧ್ಯಯನ ತೀರಾ ಕಳಪೆಯಾಗಿದೆ ಎಂದು ವಿಚಾರಣಾ ಸಮಿತಿ ತಿಳಿಸಿದೆ.

“ಉಪನ್ಯಾಸಗಳನ್ನು ಅರ್ಥಮಾಡಿಕೊಳ್ಳುವಲ್ಲಿ ದರ್ಶನ್‌ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ಅದು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು. ದರ್ಶನ್‌ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಆದ್ದರಿಂದ, ಕ್ಷೀಣಿಸುತ್ತಿರುವ ಶೈಕ್ಷಣಿಕ ಕಾರ್ಯಕ್ಷಮತೆಯ ಹತಾಶೆಯು ಆತನ ಮೇಲೆ ಗಂಭೀರ ಪರಿಣಾಮ ಬೀರಿರಬಹುದು” ಎಂದಿದ್ದಾರೆ.

ಫೆಬ್ರವರಿ 12ರಂದು ಮಧ್ಯಾಹ್ನ ಶಾಪಿಂಗ್ ಮಾಡಲು ಸೋಲಂಕಿ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಲು ಯೋಜಿಸಿದ್ದರು. “ಸ್ವಲ್ಪ ಹಣವನ್ನು ತನ್ನ ತಂದೆಯಿಂದ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದರು” ಎಂದು ಸಮಿತಿ ತಿಳಿಸಿದೆ.

“ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ಮತ್ತು ದುರಂತ ಘಟನೆಯ ಮೊದಲು ಏನಾಯಿತು ಎಂಬುದರ ಕುರಿತು ಸಮಿತಿಗೆ ಯಾವುದೇ ಮಾಹಿತಿ ಇಲ್ಲ” ಎಂದಿದೆ ವರದಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...