Homeದಲಿತ್ ಫೈಲ್ಸ್‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

- Advertisement -
- Advertisement -

“ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋಲಾರದ ಯುವ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್‌ ಎರಡು ಪುಟದ ಡೆತ್‌ನೋಟ್ ಬರೆದಿಟ್ಟಿದ್ದಾರೆ.

ಇತ್ತೀಚೆಗೆ “ಯುವಕನೊಬ್ಬನನ್ನು ಕಿಡ್ನಾಪ್‌ ಮಾಡಲಾಗಿದೆ” ಎಂದು ಆರೋಪಿಸಿ ಸಂದೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. “ಪೊಲೀಸ್ ಎಂದು ಹೇಳಿಕೊಂಡು ಕಿಡ್ನಾಪ್‌ ಮಾಡಲಾಗಿದೆ” ಎಂದು ಪೊಲೀಸರು ಆರೋಪಿಸಿದ್ದರು.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದರು. ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಂದೇಶ್ ಬರೆದ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...