Homeಕರ್ನಾಟಕಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

ಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

- Advertisement -
- Advertisement -

ಉರಿಗೌಡ ನಂಜೆಗೌಡ ಎನ್ನುವವರು ಟಿಪ್ಪು ಸುಲ್ತಾನ್‌ಅನ್ನು ಕೊಂದರು ಎನ್ನುವ ಹೊಸ ಕಥೆಯನ್ನು ಬಿಜೆಪಿ ಪದೇ ಪದೇ ಹೇಳುತ್ತಿದೆ. ಈ ವಿಚಾರದಲ್ಲಿ ಬಿಜೆಪಿಯವರು ಗೋಬೇಲ್ಸ್ ಥಿಯರಿ ಅಳವಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕ, ”ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೋಬೇಲ್ಸ್ ಥಿಯರಿಯನ್ನು ಅಳವಡಿಸಿಕೊಂಡಿರುವ ಬಿಜೆಪಿ, ಸುಳ್ಳು ಪಾತ್ರಗಳನ್ನು ಸೃಷ್ಟಿಸಿ ಒಕ್ಕಲಿಗ ಸಮುದಾಯಕ್ಕೆ ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುತ್ತಿದೆ” ಎಂದು ವ್ಯಾಖ್ಯಾನಿಸಿದೆ.

ಕಾಂಗ್ರೆಸ್ ಟ್ವೀಟ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಸಿಟಿ ರವಿಯವರು ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ”ಉರಿಗೌಡ, ನಂಜೇಗೌಡ ಒಕ್ಕಲಿಗರು ಎನ್ನುವುದು ಅವರಿಗೆ ಹೊಟ್ಟೆಉರಿನಾ? ಒಕ್ಕಲಿಗರಲ್ಲಿ ಶೌರ್ಯ ಪ್ರದರ್ಶನ ಮಾಡುವವರು ಇರಬಾರದಾ? ಟಿಪ್ಪು ಹುಲಿಯನ್ನು ಕೊಂದ ಎನ್ನುವುದು ಗಿಣಿಕಥೆ, ಹುಲಿ ಕೊಂದಿದ್ದನ್ನು ನೀವು ನೋಡಿದ್ದೀರಾ? ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿರುವುದಕ್ಕೆ ಐತಿಹಾಸಿಕ ದಾಖಲೆಗಳೇ ಇವೆ. ಇವು ಹೊರಗಡೆ ಬಂದರೆ ಒಕ್ಕಲಿಗರಲ್ಲಿ ಸ್ವಾಭಿಮಾನ, ಶೈರ್ಯ ಉಕ್ಕುತ್ತದೆ ಹಾಗಾಗಿ ಅದನ್ನು ಅದಮಿಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ” ಎಂದು ಸಿಟಿ ರವಿ ಹೇಳಿದ್ದಾರೆ.

ಇದನ್ನೂ ಓದಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

”ಟಿಪ್ಪುವನ್ನು ಕೊಂದವರು ಉರಿಗೌಡ ಮತ್ತು ದೊಡ್ಡ ನಂಜೇಗೌಡ” ಎಂಬ ಸುಳ್ಳು ಕಥೆಯನ್ನು ಹುಟ್ಟಿದ್ದು ವಾಟ್ಸಾಪ್‌ ಯುನಿವರ್ಸಿಟಿಯಲ್ಲಿ, ಬಿಜೆಪಿ ಹಾಗೂ ಅದರ ಬೆಂಬಲಿಗರು ಅದನ್ನೇ ಪ್ರತಿಪಾದಿಸತೊಡಗಿದ್ದಾರೆ. ಈ ಕಥೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮುನ್ನೆಲೆಗೆ ತಂದರು. ಆನಂತರ ಕೆಲವು ಬಿಜೆಪಿ ನಾಯಕರು ಹಾಗೂ ಅವರ ಬೆಂಬಲಿಗರು ಅದೇ ನಿಜವೇನೋ ಎನ್ನುವಂತೆ ಪದೇ ಪದೇ ಹೇಳಲು ಶುರು ಮಾಡಿದ್ದಾರೆ.

ಈ ಸುಳ್ಳು ಕಥೆಯನ್ನು ಬಿಜೆಪಿಯವರು ಪದೇ ಪದೇ ಹೇಳುವ ಮೂಲಕ ಎಲ್ಲರಿಗೂ ಅದೇ ಸತ್ಯ ಇರಬಹುದು ಎನ್ನುವಂತೆ ಮಾಡುತ್ತಿದ್ದಾರೆ. ಇದನ್ನು ಗೋಬೇಲ್ಸ್ ಥಿಯರಿ ಎಂದು ಹೇಳುತ್ತಾರೆ. ಆದರೆ ಈ ಸುಳ್ಳಿನ ಕಥೆಯ ಮೂಲಕ ಬಿಜೆಪಿಯವರು ಒಕ್ಕಲಿಗರನ್ನು ಮುಸ್ಲಿಂ ವಿರುದ್ಧ ನಿಲ್ಲಿಸುವುದು ಮಾತ್ರವಲ್ಲದೇ, ಒಕ್ಕಲಿಗರು ಬ್ರಿಟಿಷರ ಪರ ಇದ್ದರೆಂದು ಸುಳ್ಳನ್ನು ಪ್ರತಿಪಾದಿಸುತ್ತ, ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ನಾಯಕರು ಚುನಾವಣಾ ಉದ್ದೇಶದಿಂದ ಇಂತಹದ್ದೊಂದು ಸುಳ್ಳು ಕಥೆಯ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿರಬಹುದು. ಆದರೆ, ಒಕ್ಕಲಿಗರು ಈ ಸುಳ್ಳು ಕಥೆ ಬಗ್ಗೆ ಬಹಳ ಗಂಭಿರವಾಗಿ ಯೋಚಿಸಬೇಕಾಗಿದೆ. ಏಕೆಂದರೆ ಈ ಸುಳ್ಳು ಕಥೆಯಲ್ಲಿ ಟಿಪ್ಪುವನ್ನು ಒಕ್ಕಲಿಗರು ಕೊಂದರು ಎನ್ನುವುದಾದರೆ, ಒಕ್ಕಲಿಗರು ಈ ದೇಶದ ವಿರುದ್ಧ ಕೆಲಸ ಮಾಡಿದವರು, ಬ್ರಿಟಿಷರ ಪರವಾಗಿ ಕೆಲಸ ಮಾಡಿದವರು ಎಂದಾಗುತ್ತದೆ. ಬಿಜೆಪಿಯವರು ಅವಸರದಲ್ಲಿ ಕಟ್ಟಿದ ಸುಳ್ಳಿನ ಕಥೆಯಲ್ಲಿ ಒಕ್ಕಲಿಗರನ್ನು ಹೀರೋ ಮಾಡಲು ಹೋಗಿ ದೇಶದ್ರೋಹಿಗಳು ಎನ್ನುವಂತೆ ತೋರಿಸಲಾಗುತ್ತಿದೆ. ಈ ಸುಳ್ಳು ಕಥೆಯ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಮಾತನಾಡುವುದು ಅತ್ಯವಶ್ಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...