Homeಮುಖಪುಟಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಫ್ಯಾಸಿಸ್ಟ್ ಆರ್‌ಎಸ್‌ಎಸ್‌ನ ಭಾಗವಾಗಿರುವ ಬಿಜೆಪಿ, ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ. ಸೋಮವಾರ ಸಂಜೆ ಲಂಡನ್ ಮೂಲದ ಚಿಂತಕರ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ ನಡೆದ ಸಂವಾದದಲ್ಲಿ ಈ ಹೇಳಿಕೆ ನೀಡಿದ್ದಾರೆ.

”ಭಾರತದ ಸಂಸ್ಥೆಗಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತಗೆದುಕೊಂಡಿರುವ ಆರ್‌ಎಸ್‌ಎಸ್, ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ” ಎಂದು ರಾಹುಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ, ಕಿಸಾನ್ ಮಸೂದೆ, ಜಿಎಸ್‌ಟಿ ಹೇರಿಕೆ ಮತ್ತು ಚೀನಾದ ಆಕ್ರಮಣದ ಕುರಿತಾದ ಚರ್ಚೆಗಳನ್ನು ನಡೆಸಲು ಪ್ರತಿಪಕ್ಷಗಳಿಗೆ ಯಾವುದೇ ಅವಕಾಶ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಬಗ್ಗೆ ಮಾತನಾಡುತ್ತಾ, ”ನಮ್ಮ ಯಾತ್ರಾ ಭಾರತದ ಜನರನ್ನು ತಲುಪಲು ನಮಗೆ ಸಂವಹನದ ಮಾರ್ಗವಾಗಿತ್ತು” ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

“ಒಂಬತ್ತು ವರ್ಷಗಳ ಕಾಲ ಅಜಾಗರೂಕತೆಯಿಂದ ಅಧಿಕಾರ ಅನುಭವಿಸಿದ ಬಿಜೆಪಿಯು ಕುರುಡಾಗಿದೆ. ಕೇಸರಿ ಪಕ್ಷಕ್ಕೆ ಸಾರ್ವಜನಿಕರ ಅಭಿಪ್ರಾಯಗಳನ್ನು ಕೇಳುವ ಆಸಕ್ತಿ ಇಲ್ಲದಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು “ಪ್ರತಿಪಕ್ಷಗಳ ವಿರುದ್ಧ ಏಜೆನ್ಸಿಗಳು ಮತ್ತು ಸ್ಪೈವೇರ್‌ಗಳನ್ನು ಬಳಸುತ್ತಾ ಆರಾಮಾಗಿದ್ದಾರೆ. ಇದು ನಮ್ಮ ಸರ್ಕಾರವಿದ್ದಾಗ ಹೇಗಿತ್ತೋ ಅದರ ಸಂಪೂರ್ಣ ವಿರುದ್ಧವಾದ ಚಿತ್ರಣವಾಗಿದೆ” ಎಂದು ಅವರು ಹೇಳಿದರು.

“ಪ್ರಜಾಸತ್ತಾತ್ಮಕ ರೀತಿಯಲ್ಲಿ ನಮ್ಮ ಸಮಾಜವನ್ನು ನಿರ್ಮಿಸಲಾಗಿದೆ. ಚೀನೀಯರು ಅದೇ ಮಾದರಿಯನ್ನು ಅನುಸರಿಸುವುದಿಲ್ಲ ಮತ್ತು (ಅವರು) ಅದನ್ನು ತಮ್ಮ ದೊಡ್ಡ ಸವಾಲಾಗಿ ನೋಡುತ್ತಾರೆ. ‘ಸಮೃದ್ಧಿಯೊಂದಿಗೆ ಉತ್ಪಾದಕತೆ’ ಎಂಬ ನಮ್ಮದೇ ಆದ ದೃಷ್ಟಿಕೋನವನ್ನು ನಾವು ಜಗತ್ತಿಗೆ ನೀಡಬೇಕಾಗಿದೆ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಪ್ರಜಾಪ್ರಭುತ್ವ ಮಾದರಿಯ ಕಲ್ಪನೆಯು ದಾಳಿಗೊಳಗಾಗುತ್ತಿದೆ ಮತ್ತು ”ನಮ್ಮ (ಭಾರತದ) ಪ್ರಜಾಪ್ರಭುತ್ವ ಮಾದರಿ ಕುಸಿದರೆ ಬೇರೆ ದೇಶಗಳ ಪ್ರಜಾಪ್ರಭುತ್ವವು ಅಪಾಯವನ್ನು ಎದುರಿಸುತ್ತವೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...