Homeಮುಖಪುಟಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಫ್ಯಾಸಿಸ್ಟ್ ಆರ್‌ಎಸ್‌ಎಸ್‌ನ ಭಾಗವಾಗಿರುವ ಬಿಜೆಪಿ, ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ. ಸೋಮವಾರ ಸಂಜೆ ಲಂಡನ್ ಮೂಲದ ಚಿಂತಕರ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ ನಡೆದ ಸಂವಾದದಲ್ಲಿ ಈ ಹೇಳಿಕೆ ನೀಡಿದ್ದಾರೆ.

”ಭಾರತದ ಸಂಸ್ಥೆಗಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತಗೆದುಕೊಂಡಿರುವ ಆರ್‌ಎಸ್‌ಎಸ್, ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ” ಎಂದು ರಾಹುಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ, ಕಿಸಾನ್ ಮಸೂದೆ, ಜಿಎಸ್‌ಟಿ ಹೇರಿಕೆ ಮತ್ತು ಚೀನಾದ ಆಕ್ರಮಣದ ಕುರಿತಾದ ಚರ್ಚೆಗಳನ್ನು ನಡೆಸಲು ಪ್ರತಿಪಕ್ಷಗಳಿಗೆ ಯಾವುದೇ ಅವಕಾಶ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಬಗ್ಗೆ ಮಾತನಾಡುತ್ತಾ, ”ನಮ್ಮ ಯಾತ್ರಾ ಭಾರತದ ಜನರನ್ನು ತಲುಪಲು ನಮಗೆ ಸಂವಹನದ ಮಾರ್ಗವಾಗಿತ್ತು” ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ: ಭಾರತ ಮೌನವಾಗಿರಬೇಕೆಂದು ಬಿಜೆಪಿ ಬಯಸುತ್ತಿದೆ: ಲಂಡನ್‌ ಸಂವಾದದಲ್ಲಿ ರಾಹುಲ್ ಹೇಳಿಕೆ

“ಒಂಬತ್ತು ವರ್ಷಗಳ ಕಾಲ ಅಜಾಗರೂಕತೆಯಿಂದ ಅಧಿಕಾರ ಅನುಭವಿಸಿದ ಬಿಜೆಪಿಯು ಕುರುಡಾಗಿದೆ. ಕೇಸರಿ ಪಕ್ಷಕ್ಕೆ ಸಾರ್ವಜನಿಕರ ಅಭಿಪ್ರಾಯಗಳನ್ನು ಕೇಳುವ ಆಸಕ್ತಿ ಇಲ್ಲದಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು “ಪ್ರತಿಪಕ್ಷಗಳ ವಿರುದ್ಧ ಏಜೆನ್ಸಿಗಳು ಮತ್ತು ಸ್ಪೈವೇರ್‌ಗಳನ್ನು ಬಳಸುತ್ತಾ ಆರಾಮಾಗಿದ್ದಾರೆ. ಇದು ನಮ್ಮ ಸರ್ಕಾರವಿದ್ದಾಗ ಹೇಗಿತ್ತೋ ಅದರ ಸಂಪೂರ್ಣ ವಿರುದ್ಧವಾದ ಚಿತ್ರಣವಾಗಿದೆ” ಎಂದು ಅವರು ಹೇಳಿದರು.

“ಪ್ರಜಾಸತ್ತಾತ್ಮಕ ರೀತಿಯಲ್ಲಿ ನಮ್ಮ ಸಮಾಜವನ್ನು ನಿರ್ಮಿಸಲಾಗಿದೆ. ಚೀನೀಯರು ಅದೇ ಮಾದರಿಯನ್ನು ಅನುಸರಿಸುವುದಿಲ್ಲ ಮತ್ತು (ಅವರು) ಅದನ್ನು ತಮ್ಮ ದೊಡ್ಡ ಸವಾಲಾಗಿ ನೋಡುತ್ತಾರೆ. ‘ಸಮೃದ್ಧಿಯೊಂದಿಗೆ ಉತ್ಪಾದಕತೆ’ ಎಂಬ ನಮ್ಮದೇ ಆದ ದೃಷ್ಟಿಕೋನವನ್ನು ನಾವು ಜಗತ್ತಿಗೆ ನೀಡಬೇಕಾಗಿದೆ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಪ್ರಜಾಪ್ರಭುತ್ವ ಮಾದರಿಯ ಕಲ್ಪನೆಯು ದಾಳಿಗೊಳಗಾಗುತ್ತಿದೆ ಮತ್ತು ”ನಮ್ಮ (ಭಾರತದ) ಪ್ರಜಾಪ್ರಭುತ್ವ ಮಾದರಿ ಕುಸಿದರೆ ಬೇರೆ ದೇಶಗಳ ಪ್ರಜಾಪ್ರಭುತ್ವವು ಅಪಾಯವನ್ನು ಎದುರಿಸುತ್ತವೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...