Homeಕರ್ನಾಟಕದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

”ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಧ್ಯ ಸಂದೇಶ್ ಅವರು, ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಿರುಕುಳ ನೀಡಿದವರ ವಿರುದ್ಧ ಕ್ರಮ ಆಗಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೆಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ”ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

”ಧ್ವನಿಯಿಲ್ಲದ ಜನರ ಪರವಾದ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಂಡ ಮೇಲೆ ಆ ಹಾದಿಯಿಂದ ವಿಮುಖಗೊಳಿಸುವ ನಿರಂತರ ಪ್ರಯತ್ನಗಳು ಖಂಡಿತಾ ನಡೆಯುತ್ತವೆ, ಇಂಥಾ ದುಷ್ಟರ ಪ್ರಯತ್ನಗಳಿಂದ ನೊಂದು ದುಡುಕಿ ಆತ್ಮಹತ್ಯೆಯ ನಿರ್ಧಾರ ಕೈಗೊಂಡರೆ ನಿಮ್ಮ ಬೆನ್ನ ಹಿಂದಿರುವ ಜನ, ನಿಮ್ಮ ಕುಟುಂಬ ಎರಡೂ ಅನಾಥವಾಗುತ್ತದೆ. ವ್ಯವಸ್ಥೆಯಿಂದ ಅನ್ಯಾಯ, ಅಪಮಾನಕ್ಕೀಡಾಗಿ ನೊಂದಿರುವ ದಲಿತ ಮುಖಂಡ ಸಂದೇಶ್ ಅವರ ಜೊತೆ ನಾನಿದ್ದೇನೆ. ಅಪಮಾನಗಳನ್ನೇ ಸವಾಲಿನಂತೆ ಸ್ವೀಕರಿಸಿ ಗೆದ್ದ ಬಾಬಾ ಸಾಹೇಬರು ನೀಡಿರುವ ಸಂವಿಧಾನ ನಮ್ಮ ಜೊತೆಗಿದೆ. ಹೀಗಾಗಿ ನ್ಯಾಯ ಸಿಗುವ ಪೂರ್ಣ ವಿಶ್ವಾಸ ನನಗಿದೆ. ಸಂದೇಶ್ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ” ಎಂದು ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

ಸಂದೇಶ್ ಬರೆದಿರುವ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...