Homeಕರ್ನಾಟಕದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

”ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಧ್ಯ ಸಂದೇಶ್ ಅವರು, ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಿರುಕುಳ ನೀಡಿದವರ ವಿರುದ್ಧ ಕ್ರಮ ಆಗಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೆಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ”ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

”ಧ್ವನಿಯಿಲ್ಲದ ಜನರ ಪರವಾದ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಂಡ ಮೇಲೆ ಆ ಹಾದಿಯಿಂದ ವಿಮುಖಗೊಳಿಸುವ ನಿರಂತರ ಪ್ರಯತ್ನಗಳು ಖಂಡಿತಾ ನಡೆಯುತ್ತವೆ, ಇಂಥಾ ದುಷ್ಟರ ಪ್ರಯತ್ನಗಳಿಂದ ನೊಂದು ದುಡುಕಿ ಆತ್ಮಹತ್ಯೆಯ ನಿರ್ಧಾರ ಕೈಗೊಂಡರೆ ನಿಮ್ಮ ಬೆನ್ನ ಹಿಂದಿರುವ ಜನ, ನಿಮ್ಮ ಕುಟುಂಬ ಎರಡೂ ಅನಾಥವಾಗುತ್ತದೆ. ವ್ಯವಸ್ಥೆಯಿಂದ ಅನ್ಯಾಯ, ಅಪಮಾನಕ್ಕೀಡಾಗಿ ನೊಂದಿರುವ ದಲಿತ ಮುಖಂಡ ಸಂದೇಶ್ ಅವರ ಜೊತೆ ನಾನಿದ್ದೇನೆ. ಅಪಮಾನಗಳನ್ನೇ ಸವಾಲಿನಂತೆ ಸ್ವೀಕರಿಸಿ ಗೆದ್ದ ಬಾಬಾ ಸಾಹೇಬರು ನೀಡಿರುವ ಸಂವಿಧಾನ ನಮ್ಮ ಜೊತೆಗಿದೆ. ಹೀಗಾಗಿ ನ್ಯಾಯ ಸಿಗುವ ಪೂರ್ಣ ವಿಶ್ವಾಸ ನನಗಿದೆ. ಸಂದೇಶ್ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ” ಎಂದು ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

ಸಂದೇಶ್ ಬರೆದಿರುವ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...