Homeಕರ್ನಾಟಕಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

ಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

- Advertisement -
- Advertisement -

ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಕೆಟ್ಟ ಪದ್ದತಿ ಚಾಲ್ತಿಯಲ್ಲಿದೆ. ಹೌದು, ಅಂತಹದ್ದೇ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಅಂತರ್ಜಾತಿ ಮದುವೆಯಾದ ದಂಪತಿಗೆ ಊರಿನಿಂದ ಬಹಿಷ್ಕಾರ ಹಾಕಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ದೂರಿನ ಪ್ರಕಾರ, ಕೊಳ್ಳೇಗಾಲ ಸಮೀಪದ ಕುಣಗಳ್ಳಿ ಗ್ರಾಮದ ಉಪ್ಪಾರ ಸಮುದಾಯದ ಗೋವಿಂದ ಶೆಟ್ಟಿ ಅವರು, 2018ರ ಸೆಪ್ಟೆಂಬರ್ 18ರಂದು ಮಂಡ್ಯ ಜಿಲ್ಲೆಯ ಹೂವಿನಕೊಪ್ಪಲು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ತನ್ನ ಗೆಳತಿ ಶ್ವೇತಾಳನ್ನು ವಿವಾಹವಾಗಿದ್ದರು. ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ.

ಈ ಅಂತರ್ಜಾತಿ ವಿವಾಹದ ವಿಷಯ ತಿಳಿದ ಗ್ರಾಮದ ಮುಖಂಡರು ಸಭೆ ಕರೆದು, ಗೋವಿಂದ ಶೆಟ್ಟಿ ಊರಿನ ಕುಲ ಕೆಡಿಸಿದ್ದಾನೆ ಎಂದು ಹೇಳಿ ಅವರ ತಲೆ ಬೋಳಿಸಿ, ಆತನ ಕುಟುಂಬಕ್ಕೆ 1.25 ಲಕ್ಷ ರೂಪಾಯಿ ದಂಡ ವಿಧಿಸಿ, ಗ್ರಾಮದಿಂದ ಬಹಿಷ್ಕರಿಸಿದ್ದರು.

ಇದನ್ನೂ ಓದಿ: ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಂಪತಿಗಳು ಮಳವಳ್ಳಿಯಲ್ಲಿ ಇದ್ದು ಜೀವನೋಪಾಯ ನಡೆಸುತ್ತಿದ್ದರು. ಆದರೆ, ಗೋವಿಂದ ಶೆಟ್ಟಿ ಅವರು, ತನ್ನ ಹೆಂಡತಿ ಒಕ್ಕಲಿಗರ ಜಾತಿ ಎಂದು ಸುಳ್ಳು ಹೇಳುತ್ತ ಆಗಾಗ ಊರಿಗೆ ಹೋಗಿ ತನ್ನ ತಂದೆತಾಯಿಗೆ ಭೇಟಿಯಾಗುತ್ತಿದ್ದರು. ಆದರೆ, ಫೆಬ್ರುವರಿಯಲ್ಲಿ ಗೋವಿಂದ ಶೆಟ್ಟಿ ಅವರ ತಾಯಿಯು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ಹೆಂಡತಿಯನ್ನೂ ಕುಣಗಲ್ಲಿಗೆ ಕರೆದುಕೊಂಡು ಬಂದಿದ್ದರು.

ಈ ವಿಚಾರ ಗ್ರಾಮದ ಮುಖಂಡರಿಗೆ ಕೆರಳಿಸಿದೆ, ಹಾಗಾಗಿ ಮತ್ತೆ ಅವರ ತಂದೆಯನ್ನು ಕರೆಸಿ ನಿನ್ನ ಮಗ ಹೆಂಡತಿಯನ್ನು ಮತ್ತೆ ಊರೊಳಗೆ ಕರೆದುಕೊಂಡು ಬಂದು ಕುಲ ಕೆಡಸಿದ್ದಾನೆ ಹಾಗಾಗಿ 3 ಲಕ್ಷ ರೂ. ದಂಡ ವಿಧಿಸಿ, ಮಾರ್ಚ್ 1ರೊಳಗೆ ಪಾವತಿಸಬೇಕು. ಒಂದು ವೇಳೆ ಅಷ್ಟರಲ್ಲಿ ಕೊಡದೇ ಹೋದಲ್ಲಿ 6 ಲಕ್ಷ ರೂ.ಗೆ ಹೆಚ್ಚಿಸಬೇಕಾಗುತ್ತದೆ ಎಂದಿದ್ದಾರೆ. ಅದರ ಜೊತೆಗೆ ಗ್ರಾಮಸ್ಥರೊಂದಿಗೆ ಮಾತನಾಡದಂತೆ ನಿಷೇಧ ಹೇರಿದ್ದು, ಅವರಿಗೆ ಗ್ರಾಮದ ಅಂಗಡಿಗಳಲ್ಲಿ ಯಾವುದೇ ಅಗತ್ಯ ವಸ್ತುಗಳನ್ನು ನೀಡದಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗೋವಿಂದ ಶೆಟ್ಟಿ ಅವರು ಮಾರ್ಚ್ 1ರಂದು ಡಿವೈಎಸ್‌ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಆದರೆ ಅವರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರಲಿಲ್ಲ. ಆಗ ಅವರು ಸಿಪಿಎಂ ಮುಖಂಡರಾದ ಕೃಷ್ಣೆಗೌಡರನ್ನು ಭೇಟಿಯಾಗಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ. ಆನಂತರದಲ್ಲಿ ದಲಿತ ಹಕ್ಕುಗಳ ಸಮಿತಿ ಹಾಗೂ ಸಿಪಿಎಂ ಪಕ್ಷ ಮಧ್ಯಪ್ರವೇಶ ಮಾಡಿ, ಪ್ರಕರಣದ ಬಗ್ಗೆ ಎಸ್‌ಪಿ ಅವರ ಗಮಮಕ್ಕೆ ತಂದಿದ್ದಾರೆ.

ಆನಂತರ ಡಿವೈಎಸ್‌ಪಿ ಕ್ರಮಕ್ಕೆ ಮುಂದಾಗಿ, ಮಾ.3ರಂದು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸಧ್ಯ ಸಮಾಜದ ಮುಖಂಡರಾದ ವೆಂಕಟಶೆಟ್ಟಿ, ಮಹದೇವ, ಮೋಂಡ ಶೆಟ್ಟಿ ಕನ್ನಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್ ಸೇರಿ 15ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಪ್ರಶ್ನಿಸಿದಾಗ, ತಾವು ಯಾವುದೇ ರೀತಿಯ ಬಹಿಷ್ಕಾರ ಹಾಕಿಲ್ಲ ಗೋವಿಂದರಾಜುವನ್ನು ಅವರ ತಂದೆಯೇ ಮನೆಗೆ ಸೇರಿಸುತ್ತಿಲ್ಲ. ಹಾಗಾಗಿ ತಂದೆಯ ಮೇಲೆ ದೂರು ನೀಡುವ ಬದಲು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಉಪ್ಪಾರ ಸಮುದಾಯದ ಯಜಮಾನರು ಪ್ರತ್ಯಾರೋಪ ಮಾಡಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

ಸಧ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಆ ದಂಪತಿಗೆ 1.25ಲಕ್ಷ ರೂ. ಹಣ ನೀಡಲಾಗಿದೆ. ಇನ್ನೂ ಗ್ರಾಮದಲ್ಲಿ ಅವರ ಸುರಕ್ಷತೆಗಾಗಿ ಪೊಲೀಸರು ಕ್ರಮವಹಿಸಿದ್ದು, ದಂಪತಿ ಗ್ರಾಮದಲ್ಲಿ ನೆಲೆಯೂರಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಮಾತನಾಡಿದ್ದು, ”ಕೊಳ್ಳೆಗಾಲ ಭಾಗದ ಗ್ರಾಮಗಳಲ್ಲಿ ಊರಿನ ಮುಖಂಡರ ಪಾರುಪತ್ಯ ಹೆಚ್ಚಾಗಿ ನಡೆಯುತ್ತದೆ. ಊರಿನ ಹಿಡಿತವನ್ನು ತಮ್ಮ ಕೈಯಲ್ಲಿ ಇಟ್ಟುಕೊಳ್ಳುವ ಮನಸ್ಥಿಯಲ್ಲಿ ಆ ಮುಖಂಡರು ಪಾಳೇಗಾರರಂತೆ ವರ್ತಿಸುತ್ತಾರೆ. ಈ ರೀತಿಯಲ್ಲಿ ಯಾರಾದರೂ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದರೆ, ಅವರಿಗೆ ದಂಡ ವಿಧಿಸುವುದು, ಬಹಿಷ್ಕಾರ ಹಾಕುವುದನ್ನು ಮಾಡುತ್ತಾರೆ” ಎಂದು ತಿಳಿಸಿದರು.

”ಈ ಭಾಗದಲ್ಲಿ ಇದು ಒಂದೇ ಪ್ರಕರಣ ಅಲ್ಲ, ಇಂತಹ ಬಹಳಷ್ಟು ಪ್ರಕರಣಗಳಿವೆ. ಇದೇ ಕುಣಿಗಲ್ಲ ಗ್ರಾಮದ 10-12 ಹುಡುಗರು ಬೇರೆ ಜಾತಿಯ ಹುಡುಗಿಯರನ್ನು ಮದುವೆಯಾಗಿದ್ದಾರೆ. ಅವರೆಲ್ಲಾ ಈ ಪಾಳೆಗಾರಿಕೆ ಮನಸ್ಥಿತಿಯವರ ದಂಡ ಮತ್ತು ಶಿಕ್ಷೆಗೆ ಹೆದರಿ, ಊರಿಗೂ ಬರದೇ ಬೇರೆ ಬೇರೆ ಕಡೆಗಳಲ್ಲಿ ಬದುಕು ನಡೆಸುತ್ತಿದ್ದಾರಂತೆ. ಇದು ಪೊಲೀಸರಿಗೂ ಗೊತ್ತಿದೆ, ಅವರ ವಿರುದ್ಧ ದೂರು ನೀಡಲು ಯಾರೂ ಮುಂದೆ ಬರುವುದಿಲ್ಲ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

”ಕೊಳ್ಳೆಗಾಲ ತಾಲೂಕಿನಲ್ಲಿ ಯಾರೆಲ್ಲ ಈ ಪಾಳೆಗಾರಿಕೆ ನಡೆಸುತ್ತಿದ್ದಾರೋ ಅಂತವರ ವಿರುದ್ಧ ಸಿಪಿಎಂ ಪಕ್ಷದ ವತಿಯಿಂದ ಇನ್ನೆರಡು ದಿನಗಳಲ್ಲಿ ಹೋರಾಟ ನಡೆಸುತ್ತೇವೆ. ಅವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...