Homeಕರ್ನಾಟಕಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

ಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

- Advertisement -
- Advertisement -

ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಕೆಟ್ಟ ಪದ್ದತಿ ಚಾಲ್ತಿಯಲ್ಲಿದೆ. ಹೌದು, ಅಂತಹದ್ದೇ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಅಂತರ್ಜಾತಿ ಮದುವೆಯಾದ ದಂಪತಿಗೆ ಊರಿನಿಂದ ಬಹಿಷ್ಕಾರ ಹಾಕಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ದೂರಿನ ಪ್ರಕಾರ, ಕೊಳ್ಳೇಗಾಲ ಸಮೀಪದ ಕುಣಗಳ್ಳಿ ಗ್ರಾಮದ ಉಪ್ಪಾರ ಸಮುದಾಯದ ಗೋವಿಂದ ಶೆಟ್ಟಿ ಅವರು, 2018ರ ಸೆಪ್ಟೆಂಬರ್ 18ರಂದು ಮಂಡ್ಯ ಜಿಲ್ಲೆಯ ಹೂವಿನಕೊಪ್ಪಲು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ತನ್ನ ಗೆಳತಿ ಶ್ವೇತಾಳನ್ನು ವಿವಾಹವಾಗಿದ್ದರು. ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ.

ಈ ಅಂತರ್ಜಾತಿ ವಿವಾಹದ ವಿಷಯ ತಿಳಿದ ಗ್ರಾಮದ ಮುಖಂಡರು ಸಭೆ ಕರೆದು, ಗೋವಿಂದ ಶೆಟ್ಟಿ ಊರಿನ ಕುಲ ಕೆಡಿಸಿದ್ದಾನೆ ಎಂದು ಹೇಳಿ ಅವರ ತಲೆ ಬೋಳಿಸಿ, ಆತನ ಕುಟುಂಬಕ್ಕೆ 1.25 ಲಕ್ಷ ರೂಪಾಯಿ ದಂಡ ವಿಧಿಸಿ, ಗ್ರಾಮದಿಂದ ಬಹಿಷ್ಕರಿಸಿದ್ದರು.

ಇದನ್ನೂ ಓದಿ: ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಂಪತಿಗಳು ಮಳವಳ್ಳಿಯಲ್ಲಿ ಇದ್ದು ಜೀವನೋಪಾಯ ನಡೆಸುತ್ತಿದ್ದರು. ಆದರೆ, ಗೋವಿಂದ ಶೆಟ್ಟಿ ಅವರು, ತನ್ನ ಹೆಂಡತಿ ಒಕ್ಕಲಿಗರ ಜಾತಿ ಎಂದು ಸುಳ್ಳು ಹೇಳುತ್ತ ಆಗಾಗ ಊರಿಗೆ ಹೋಗಿ ತನ್ನ ತಂದೆತಾಯಿಗೆ ಭೇಟಿಯಾಗುತ್ತಿದ್ದರು. ಆದರೆ, ಫೆಬ್ರುವರಿಯಲ್ಲಿ ಗೋವಿಂದ ಶೆಟ್ಟಿ ಅವರ ತಾಯಿಯು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ಹೆಂಡತಿಯನ್ನೂ ಕುಣಗಲ್ಲಿಗೆ ಕರೆದುಕೊಂಡು ಬಂದಿದ್ದರು.

ಈ ವಿಚಾರ ಗ್ರಾಮದ ಮುಖಂಡರಿಗೆ ಕೆರಳಿಸಿದೆ, ಹಾಗಾಗಿ ಮತ್ತೆ ಅವರ ತಂದೆಯನ್ನು ಕರೆಸಿ ನಿನ್ನ ಮಗ ಹೆಂಡತಿಯನ್ನು ಮತ್ತೆ ಊರೊಳಗೆ ಕರೆದುಕೊಂಡು ಬಂದು ಕುಲ ಕೆಡಸಿದ್ದಾನೆ ಹಾಗಾಗಿ 3 ಲಕ್ಷ ರೂ. ದಂಡ ವಿಧಿಸಿ, ಮಾರ್ಚ್ 1ರೊಳಗೆ ಪಾವತಿಸಬೇಕು. ಒಂದು ವೇಳೆ ಅಷ್ಟರಲ್ಲಿ ಕೊಡದೇ ಹೋದಲ್ಲಿ 6 ಲಕ್ಷ ರೂ.ಗೆ ಹೆಚ್ಚಿಸಬೇಕಾಗುತ್ತದೆ ಎಂದಿದ್ದಾರೆ. ಅದರ ಜೊತೆಗೆ ಗ್ರಾಮಸ್ಥರೊಂದಿಗೆ ಮಾತನಾಡದಂತೆ ನಿಷೇಧ ಹೇರಿದ್ದು, ಅವರಿಗೆ ಗ್ರಾಮದ ಅಂಗಡಿಗಳಲ್ಲಿ ಯಾವುದೇ ಅಗತ್ಯ ವಸ್ತುಗಳನ್ನು ನೀಡದಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗೋವಿಂದ ಶೆಟ್ಟಿ ಅವರು ಮಾರ್ಚ್ 1ರಂದು ಡಿವೈಎಸ್‌ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಆದರೆ ಅವರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರಲಿಲ್ಲ. ಆಗ ಅವರು ಸಿಪಿಎಂ ಮುಖಂಡರಾದ ಕೃಷ್ಣೆಗೌಡರನ್ನು ಭೇಟಿಯಾಗಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ. ಆನಂತರದಲ್ಲಿ ದಲಿತ ಹಕ್ಕುಗಳ ಸಮಿತಿ ಹಾಗೂ ಸಿಪಿಎಂ ಪಕ್ಷ ಮಧ್ಯಪ್ರವೇಶ ಮಾಡಿ, ಪ್ರಕರಣದ ಬಗ್ಗೆ ಎಸ್‌ಪಿ ಅವರ ಗಮಮಕ್ಕೆ ತಂದಿದ್ದಾರೆ.

ಆನಂತರ ಡಿವೈಎಸ್‌ಪಿ ಕ್ರಮಕ್ಕೆ ಮುಂದಾಗಿ, ಮಾ.3ರಂದು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸಧ್ಯ ಸಮಾಜದ ಮುಖಂಡರಾದ ವೆಂಕಟಶೆಟ್ಟಿ, ಮಹದೇವ, ಮೋಂಡ ಶೆಟ್ಟಿ ಕನ್ನಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್ ಸೇರಿ 15ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಪ್ರಶ್ನಿಸಿದಾಗ, ತಾವು ಯಾವುದೇ ರೀತಿಯ ಬಹಿಷ್ಕಾರ ಹಾಕಿಲ್ಲ ಗೋವಿಂದರಾಜುವನ್ನು ಅವರ ತಂದೆಯೇ ಮನೆಗೆ ಸೇರಿಸುತ್ತಿಲ್ಲ. ಹಾಗಾಗಿ ತಂದೆಯ ಮೇಲೆ ದೂರು ನೀಡುವ ಬದಲು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಉಪ್ಪಾರ ಸಮುದಾಯದ ಯಜಮಾನರು ಪ್ರತ್ಯಾರೋಪ ಮಾಡಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

ಸಧ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಆ ದಂಪತಿಗೆ 1.25ಲಕ್ಷ ರೂ. ಹಣ ನೀಡಲಾಗಿದೆ. ಇನ್ನೂ ಗ್ರಾಮದಲ್ಲಿ ಅವರ ಸುರಕ್ಷತೆಗಾಗಿ ಪೊಲೀಸರು ಕ್ರಮವಹಿಸಿದ್ದು, ದಂಪತಿ ಗ್ರಾಮದಲ್ಲಿ ನೆಲೆಯೂರಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಮಾತನಾಡಿದ್ದು, ”ಕೊಳ್ಳೆಗಾಲ ಭಾಗದ ಗ್ರಾಮಗಳಲ್ಲಿ ಊರಿನ ಮುಖಂಡರ ಪಾರುಪತ್ಯ ಹೆಚ್ಚಾಗಿ ನಡೆಯುತ್ತದೆ. ಊರಿನ ಹಿಡಿತವನ್ನು ತಮ್ಮ ಕೈಯಲ್ಲಿ ಇಟ್ಟುಕೊಳ್ಳುವ ಮನಸ್ಥಿಯಲ್ಲಿ ಆ ಮುಖಂಡರು ಪಾಳೇಗಾರರಂತೆ ವರ್ತಿಸುತ್ತಾರೆ. ಈ ರೀತಿಯಲ್ಲಿ ಯಾರಾದರೂ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದರೆ, ಅವರಿಗೆ ದಂಡ ವಿಧಿಸುವುದು, ಬಹಿಷ್ಕಾರ ಹಾಕುವುದನ್ನು ಮಾಡುತ್ತಾರೆ” ಎಂದು ತಿಳಿಸಿದರು.

”ಈ ಭಾಗದಲ್ಲಿ ಇದು ಒಂದೇ ಪ್ರಕರಣ ಅಲ್ಲ, ಇಂತಹ ಬಹಳಷ್ಟು ಪ್ರಕರಣಗಳಿವೆ. ಇದೇ ಕುಣಿಗಲ್ಲ ಗ್ರಾಮದ 10-12 ಹುಡುಗರು ಬೇರೆ ಜಾತಿಯ ಹುಡುಗಿಯರನ್ನು ಮದುವೆಯಾಗಿದ್ದಾರೆ. ಅವರೆಲ್ಲಾ ಈ ಪಾಳೆಗಾರಿಕೆ ಮನಸ್ಥಿತಿಯವರ ದಂಡ ಮತ್ತು ಶಿಕ್ಷೆಗೆ ಹೆದರಿ, ಊರಿಗೂ ಬರದೇ ಬೇರೆ ಬೇರೆ ಕಡೆಗಳಲ್ಲಿ ಬದುಕು ನಡೆಸುತ್ತಿದ್ದಾರಂತೆ. ಇದು ಪೊಲೀಸರಿಗೂ ಗೊತ್ತಿದೆ, ಅವರ ವಿರುದ್ಧ ದೂರು ನೀಡಲು ಯಾರೂ ಮುಂದೆ ಬರುವುದಿಲ್ಲ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

”ಕೊಳ್ಳೆಗಾಲ ತಾಲೂಕಿನಲ್ಲಿ ಯಾರೆಲ್ಲ ಈ ಪಾಳೆಗಾರಿಕೆ ನಡೆಸುತ್ತಿದ್ದಾರೋ ಅಂತವರ ವಿರುದ್ಧ ಸಿಪಿಎಂ ಪಕ್ಷದ ವತಿಯಿಂದ ಇನ್ನೆರಡು ದಿನಗಳಲ್ಲಿ ಹೋರಾಟ ನಡೆಸುತ್ತೇವೆ. ಅವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...