Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...